ಕೋವಿಡ್-19 ಸೋಂಕಿನ ಈ ಸಂಕಷ್ಟ ಪರಿಸ್ಥಿತಿಯಲ್ಲಿ ಪ್ರತಿಯೊಬ್ಬರು ದೇಶದ ಜೊತೆ ಕೈಜೊಡಿಸುತ್ತಿದ್ದಾರೆ. ಕೊರೋನಾ ಸೋಂಕು ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಮುಖದ ಮಾಸ್ಕ್ ಗೆ ಬಹಳಷ್ಟು ಬೇಡಿಕೆ ಉಂಟಾಗಿದೆ. ಅನೇಕ ಸಂಘಸಂಸ್ಥೆಗಳು ಈಗಾಗಲೇ ಮಾಸ್ಕ್ ಅನ್ನು ಬಡಜನರಿಗೆ ತಯಾರಿಸಿ ಹಂಚುವ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದಾರೆ.
ದೇಶದ ಪ್ರಥಮ ಪ್ರಜೆ ರಾಮನಾಥ ಕೋವಿಂದ್ ಅವರ ಪತ್ನಿ ಸವಿತಾ ಕೋವಿಂದ್ ಅವರು ಕೂಡ ಮಾಸ್ಕ್ ತಯಾರಿಸುವ ಕೆಲಸದಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದಾರೆ. ಈ ಮೂಲಕ ಕೋವಿಡ್-19 ಸಾಂಕ್ರಾಮಿಕ ರೋಗದ ವಿರುದ್ಧ ನಾವೆಲ್ಲರೂ ಒಟ್ಟಾಗಿ ಹೋರಾಡೋಣ, ನಾವು ನಿಮ್ಮೊಂದಿಗೆ ಇದ್ದೇವೆ ಎಂಬ ಸಂದೇಶವನ್ನು ಜನರಿಗೆ ರವಾನಿಸಿದ್ದಾರೆ.
ದೇಶ ಸಂಕಷ್ಟ ಪರಿಸ್ಥಿತಿಯನ್ನು ಎದುರಿಸುತ್ತಿರುವ ಈ ಸಂದರ್ಭದಲ್ಲಿ ಜವಾಬ್ದಾರಿಯುತ ಸ್ಥಾನ ದಲ್ಲಿ ಇರುವವರು ಜನರಿಗೆ ಪ್ರೇರಣೆ ಯಾಗುವ ಕೆಲಸದಲ್ಲಿ ತೊಡಗಿಸಿಕೊಂಡಿರುವುದು ಎಲ್ಲರಿಗೂ ಮಾದರಿ.
ಸವಿತಾ ಕೋವಿಂದ್ ಅವರು ತಯಾರಿಸಿರುವ ಮಾಸ್ಕ್ ಗಳನ್ನು ದೆಹಲಿಯ ಆಶ್ರಯ ಸುಧಾರಣಾ ಮಂಡಳಿಯ ವಿವಿಧ ಆಶ್ರಯ ಮನೆಗಳಿಗೆ ವಿತರಿಸಲಾಗುವುದು.
ರಾಜೀನಾಮೆ ನೀಡಲು ಸಿಎಂ ಸೂಚನೆ: ಸಭಾಪತಿ ಸ್ಥಾನಕ್ಕೆ ಅವಮಾನ ಎಂದು ಗುಡುಗಿದ ಬಸವರಾಜ್ ಹೊರಟ್ಟಿ
ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಮತ್ತೊಂದು ಸಂಘರ್ಷಕ್ಕೆ ವೇದಿಕೆ ಸಿದ್ಧವಾಗಿದ್ದು, ವಿಧಾನ ಪರಿಷತ್ ಸಭಾಪತಿ ಬಸವರಾಜ್ ಹೊರಟ್ಟಿ ಅವರಿಗೆ ಮುಖ್ಯಮಂತ್ರಿಗಳು ದೂರವಾಣಿ ಕರೆ ಮಾಡಿ ರಾಜೀನಾಮೆ ನೀಡುವಂತೆ ಸೂಚಿಸಿರುವುದು...








