ಬೆಳಗಾವಿ: ಧಾರ್ಮಿಕ ಆಚರಣೆಗಳ ವಿಷಯದಲ್ಲಿ ಎಲ್ಲಾ ರಾಜಕಾರಣಿಗಳಿಗಿಂತ ಡಿಫ್ರೆಂಟ್ ಆಗಿ ಗುರುತಿಸಿಕೊಳ್ಳುವ ಬೆಳಗಾವಿಯ ಸಾಹುಕಾರ ಸತೀಶ್ ಜಾರಕಿಹೊಳಿ, ಈ ಬಾರಿ ತಮ್ಮ ಹೊಸ ಕಾರನ್ನು ಸ್ಮಶಾನದಿಂದ ಚಾಲನೆ ಮಾಡುತ್ತಿದ್ದಾರೆ.
ಜುಲೈ 13ರಂದು ಬೆಳಗಾವಿಯ ಸದಾಶಿವನಗರದಲ್ಲಿರುವ ಸ್ಮಶಾನದಲ್ಲಿ ತಮ್ಮ ನೂತನ ಇನ್ನೋವಾ ಕಾರನ್ನು ಚಾಲನೆ ಮಾಡಲಿದ್ದಾರೆ.
ಸಾಮಾನ್ಯವಾಗಿ ಕಾರು, ಬೈಕ್, ಲಾರಿ ಸೇರಿದಂತೆ ಹೊಸ ವಾಹನಗಳನ್ನು ಪ್ರಸಿದ್ಧ ದೇವಸ್ಥಾನಗಳಲ್ಲಿ ಪೂಜೆ ಸಲ್ಲಿಸಿ, ಕುಂಬಳ ಕಾಯಿ ಒಡೆದು ಸಿಹಿ ಹಂಚಿ ಚಾಲನೆ ಮಾಡಲಾಗುತ್ತದೆ. ಆದರೆ, ಈ ವಿಚಾರದಲ್ಲಿ ಮಾಜಿ ಸಚಿವ ಸತೀಶ್ ಜಾರಕಿಹೊಳಿ ಡಿಫರೆಂಟ್. ಎಲ್ಲರೂ ಹೊಸ ವಾಹನಕ್ಕೆ ಪೂಜೆ ಮಾಡಿಸಿದರೆ, ಸತೀಶ್ ಜಾರಕಿಹೊಳಿ ಮೌಢ್ಯದ ವಿರುದ್ಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಾರೆ.
ಈ ಬಾರಿ ಮಹಾಮಾರಿ ಕೊರೊನಾ ಅಟ್ಟಹಾಸ ಇರುವ ಕಾರಣ ಅಭಿಮಾನಿಗಳು ಸೇರದಂತೆ ಮನವಿ ಮಾಡಲಾಗಿದೆ. ಪ್ರತಿ ವರ್ಷ ಡಿಸೆಂಬರ್ 6ರ ಅಂಬೇಡ್ಕರ್ ಪರಿನಿರ್ವಾಣದ ದಿನದಂದು ಸತೀಶ್ ಜಾರಕಿಹೊಳಿ ಹಗಲು-ರಾತ್ರಿ ಸ್ಮಶಾನದಲ್ಲೇ ವಿಶೇಷ ಕಾರ್ಯಕ್ರಮಗಳನ್ನು ನಡೆಸಿ ಅಲ್ಲೇ ಸಾಮೂಹಿಕವಾಗಿ ಊಟ ಸವಿಯುತ್ತಾರೆ. ಗ್ರಹಣಗಳ ಸಂದರ್ಭದಲ್ಲೂ ಮೌಢ್ಯ ನಿವಾರಣೆಗೆ ಸ್ಮಶಾನದಲ್ಲಿ ಭೋಜನ ಸೇವಿಸಿ ಜಾಗೃತಿ ಮೂಡಿಸುತ್ತಾ ಬಂದಿದ್ದಾರೆ.
ಆರ್ ಸಿಬಿ ಕಲಿಗಳ ಜತೆ ಕನ್ನಡಿಗರ ನಂದಿನಿ ದರ್ಬಾರ್ ಐಪಿಎಲ್ ಮೂಲಕ ವಿಶ್ವಮಟ್ಟಕ್ಕೆ ಲಗ್ಗೆ ಇಡಲು ಕೆಎಂಎಫ್ ಮಾಸ್ಟರ್ ಪ್ಲಾನ್
ಬೆಂಗಳೂರು: ಕರ್ನಾಟಕದ ಹೆಮ್ಮೆಯ ಪ್ರತೀಕವಾಗಿರುವ ಕೆಎಂಎಫ್ ನ ನಂದಿನಿ ಬ್ರ್ಯಾಂಡ್ ಇದೀಗ ಕ್ರಿಕೆಟ್ ಜಗತ್ತಿನ ರಣಕಣಕ್ಕೆ ಇಳಿದಿದೆ. ಜಗತ್ತಿನಾದ್ಯಂತ ಕೋಟ್ಯಂತರ ಅಭಿಮಾನಿಗಳನ್ನು ಹೊಂದಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು...








