ಕರ್ನಾಟಕ ರಾಜ್ಯ ಸವಿತಾ ಸಮಾಜ ಸಂಘದ ಬೈಲಾ ತಿದ್ದುಪಡಿ : ಸಂಪತ್ ಕುಮಾರ್
ಕರ್ನಾಟಕ ರಾಜ್ಯ ಸವಿತಾ ಸಮಾಜದ ಸಂಘಕ್ಕೆ 1947ರಲ್ಲಿ ಆಗಿನ ಸಂದರ್ಭಕ್ಕೆ ಅನುಗುಣವಾಗಿ ಬೈಲಾ ರೂಪಿಸಲಾಗಿತ್ತು. ಇದೀಗ ಜನರಿಗೆ ಇದರಿಂದ ಅನುಕೂಲವಾಗುತ್ತಿಲ್ಲ. ಜತೆಗೆ ಸಾಕಷ್ಟು ಗೊಂದಲಗಳಿವೆ. ಹೀಗಾಗಿ ಬೈಲಾಗೆ ತಿದ್ದುಪಡಿ ತಂದು ರಾಜ್ಯದ ಎಲ್ಲಾ ಸವಿತಾ ಸಮಾಜದ ಜನರಿಗೆ ಅದರ ಪ್ರಯೋಜನ ತಲುಪುವಂತೆ ಮಾಡಲಾಗುವುದು. ಪ್ರಸ್ತುತ ಸಂದರ್ಭಕ್ಕೆ ಅನುಗುಣವಾದ ಅಂಶಗಳನ್ನು ಸೇರ್ಪಡೆ ಮಾಡಿ ಸಮಾಜದ ಅಭಿವೃದ್ಧಿಗೆ ಪೂರಕಾಗಿರುವಂತೆ ಬೈಲಾವನ್ನು ತಿದ್ದುಪಡಿ ಮಾಡಲಾಗುವುದು ಎಂದರು. ಜತೆಗೆ ಸಂಘದ ಖರ್ಚು, ವೆಚ್ಚಗಳ ಲೆಕ್ಕಪತ್ರವನ್ನು ಸಲ್ಲಿಸಲಾಗುವುದು.
ಸಂಘದ ವತಿಯಿಂದ ಪದವಿ ಕಾಲೇಜು ನಡೆಸುತ್ತಿದ್ದೇವೆ. ಮುಂದಿನ ದಿನಗಳಲ್ಲಿ ನಾವೆಲ್ಲರೂ ಸಂಘಟಿತರಾಗಿ ಅದನ್ನು ಮತ್ತಷ್ಟು ಅಭಿವೃದ್ಧಿಗೊಳಿಸಲಾಗುವುದು. ಈ ಮೂಲಕ ಸಂಘವನ್ನು ಆರ್ಥಿಕವಾಗಿ ಬಲಗೊಳಿಸಲು ನಾವೆಲ್ಲರೂ ಬದ್ಧರಾಗಿರಲು ತೀರ್ಮಾನಿಸಲಾಗಿದೆ ಎಂದು ಸಂಪತ್ ಕುಮಾರ್ ತಿಳಿಸಿದರು.
ಕಾರ್ಯಕ್ರಮದಲ್ಲಿ ಕರ್ನಾಟಕ ರಾಜ್ಯ ಸವಿತಾ ನಿಗಮದ ಅಧ್ಯಕ್ಷ ನರೇಶ್ ಕುಮಾರ್, ಸಂಘದ ಪ್ರಧಾನ ಕಾರ್ಯದರ್ಶಿ ರಾಘವೇಂದ್ರ ಇಟಗಿ, ಸಂಘದ ಕಾರ್ಯಾಧ್ಯಕ್ಷ ಎಸ್. ಕಿರಣ್ ಕುಮಾರ್ ಮತ್ತಿತರ ಪದಾಧಿಕಾರಿಗಳು ಹಾಗೂ ರಾಜ್ಯದ ನಾನಾ ಭಾಗಗಳ ಸವಿತ ಸಮುದಾಯದ ಮುಖಂಡರು, ಸಂಘದ ಸದಸ್ಯರು ಪಲ್ಗೊಂಡಿದ್ದರು.
ಮಧ್ಯಾಹ್ನ ವಿಶೇಷ ವಾರ್ಷಿಕ ಸಭೆ ನಡೆಸಲಾಯಿತು. ಸಭೆಯಲ್ಲಿ ತೆಗೆದುಕೊಂಡ ಜಾತಿ ನಿಂದನೆಗೆ ಕಾನೂನು ರೂಪಿಸುವುದು, ಸಮುದಾಯದ ಜನರಿಗೆ ರಾಜಕೀಯ, ಶೈಕ್ಷಣಿಕವಾಗಿ ಅಗತ್ಯ ಮೀಸಲಾತಿಗಳನ್ನು ಒದಗಿಸುವುದು ಸೇರಿದಂತೆ ನಾನಾ ನಿರ್ಣಯಗಳನ್ನು ಸರಕಾರಕ್ಕೆ ಸಲ್ಲಿಸಲು ನಿರ್ಧರಿಸಲಾಯಿತು.








