Savarkar | ಕಾಂಗ್ರೆಸ್ ಕಚೇರಿಗೆ ಸಾವರ್ಕರ್ ಫೋಟೋ – ಬಿಜೆಪಿ ಮುಖಂಡನ ವಿರುದ್ಧ ದೂರು
ವಿಜಯಪುರ : ರಾಜ್ಯದಲ್ಲಿ ಸಾವರ್ಕರ್ ಪಾಲಿಟಿಕ್ಸ್ ಶುರುವಾಗಿದ್ದು, ಕಾಂಗ್ರೆಸ್ – ಬಿಜೆಪಿ ಕಾರ್ಯಕರ್ತರ ನಡುವೆ ರಾಜಕೀಯ ಮೇಲಾಟ ನಡೆಯುತ್ತಿದೆ.
ವಿಜಯಪುರ ಜಿಲ್ಲಾ ಕಾಂಗ್ರೆಸ್ ಕಚೇರಿಗೆ ಬಿಜೆಪಿ ಯುವ ಮೋರ್ಚಾ ಜಿಲ್ಲಾಧ್ಯಕ್ಷ ಸಾವರ್ಕರ್ ಫೋಟೋ ಅಂಟಿಸಿದ್ದಾರೆ.
ಈ ಸಂಬಂಧ ಫೋಟೋ ಅಂಟಿಸಿದ ಬಿಜೆಪಿ ಯುವ ಮೋರ್ಚಾ ಜಿಲ್ಲಾಧ್ಯಕ್ಷ ವಿರುದ್ಧ ಕೇಸ್ ದಾಖಲಾಗಿದೆ.
ಕಾಂಗ್ರೆಸ್ ಕಚೇರಿಯ ಗೋಡೆಗೆ ಸಾವರ್ಕರ್ ಫೋಟೋ ಅಂಟಿಸಿದ್ದ ಬಸವರಾಜ ಹೂಗಾರ ವಿರುದ್ಧ ಯೂತ್ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಸಿದ್ದು ಛಾಯಾಗೋಳ್ ದೂರು ದಾಖಲಾಸಿದ್ದಾರೆ.
![Savarkar photo to Congress office Complaint against BJP leader saakshatv](http://saakshatv.com/wp-content/uploads/2020/11/congresss-min-300x235.jpg)
ಬಿಜೆಪಿ ಜಿಲ್ಲಾಧ್ಯಕ್ಷ ಆರ್ ಎಸ್ ಪಾಟೀಲ್ ಕೂಚಬಾಳ ನೇತೃತ್ವದಲ್ಲಿ ಕಾಂಗ್ರೆಸ್ ಕಚೇರಿಗೆ ಮುತ್ತಿಗೆ ಹಾಕಿ ಸಾವರ್ಕರ್ ಫೋಟೋ ಅಂಟಿಸಲಾಗಿದೆ. ಈ ಸಂಬಂಧ ಜಲನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಈ ಸಂಬಂಧ ಚಿತ್ರದುರ್ಗದಲ್ಲಿ ಮಾಜಿ ಸಚಿವ ಎಂ.ಬಿ.ಪಾಟೀಲ್ ಪ್ರತಿಕ್ರಿಯೆ ನೀಡಿದ್ದು, ನಿನ್ನೆ ರಾತ್ರಿ ಹೋಗಿ ವಿಜಯಪುರದ ಕಾಂಗ್ರೆಸ್ ಕಚೇರಿಗೆ ಸಾವರ್ಕರ್ ಫೋಟೋ ಹಚ್ಚಿದ್ದಾರೆ. ಕತ್ತಲಲ್ಲಿ ಹೋಗಿ ಪೋಸ್ಟರ್ ಹಚ್ಚೋದು ಅದೇನ್ ದೊಡ್ಡ ಕೆಲಸನಾ ಎಂದು ಕಿಡಿಕಾರಿದ್ದಾರೆ.