ADVERTISEMENT
Wednesday, January 21, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home ರಾಜ್ಯ

ಗ್ರಾಮೀಣ ಬದುಕಿನ ಜೀವನಾಡಿ ನರೇಗಾ ಉಳಿಸಿ; ಕೇಂದ್ರದ ವಿರುದ್ಧ ಪಂಚಾಯ್ತಿ ಮಟ್ಟದಿಂದಲೇ ಬೃಹತ್ ಹೋರಾಟಕ್ಕೆ ಸಿಎಂ, ಡಿಸಿಎಂ ರಣಕಹಳೆ.

Save NREGA, the lifeblood of rural life; CM, DCM launch massive fight against the Center from the Panchayat level

Shwetha by Shwetha
December 30, 2025
in ರಾಜ್ಯ, Newsbeat, State
Share on FacebookShare on TwitterShare on WhatsappShare on Telegram

ಬೆಂಗಳೂರು: ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯ (MGNREGA) ಸ್ವರೂಪ ಬದಲಾವಣೆ ಹಾಗೂ ಹೆಸರು ಬದಲಾವಣೆಗೆ ಮುಂದಾಗಿರುವ ಕೇಂದ್ರ ಸರ್ಕಾರದ ನಡೆಯನ್ನು ತೀವ್ರವಾಗಿ ಖಂಡಿಸಿರುವ ರಾಜ್ಯ ಕಾಂಗ್ರೆಸ್ ಘಟಕ, ಇದರ ವಿರುದ್ಧ ಹಳ್ಳಿ ಹಳ್ಳಿಯಿಂದಲೇ ಹೋರಾಟ ರೂಪಿಸಲು ಸಜ್ಜಾಗಿದೆ. ನರೇಗಾ ಬಚಾವ್‌ ಘೋಷವಾಕ್ಯದಡಿ ಜನವರಿ 5ರಿಂದ ರಾಜ್ಯವ್ಯಾಪಿ ಬೃಹತ್ ಆಂದೋಲನವನ್ನು ಆರಂಭಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಪಕ್ಷದ ಕಾರ್ಯಕರ್ತರಿಗೆ ಕರೆ ನೀಡಿದ್ದಾರೆ.

ಕೆಪಿಸಿಸಿ ಕಚೇರಿಯ ಭಾರತ್ ಜೋಡೋ ಭವನದಲ್ಲಿ ನಡೆದ ಕಾಂಗ್ರೆಸ್ ಸಂಸ್ಥಾಪನಾ ದಿನಾಚರಣೆಯ ವೇಳೆ ಮಾತನಾಡಿದ ರಾಜ್ಯ ನಾಯಕರು, ಕೇಂದ್ರದ ಬಿಜೆಪಿ ಸರ್ಕಾರವು ಗ್ರಾಮೀಣ ಆರ್ಥಿಕತೆಯನ್ನೇ ಬುಡಮೇಲು ಮಾಡಲು ಸಂಚು ರೂಪಿಸಿದೆ ಎಂದು ಗಂಭೀರ ಆರೋಪ ಮಾಡಿದರು.

Related posts

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ವಸ್ತ್ರ ಸಂಹಿತೆ ಜಾರಿ: ಸಾಂಪ್ರದಾಯಿಕ ಉಡುಗೆ ಕಡ್ಡಾಯ

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ವಸ್ತ್ರ ಸಂಹಿತೆ ಜಾರಿ: ಸಾಂಪ್ರದಾಯಿಕ ಉಡುಗೆ ಕಡ್ಡಾಯ

January 21, 2026
ಫೈನಲ್‌ಗೆ ಎಂಟ್ರಿ ಪಡೆಯಲು RCBಗೆ ಇನ್ನೆಷ್ಟು ಗೆಲುವು ಬೇಕು?

ಫೈನಲ್‌ಗೆ ಎಂಟ್ರಿ ಪಡೆಯಲು RCBಗೆ ಇನ್ನೆಷ್ಟು ಗೆಲುವು ಬೇಕು?

January 21, 2026

ಬಿಜೆಪಿಯ ರಾಮ ಬೇರೆ, ದಶರಥ ರಾಮನೇ ಬೇರೆ: ಸಿಎಂ ವಾಗ್ದಾಳಿ

ಕಾರ್ಯಕ್ರಮದಲ್ಲಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯನವರು, ಕೇಂದ್ರ ಸರ್ಕಾರವು ಮಹಾತ್ಮ ಗಾಂಧಿಯವರ ಹೆಸರನ್ನು ಅಳಿಸಿಹಾಕುವ ದುರುದ್ದೇಶದಿಂದ ನರೇಗಾ ಯೋಜನೆಗೆ ವಿ ಬಿ ಜಿ ರಾಮ್ ಜಿ ಎಂದು ಮರುನಾಮಕರಣ ಮಾಡಲು ಹೊರಟಿದೆ. ಈ ಬಗ್ಗೆ ಸಂಸತ್ತಿನಲ್ಲಿ ಯಾವುದೇ ಚರ್ಚೆಯನ್ನೂ ನಡೆಸಿಲ್ಲ. ಇವರು ಹೇಳುತ್ತಿರುವ ರಾಮ ದಶರಥನ ಮಗ ರಾಮನಲ್ಲ, ಇದು ಬಿಜೆಪಿಯ ರಾಮ ಎಂದು ವ್ಯಂಗ್ಯವಾಡಿದರು.

ರಾಷ್ಟ್ರಪಿತ ಮಹಾತ್ಮ ಗಾಂಧಿಯವರ ಹೆಸರನ್ನು ಶಾಶ್ವತವಾಗಿ ಅಳಿಸಲು ಯಾರಿಂದಲೂ ಸಾಧ್ಯವಿಲ್ಲ. ಹೆಸರು ಬದಲಾವಣೆ ನಿರ್ಧಾರವು ಕೇಂದ್ರ ಸಚಿವ ಸಂಪುಟದಲ್ಲಿ ಚರ್ಚೆಯಾಗಿಲ್ಲ, ಸಂಬಂಧಪಟ್ಟ ಸಚಿವರಿಗೂ ಇದರ ಅರಿವಿಲ್ಲ. ಇದೆಲ್ಲವೂ ಪ್ರಧಾನಿ ಕಚೇರಿಯಿಂದಲೇ ನೇರವಾಗಿ ಬಂದಿರುವ ಆದೇಶವಾಗಿದೆ. ಅಧಿಕಾರ ಹಿಡಿಯಲು ಮತಗಳ್ಳತನ ಸೇರಿದಂತೆ ಯಾವುದೇ ಕೀಳುಮಟ್ಟಕ್ಕೆ ಇಳಿಯುವ ಬಿಜೆಪಿ, ಈಗ ಬಡವರ ಅನ್ನ ಕಸಿದುಕೊಳ್ಳುವ ಹುನ್ನಾರ ನಡೆಸಿದೆ. ಹೊಸ ಕಾಯ್ದೆಯ ಮೂಲಕ ರಾಜ್ಯಗಳ ಮೇಲೆ ಆರ್ಥಿಕ ಹೊರೆಯನ್ನು ಹೇರುತ್ತಿದೆ. ಇದನ್ನು ನಾವೆಲ್ಲರೂ ಒಗ್ಗೂಡಿ ವಿಫಲಗೊಳಿಸಬೇಕಿದೆ ಎಂದು ಸಿಎಂ ಕರೆ ನೀಡಿದರು.

ಯೋಜನೆಯ ಹತ್ಯೆಗೆ ಮುಂದಾದ ಕೇಂದ್ರ: ಡಿಕೆಶಿ ಆಕ್ರೋಶ

ಕೆಪಿಸಿಸಿ ಅಧ್ಯಕ್ಷ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಮಾತನಾಡಿ, ಮಹಾತ್ಮ ಗಾಂಧಿ ಅವರು ಕಾಂಗ್ರೆಸ್ ಚುಕ್ಕಾಣಿ ಹಿಡಿದು 101 ವರ್ಷಗಳಾಗುತ್ತಿವೆ. ಇಂತಹ ಐತಿಹಾಸಿಕ ಸಂದರ್ಭದಲ್ಲಿ ಅವರ ಹೆಸರಿನ ಯೋಜನೆಯನ್ನು ಕೇಂದ್ರ ಸರ್ಕಾರ ಹತ್ಯೆ ಮಾಡಲು ಮುಂದಾಗಿದೆ. ಯೋಜನೆಯಡಿ ಅನುದಾನ ಹಂಚಿಕೆಯಲ್ಲಿ 60:40 ಅನುಪಾತದ ಬದಲಾವಣೆ ತಂದಿರುವುದು ರಾಜ್ಯಗಳಿಗೆ ಮರಣಶಾಸನವಾಗಲಿದೆ. ಬಿಜೆಪಿ ಆಡಳಿತವಿರುವ ರಾಜ್ಯಗಳಲ್ಲೂ ಇದನ್ನು ಜಾರಿ ಮಾಡಲು ಸಾಧ್ಯವಿಲ್ಲದ ಪರಿಸ್ಥಿತಿಯಿದೆ ಎಂದು ಕಿಡಿಕಾರಿದರು.

ಪಂಚಾಯ್ತಿ ಮಟ್ಟದಲ್ಲಿ ಕಾವಲು ಪಡೆ ರಚನೆ

ಹೋರಾಟದ ರೂಪುರೇಷೆಗಳನ್ನು ವಿವರಿಸಿದ ಡಿಕೆಶಿ, ಕೇವಲ ಪತ್ರಿಕಾ ಹೇಳಿಕೆಗಳಿಗೆ ಸೀಮಿತವಾಗದೆ ಪಂಚಾಯ್ತಿ ಮಟ್ಟದಿಂದಲೇ ಸಂಘಟಿತ ಹೋರಾಟ ರೂಪಿಸಲಾಗುವುದು. ಇದಕ್ಕಾಗಿ ಗ್ಯಾರಂಟಿ ಸಮಿತಿ, ಬೆಸ್ಕಾಂ ಹಾಗೂ ಆರೋಗ್ಯ ಸಮಿತಿಗಳ ಸದಸ್ಯರನ್ನು ಒಳಗೊಂಡ 150-200 ಜನರ ಪಡೆಯನ್ನು ಬಳಸಿಕೊಳ್ಳಲಾಗುವುದು. ರಾಜ್ಯಸಭಾ ಸದಸ್ಯ ಜಿ.ಸಿ. ಚಂದ್ರಶೇಖರ್ ಅವರ ನೇತೃತ್ವದಲ್ಲಿ ವೀಕ್ಷಕರನ್ನು ನೇಮಿಸಿ, ಹೋರಾಟದ ಉಸ್ತುವಾರಿ ನೋಡಿಕೊಳ್ಳಲಾಗುವುದು ಎಂದು ತಿಳಿಸಿದರು.

ಇದೇ ಸಂದರ್ಭದಲ್ಲಿ ಮಹತ್ವದ ರಾಜಕೀಯ ಘೋಷಣೆ ಮಾಡಿದ ಡಿ.ಕೆ. ಶಿವಕುಮಾರ್, ಇನ್ನು ಕೇವಲ ಎರಡು ಮೂರು ತಿಂಗಳಲ್ಲಿ ಜಿಲ್ಲಾ ಪಂಚಾಯಿತಿ ಹಾಗೂ ತಾಲೂಕು ಪಂಚಾಯಿತಿ ಚುನಾವಣೆಗಳನ್ನು ನಡೆಸಲು ಸರ್ಕಾರ ಸಿದ್ಧತೆ ನಡೆಸಿದೆ ಎಂದು ತಿಳಿಸಿದರು. ಮೀಸಲಾತಿ ಕುರಿತಾದ ಕಾನೂನು ತೊಡಕುಗಳನ್ನು ಬಗೆಹರಿಸಲು ಸಚಿವ ಪ್ರಿಯಾಂಕ್ ಖರ್ಗೆ ಅವರಿಗೆ ಸೂಚನೆ ನೀಡಲಾಗಿದ್ದು, ಕಾರ್ಯಕರ್ತರು ಇಂದಿನಿಂದಲೇ ಚುನಾವಣೆಗೆ ಸಜ್ಜಾಗಬೇಕು ಎಂದು ನಿರ್ದೇಶನ ನೀಡಿದರು.

ಕಾರ್ಯಕ್ರಮದಲ್ಲಿ ಸಚಿವರಾದ ಕೆ.ಜೆ. ಜಾರ್ಜ್, ಕೆಪಿಸಿಸಿ ಪದಾಧಿಕಾರಿಗಳು ಹಾಗೂ ಹಿರಿಯ ಮುಖಂಡರು ಉಪಸ್ಥಿತರಿದ್ದು, ಕೇಂದ್ರದ ವಿರುದ್ಧದ ಹೋರಾಟಕ್ಕೆ ಬೆಂಬಲ ಸೂಚಿಸಿದರು.

ShareTweetSendShare
Join us on:

Related Posts

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ವಸ್ತ್ರ ಸಂಹಿತೆ ಜಾರಿ: ಸಾಂಪ್ರದಾಯಿಕ ಉಡುಗೆ ಕಡ್ಡಾಯ

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ವಸ್ತ್ರ ಸಂಹಿತೆ ಜಾರಿ: ಸಾಂಪ್ರದಾಯಿಕ ಉಡುಗೆ ಕಡ್ಡಾಯ

by Shwetha
January 21, 2026
0

ಉಡುಪಿಯ ಪ್ರಸಿದ್ಧ ಶ್ರೀ ಕೃಷ್ಣ ಮಠಕ್ಕೆ ಆಗಮಿಸುವ ಭಕ್ತರಿಗೆ ಇನ್ನು ಮುಂದೆ ಸಾಂಪ್ರದಾಯಿಕ ವಸ್ತ್ರ ಧಾರಣೆ ಕಡ್ಡಾಯವಾಗಲಿದೆ. ಧಾರ್ಮಿಕ ಪರಂಪರೆ, ಸಂಸ್ಕೃತಿ ಹಾಗೂ ಮಠದ ಗೌರವವನ್ನು ಕಾಪಾಡುವ...

ಫೈನಲ್‌ಗೆ ಎಂಟ್ರಿ ಪಡೆಯಲು RCBಗೆ ಇನ್ನೆಷ್ಟು ಗೆಲುವು ಬೇಕು?

ಫೈನಲ್‌ಗೆ ಎಂಟ್ರಿ ಪಡೆಯಲು RCBಗೆ ಇನ್ನೆಷ್ಟು ಗೆಲುವು ಬೇಕು?

by Shwetha
January 21, 2026
0

2026ರ ಮಹಿಳಾ ಪ್ರೀಮಿಯರ್ ಲೀಗ್‌ (WPL)ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡದ ಗೆಲುವಿನ ಸರಣಿ ಮುಂದುವರೆದಿದೆ. ಸ್ಮೃತಿ ಮಂಧಾನ ಅವರ ನಾಯಕತ್ವದಲ್ಲಿ ಆಡುತ್ತಿರುವ RCB ಈವರೆಗೆ...

ಶಬರಿಮಲೆ ತೀರ್ಥಯಾತ್ರೆ  ಸಂಪನ್ನ – ಭಕ್ತಿಭಾವದಿಂದ ಅಂತ್ಯಗೊಂಡ ಅಯ್ಯಪ್ಪ ಋತು

ಶಬರಿಮಲೆ ತೀರ್ಥಯಾತ್ರೆ ಸಂಪನ್ನ – ಭಕ್ತಿಭಾವದಿಂದ ಅಂತ್ಯಗೊಂಡ ಅಯ್ಯಪ್ಪ ಋತು

by Shwetha
January 21, 2026
0

ಕೇರಳದ ಪ್ರಸಿದ್ಧ ಪುಣ್ಯಕ್ಷೇತ್ರ ಶಬರಿಮಲೆ ಶ್ರೀ ಅಯ್ಯಪ್ಪ ಸ್ವಾಮಿ ದೇವಾಲಯದ ಈ ವರ್ಷದ ವಾರ್ಷಿಕ ತೀರ್ಥಯಾತ್ರೆಯ ಋತು ನಿನ್ನೆ ಭಕ್ತಿಭಾವಪೂರ್ಣವಾಗಿ ಅಂತ್ಯಗೊಂಡಿದೆ. ಸಾವಿರಾರು ಭಕ್ತರ ಸಾಕ್ಷಿಯಾಗಿ, ಸಾಂಪ್ರದಾಯಿಕ...

ರಾಜ್ಯ ರಾಜಕೀಯದ ಬಗ್ಗೆ ನಮ್ಮ ಮನೆಯಲ್ಲೇ 2 ಗಂಟೆ ಚರ್ಚೆ ನಡೆದಿದೆ: ಪ್ರಿಯಾಂಕ್ ಖರ್ಗೆ ಸ್ಫೋಟಕ ಹೇಳಿಕೆ

ರಾಜ್ಯ ರಾಜಕೀಯದ ಬಗ್ಗೆ ನಮ್ಮ ಮನೆಯಲ್ಲೇ 2 ಗಂಟೆ ಚರ್ಚೆ ನಡೆದಿದೆ: ಪ್ರಿಯಾಂಕ್ ಖರ್ಗೆ ಸ್ಫೋಟಕ ಹೇಳಿಕೆ

by Shwetha
January 21, 2026
0

ಬೆಂಗಳೂರು: ಕರ್ನಾಟಕ ರಾಜ್ಯ ರಾಜಕೀಯದಲ್ಲಿ ಸಂಚಲನ ಮೂಡಿಸುವಂತಹ ಹೇಳಿಕೆಯನ್ನು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಸಚಿವ ಪ್ರಿಯಾಂಕ್ ಖರ್ಗೆ ನೀಡಿದ್ದಾರೆ. ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಮತ್ತು ದಲಿತ...

ಅಮಾನತು ಮಾತ್ರವಲ್ಲ ಡಿಸ್ ಮಿಸ್ ಕೂಡ ಮಾಡ್ತೀವಿ ರಾಮಚಂದ್ರ ರಾವ್‌ಗೆ ನಡುಕ ಹುಟ್ಟಿಸಿದ ಗೃಹ ಸಚಿವರು‌

ಅಮಾನತು ಮಾತ್ರವಲ್ಲ ಡಿಸ್ ಮಿಸ್ ಕೂಡ ಮಾಡ್ತೀವಿ ರಾಮಚಂದ್ರ ರಾವ್‌ಗೆ ನಡುಕ ಹುಟ್ಟಿಸಿದ ಗೃಹ ಸಚಿವರು‌

by Shwetha
January 21, 2026
0

ಬೆಂಗಳೂರು: ಪೊಲೀಸ್ ಇಲಾಖೆಯ ಘನತೆ ಮತ್ತು ಗೌರವಕ್ಕೆ ಧಕ್ಕೆ ತರುವಂತಹ ಗಂಭೀರ ಆರೋಪಕ್ಕೆ ಗುರಿಯಾಗಿರುವ ಸಿಐಡಿ ಡಿಜಿಪಿ ರಾಮಚಂದ್ರ ರಾವ್ ಅವರ ರಾಸಲೀಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram