ADVERTISEMENT
Saturday, May 23, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಕಾವು ಪಡೆದುಕೊಳ್ಳುತ್ತಿದೆ #Save Lakshadveep ಅಭಿಯಾನ..!

Namratha Rao by Namratha Rao
May 29, 2021
in Newsbeat, Saaksha Special, ಎಸ್ ಸ್ಪೆಷಲ್
Share on FacebookShare on TwitterShare on WhatsappShare on Telegram

ಕಾವು ಪಡೆದುಕೊಳ್ಳುತ್ತಿದೆ #Save Lakshadveep ಅಭಿಯಾನ..!

ಕಳೆದ ಕೆಲವು ದಿನಗಳಿಂದ #Save Lakshadweepa ಎಂಬುದು ಟ್ರೆಂಡಿಂಗ್ ನಲ್ಲಿದೆ. ಅರಬ್ಬೀ ಸಮುದ್ರದಲ್ಲಿನ ಪುಟ್ಟ ದ್ವೀಪ ಸಮೂಹವನ್ನು ಉಳಿಸಿ ಎಂಬ ಅಭಿಯಾನಕ್ಕೆ ಸಾಕಷ್ಟು ಸೆಲೆಬ್ರಿಟಿಗಳು ಸಹ ಕೈ ಜೋಡಿಸಿದ್ದಾರೆ. ಭಾರತದ ದಕ್ಷಿಣದಲ್ಲಿರುವ ಕೇರಳದ ಕರಾವಳಿಯಿಂದ 300 ಕಿಲೋಮೀಟರ್ ದೂರದಲ್ಲಿರುವ ಅರೇಬಿಯನ್ ಸಮುದ್ರದಲ್ಲಿದೆ, ಭಾರತದ ಅತ್ಯಂತ ಚಿಕ್ಕ ಕೇಂದ್ರಾಡಳಿತ ಪ್ರದೇಶವಾದ ಲಕ್ಷದ್ವೀಪ ವಿಶ್ವದ ಅತ್ಯಂತ ಸುಂದರವಾದ ತಾಣಗಳಲ್ಲಿ ಒಂದಾಗಿದೆ.

Related posts

ಸಚಿವ ಸಂಪುಟ ಪುನಾರಚನೆ ಸದ್ದು: ದೆಹಲಿಗೆ ಧಾವಿಸಿದ ಸಚಿವಾಕಾಂಕ್ಷಿಗಳು

ಸಚಿವ ಸಂಪುಟ ಪುನಾರಚನೆ ಸದ್ದು: ದೆಹಲಿಗೆ ಧಾವಿಸಿದ ಸಚಿವಾಕಾಂಕ್ಷಿಗಳು

May 23, 2026
‘ಕಾಕ್ರೋಚ್ ಜನತಾ ಪಕ್ಷ’ ಸೋಷಿಯಲ್ ಮೀಡಿಯಾದಲ್ಲಿ ಟ್ರೆಂಡ್: 20.2M ಫಾಲೋವರ್ಸ್!

‘ಕಾಕ್ರೋಚ್ ಜನತಾ ಪಕ್ಷ’ ಸೋಷಿಯಲ್ ಮೀಡಿಯಾದಲ್ಲಿ ಟ್ರೆಂಡ್: 20.2M ಫಾಲೋವರ್ಸ್!

May 23, 2026

ಈ ದ್ವೀಪಗಳಿಗೆ ಭೇಟಿ ನೀಡುವ ಪ್ರವಾಸಿಗರಿಗೆ ಮೂಲಭೂತ ಸೌಲಭ್ಯಗಳು ಸಹ ಲಭ್ಯವಿರಲಿಲ್ಲ. ಪ್ರಧಾನಿ ನರೇಂದ್ರ ಮೋದಿ ಅವರ ಆಡಳಿತವು ಲಕ್ಷದ್ವೀಪದ ಭವಿಷ್ಯಕ್ಕೆ ವ್ಯವಸ್ಥಿತ ಮತ್ತು ಯೋಜಿತ ರೀತಿಯಲ್ಲಿ ಅಡಿಪಾಯ ಹಾಕಲಾಗಿದೆ. ಆದರೆ ಸದ್ಯ ಲಕ್ಷದ್ವೀಪದ ಮಹತ್ವಾಕಾಂಕ್ಷೆಯ ಅಭಿವೃದ್ಧಿ ಯೋಜನೆಯ ವ್ಯವಹಾರಗಳ ಚುಕ್ಕಾಣಿ ಹಿಡಿದ ಆಡಳಿತಾಧಿಕಾರಿ ಪ್ರಫುಲ್ ಖೋಡಾ ಪಟೇಲ್ ಅವರು ಆದೇಶಿಸಿದ ಕೆಲವು ನಿಯಮಗಳನ್ನು ವಿರೋಧಿಸಿ ಈ ಅಭಿಯಾನವನ್ನು ಆರಂಭಿಸಲಾಗಿದೆ.

ಪ್ರಫುಲ್‌ ಪಟೇಲ್‌ ಅವರನ್ನು ಕೇಂದ್ರ ಗೃಹ ಸಚಿವ ಅಮಿತ್‌ ಶಾ ನೇಮಕ ಮಾಡಿದ್ದಾರೆ. ಪಟೇಲ್‌ ಗುಜರಾತ್‌ನ ಮಾಜಿ ಗೃಹ ಸಚಿವರಾಗಿದ್ದಾರೆ. ಸಾಮಾನ್ಯವಾಗಿ ಆಡಳಿತಾಧಿಕಾರಿಯಾಗಿ ಹಾಲಿ ಅಥವಾ ಮಾಜಿ ಅಧಿಕಾರಿಗಳನ್ನು ನೇಮಕ ಮಾಡುವುದು ವಾಡಿಕೆ. ಆದರೆ ಮೊದಲ ಬಾರಿ ಸಂಪ್ರದಾಯ ಮುರಿದು ರಾಜಕಾರಣಿಯನ್ನು ಆಡಳಿತಾಧಿಕಾರಿಯಾಗಿ ನೇಮಕ ಮಾಡಲಾಗಿದೆ.

ಲಕ್ಷದ್ವೀಪದಲ್ಲಿನ ಶಾಂತಿ ಮತ್ತು ಸಂಸ್ಕೃತಿಯನ್ನು ಆಡಳಿತಾಧಿಕಾರಿ ಪ್ರಫುಲ್‌ ಪಟೇಲ್‌ ನಿರ್ನಾಮ ಮಾಡುತ್ತಿದ್ದಾರೆ. ಸಮಾಜಘಾತುಕ ಚಟುವಟಿಕೆ ತಡೆ ಕಾಯಿದೆಯಂತಹ ಕಾಯಿದೆಗಳ ಮೂಲಕ ಜನರನ್ನು ವಿನಾಕಾರಣ ಹಿಂಸಿಸುತ್ತಿದ್ದಾರೆ. ಪಂಚಾಯಿತಿ ಅಧಿಕಾರವನ್ನು ಹಿಂಪಡೆದಿದ್ದಾರೆ. ಮೀನುಗಾರರ ಮನೆಗಳನ್ನು ಧ್ವಂಸ ಮಾಡುತ್ತಿದ್ದಾರೆ. ಹೀಗಾಗಿ ರಾಷ್ಟ್ರಪತಿಯವರು ಆಡಳಿತಾಧಿಕಾರಿಯನ್ನು ತಕ್ಷಣ ವಾಪಸ್‌ ಕರೆಸಿಕೊಳ್ಳಬೇಕು ಎಂಬ ಕೂಗು ಕೇಳಿಬರುತ್ತಿದೆ.

ಇನ್ನು ಲಕ್ಷದ್ವೀಪದಲ್ಲಿ ೮೫% ಕ್ಕಿಂತಲೂ ಅಧಿಕ‌ ಇಸ್ಲಾಂ ಧರ್ಮೀಯರು ವಾಸವಾಗಿದ್ದಾರೆ. ಹೀಗಿರುವಾಗ ನೂತನವಾಗಿ ಜಾರಿಮಾಡಲಾದ ಗೋಮಾಂಸ ನಿಷೇಧ ನಿಯಮ ಅಲ್ಲಿನವರ ಕೆಂಗಣ್ಣಿಗೆ ಗುರಿಯಾಗಿದೆ. ಇದಲ್ಲದೇ, ಲಕ್ಷದ್ವೀಪ ಸುಧಾರಣೆಗಾಗಿ ಮೂಲ‌ನಿವಾಸಿಗಳ ಭೂಮಿಯನ್ನು ಸ್ವಾಧೀನಪಡಿಸಲಾಗುತ್ತಿದೆ. ಹೀಗಾಗಿ ಪಟೇಲ್ ಸ್ಥಳೀಯರ ಆಕ್ರೋಶಕ್ಕೆ ಕಾರಣವಾಗಿದ್ದಾರೆ. ಈ ಎಲ್ಲ ಕಾರಣಗಳಿಂದ ಸೇವ್ ಲಕ್ಷದ್ವೀಪ ಅಭಿಯಾನ ಆರಂಭವಾಗಿದೆ.

ಹೀಗಾಗಿ ಲಕ್ಷದ್ವೀಪದಲ್ಲಿ ಭಾರಿ ವಿರೋಧಕ್ಕೆ ಗುರಿಯಾಗಿರುವ ವಿವಾದಿತ ಆಡಳಿತಾಧಿಕಾರಿ ಪ್ರಫುಲ್‌ ಪಟೇಲ್‌ ವಜಾಕ್ಕೆ ಹೆಚ್ಚಿನ ಒತ್ತಡ ಕೇಳಿಬರುತ್ತಿದೆ. ಆಡಳಿತಾಧಿಕಾರಿಯನ್ನು ವಾಪಸ್‌ ಕರೆಸಿಕೊಳ್ಳಬೇಕು ಎಂದು ಕಾಂಗ್ರೆಸ್‌ ಆಗ್ರಹಿಸಿದೆ. ಈ ಸಂಬಂಧ ರಾಷ್ಟ್ರಪತಿ ರಾಮನಾಥ್‌ ಕೋವಿಂದ್‌ ಅವರಿಗೆ ಕಾಂಗ್ರೆಸ್‌ ಪತ್ರ ಬರೆದಿದೆ.

Tags: ilandlakshadweepatwitter
ShareTweetSendShare
Join us on:

Related Posts

ಸಚಿವ ಸಂಪುಟ ಪುನಾರಚನೆ ಸದ್ದು: ದೆಹಲಿಗೆ ಧಾವಿಸಿದ ಸಚಿವಾಕಾಂಕ್ಷಿಗಳು

ಸಚಿವ ಸಂಪುಟ ಪುನಾರಚನೆ ಸದ್ದು: ದೆಹಲಿಗೆ ಧಾವಿಸಿದ ಸಚಿವಾಕಾಂಕ್ಷಿಗಳು

by Shwetha
May 23, 2026
0

ಕರ್ನಾಟಕ ಕಾಂಗ್ರೆಸ್ ಸರ್ಕಾರದಲ್ಲಿ ಸಚಿವ ಸಂಪುಟ ಪುನಾರಚನೆ ಕುರಿತ ರಾಜಕೀಯ ಚರ್ಚೆಗಳು ತೀವ್ರಗೊಂಡಿರುವ ನಡುವೆಯೇ, ಸಚಿವಾಕಾಂಕ್ಷಿ ಶಾಸಕರು ಹಾಗೂ ಹಾಲಿ ಸಚಿವರು ದೆಹಲಿಯತ್ತ ಮುಖ ಮಾಡಿದ್ದಾರೆ. ಕಾಂಗ್ರೆಸ್...

‘ಕಾಕ್ರೋಚ್ ಜನತಾ ಪಕ್ಷ’ ಸೋಷಿಯಲ್ ಮೀಡಿಯಾದಲ್ಲಿ ಟ್ರೆಂಡ್: 20.2M ಫಾಲೋವರ್ಸ್!

‘ಕಾಕ್ರೋಚ್ ಜನತಾ ಪಕ್ಷ’ ಸೋಷಿಯಲ್ ಮೀಡಿಯಾದಲ್ಲಿ ಟ್ರೆಂಡ್: 20.2M ಫಾಲೋವರ್ಸ್!

by Shwetha
May 23, 2026
0

ಸೋಶಿಯಲ್ ಮೀಡಿಯಾದಲ್ಲಿ ಇದೀಗ ‘ಕಾಕ್ರೋಚ್ ಜನತಾ ಪಾರ್ಟಿ (CJP)’ ಭಾರೀ ಟ್ರೆಂಡ್ ಸೃಷ್ಟಿಸಿದೆ. ಕೆಲ ಯುವ ವಿಮರ್ಶಕರನ್ನು ಉದ್ದೇಶಿಸಿ CJI ನೀಡಿದ್ದ ‘ಕಾಕ್ರೋಚ್’ ಹೇಳಿಕೆಗೆ ಪ್ರತಿಕ್ರಿಯೆಯಾಗಿ ಹುಟ್ಟಿಕೊಂಡ...

ಮಂತ್ರಿ ಆಗೋಕೆ ₹200 ಕೋಟಿಯ ಬೇಡಿಕೆ – ಛಲವಾದಿ ನಾರಾಯಣಸ್ವಾಮಿ ಸ್ಫೋಟಕ ಆರೋಪ

ಮನೆ ನಿರ್ಮಿಸಲು ಜಮೀನು ಪಡೆದು ಸ್ಟೇಡಿಯಂ ಕಟ್ಟುವುದು ಎಷ್ಟು ಸರಿ: ಸರ್ಕಾರದ ವಿರುದ್ಧ ಛಲವಾದಿ ನಾರಾಯಣಸ್ವಾಮಿ ತೀವ್ರ ವಾಗ್ದಾಳಿ

by Shwetha
May 23, 2026
0

ಬೆಂಗಳೂರು: ಆನೇಕಲ್ ಸಮೀಪ ಕರ್ನಾಟಕ ಗೃಹ ಮಂಡಳಿ ಮೂಲಕ ರೈತರ ಫಲವತ್ತಾದ ಜಮೀನು ಪಡೆದು ಅಲ್ಲಿ ಕ್ರಿಕೆಟ್ ಸ್ಟೇಡಿಯಂ ನಿರ್ಮಾಣ ಮಾಡಲು ಮುಂದಾಗಿರುವ ರಾಜ್ಯ ಸರ್ಕಾರದ ನಿರ್ಧಾರಕ್ಕೆ...

ದಳಪತಿ ವಿಜಯ್ ಸೋಷಿಯಲ್ ಇಂಜಿನಿಯರಿಂಗ್: ಸಚಿವ ಸಂಪುಟದಲ್ಲಿ ಬ್ರಾಹ್ಮಣರಿಗೆ ಎರಡು ಮತ್ತು ದಲಿತರಿಗೆ ಏಳು ಸ್ಥಾನ

ದಳಪತಿ ವಿಜಯ್ ಸೋಷಿಯಲ್ ಇಂಜಿನಿಯರಿಂಗ್: ಸಚಿವ ಸಂಪುಟದಲ್ಲಿ ಬ್ರಾಹ್ಮಣರಿಗೆ ಎರಡು ಮತ್ತು ದಲಿತರಿಗೆ ಏಳು ಸ್ಥಾನ

by Shwetha
May 23, 2026
0

ತಮಿಳುನಾಡು ರಾಜಕೀಯದಲ್ಲಿ ಹೊಸ ಸಂಚಲನ ಮೂಡಿಸಿರುವ ದಳಪತಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಸರ್ಕಾರ, ತನ್ನ ಸಚಿವ ಸಂಪುಟ ರಚನೆಯಲ್ಲಿ ಸಾಮಾಜಿಕ ನ್ಯಾಯದ ಮಂತ್ರ...

ದುಬಾರೆ ದುರಂತಕ್ಕೆ ತಿರುವು: ಇಬ್ಬರು ಅರಣ್ಯಾಧಿಕಾರಿಗಳ ವಿರುದ್ಧ ಕೇಸ್

ದುಬಾರೆ ದುರಂತಕ್ಕೆ ತಿರುವು: ಇಬ್ಬರು ಅರಣ್ಯಾಧಿಕಾರಿಗಳ ವಿರುದ್ಧ ಕೇಸ್

by Shwetha
May 23, 2026
0

ಕೊಡಗಿನ ದುಬಾರೆ ಆನೆ ಶಿಬಿರದಲ್ಲಿ ಪ್ರವಾಸಿ ಮಹಿಳೆ ಹಾಗೂ ಸಾಕಾನೆ ಸಾವನ್ನಪ್ಪಿದ ದುರ್ಘಟನೆಗೆ ಸಂಬಂಧಿಸಿದಂತೆ ಇಬ್ಬರು ಅರಣ್ಯ ಅಧಿಕಾರಿಗಳ ವಿರುದ್ಧ ಉಪ ಲೋಕಾಯುಕ್ತರು ಸ್ವಯಂಪ್ರೇರಿತವಾಗಿ ಪ್ರಕರಣ ದಾಖಲಿಸಿಕೊಂಡಿದ್ದಾರೆ....

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram