ಬೆಂಗಳೂರು: ಕೊರೊನಾ ಅಟ್ಟಹಾಸದ ನಡುವೆಯೂ ಶಾಲೆಗಳನ್ನು ಆರಂಭಿಸಲು ತೆರೆಮರೆಯ ಕಸರತ್ತು ನಡೆಸಿರುವ ರಾಜ್ಯ ಶಿಕ್ಷಣ ಇಲಾಖೆ, ಶಾಲೆಗಳ ಆರಂಭ ವಿಚಾರದಲ್ಲಿ ಬೇಕಾಬಿಟ್ಟಿ ಸಭೆ ನಡೆಸಿದ ಆರೋಪ ಕೇಳಿ ಬಂದಿದೆ.
ಬೆಂಗಳೂರಿನ ಸಾರ್ವಜನಿಕ ಶಿಕ್ಷಣ ಇಲಾಖೆ ಕಚೇರಿಯಲ್ಲಿ ಕಳೆದ ಮೂರು ದಿನಗಳಿಂದ ನಡೆದ ಸಭೆಗೆ ಗ್ರಾಮೀಣ ಖಾಸಗಿ ಶಾಲೆಗಳ ಒಕ್ಕೂಟಗಳನ್ನು ನಿರ್ಲಕ್ಷಿಸಿಸಲಾಗಿದೆ ಎಂದು ಆರೋಪಿಸಲಾಗಿದೆ.
ಕೇವಲ ಕಾಪೆರ್Çರೇಟ್ ಶಾಲೆಗಳ ಒಕ್ಕೂಟದವರೊಂದಿಗೆ ಮಾತ್ರ ಚರ್ಚೆ ನಡೆಸಿ ಗ್ರಾಮೀಣ ಶಾಲೆಗಳನ್ನು ಕಡೆಗಣಿಸಲಾಗಿದೆ ಎಂದು ಗ್ರಾಮೀಣ ಖಾಸಗಿ ಶಾಲೆಗಳ ಒಕ್ಕೂಟದ (RUPSA) ಅಧ್ಯಕ್ಷ ಲೋಕೇಶ್ ತಾಳಿಕೋಟೆ ವಾಗ್ದಾಳಿ ನಡೆಸಿದ್ದಾರೆ.
ಶಾಲೆಗಳನ್ನು ಆರಂಭಿಸುವ ವಿಚಾರದಲ್ಲಿ ಗ್ರಾಮೀಣ ಶಾಲೆಗಳ ಅಭಿಪ್ರಾಯ ಹಾಗೂ ಸಲಹೆಗಳನ್ನು ಪರಿಗಣಿಸಿಲ್ಲ. ರಾಜ್ಯದಲ್ಲಿ 18 ಸಾವಿರಕ್ಕೂ ಹೆಚ್ಚು ಖಾಸಗಿ ಶಾಲೆಗಳು ಗ್ರಾಮೀಣ ಭಾಗದಲ್ಲಿದೆ. ಆದ್ರೆ ನಮ್ಮನ್ನು ಚರ್ಚೆಗೆ ಕರೆದಿಲ್ಲ. ತಮಗೆ ಬೇಕಾದ ಕಾರ್ಪೋರೇಟ್ ಶಾಲೆಗಳನ್ನು ಕರೆಸಿದೆ ಎಂದು ಲೋಕೇಶ್ ತಾಳಿಕೋಟೆ ಕಿಡಿಕಾರಿದ್ದಾರೆ,
ಗ್ರಾಮೀಣ ಭಾಗದ ಖಾಸಗಿ ಶಾಲೆಗಳು ವರ್ಷಕ್ಕೆ ಕೇವಲ 10 ರಿಂದ 20 ಸಾವಿರ ಫೀಸ್ ಪಡೆಯುದು ಶಿಕ್ಷಣ ನೀಡುತ್ತಿವೆ. ನಮ್ಮ ಅಭಿಪ್ರಾಯ ಇಲಾಖೆಗೆ ಬೇಕಿಲ್ಲವೇ ಎಂದು ಲೋಕೇಶ್ ತಾಳಿಕೋಟೆ ಆರೋಪಿಸಿದ್ದಾರೆ.
ಸರ್ಕಾರಕ್ಕೆ ವರದಿ ಸಲ್ಲಿಕೆ..?
ಕಳೆದ ಮೂರು ದಿನಗಳಿಂದ ಸರಣಿ ಸಭೆ ನಡೆಸಿ ಶಾಲೆಗಳ ಆರಂಭದ ಬಗ್ಗೆ ಅಭಿಪ್ರಾಯ ಸಂಗ್ರಹಿಸಿರುವ ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತ ಅನ್ಬುಕುಮಾರ್, ಸರ್ಕಾರಕ್ಕೆ ವರದಿ ಸಲ್ಲಿಕೆ ಮಾಡಿದ್ದಾರೆ ಎನ್ನಲಾಗಿದೆ.
ಎಲ್ಲಾ ಜಿಲ್ಲೆಗಳ ಡಿಡಿಪಿಐಗಳು, ಕ್ಷೇತ್ರ ಶಿಕ್ಷಣಾಧಿಕಾರಿಗಳು, ಎಸ್ಡಿಎಂಸಿ ಅಧ್ಯಕ್ಷರು ಹಾಗೂ ಬೆಂಗಳೂರಿನ ಖಾಸಗಿ ಶಾಲೆಗಳ ಸಂಘಟನೆಗಳ ಅಭಿಪ್ರಾಯ ಸಂಗ್ರಹಿಸಿದ್ದಾರೆ. ಸಭೆಯಲ್ಲಿ ವ್ಯಕ್ತವಾದ ಸಲಹೆಗಳನ್ನು ವರದಿ ರೂಪದಲ್ಲಿ ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಅವರಿಗೆ ಸಲ್ಲಿಸಿದ್ದಾರೆ.
ವರದಿಯನ್ನು ಪರಿಶೀಲಿಸಿದ ಬಳಿಕ ಸುರೇಶ್ ಕುಮಾರ್ ಅವರು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರಿಗೆ ಸಲ್ಲಿಸಿದ್ದಾರೆ. ಸಿಎಂ ಯಡಿಯೂರಪ್ಪ ಅವರು ವರದಿಯ ಸಾಧಕ-ಬಾಧಕಗಳ ಬಗ್ಗೆ ಅಧಿಕಾರಿಗಳೊಂದಿಗೆ ಚರ್ಚಿಸಿ ಶಾಲೆಗಳನ್ನು ಆರಂಭಿಸಬೇಕೇ ಬೇಡವೇ ಎಂಬುದರ ಬಗ್ಗೆ ನಿರ್ಧಾರ ಪ್ರಕಟಿಸುವ ಸಾಧ್ಯತೆ ಇದೆ.
9ನೇ ತರಗತಿ, 10ನೇ ತರಗತಿ, ಪ್ರಥಮ ಪಿಯುಸಿ ಹಾಗೂ ದ್ವಿತೀಯ ತರಗತಿಗಳನ್ನು ಆರಂಭಿಸಲು ಶಿಕ್ಷಣ ಇಲಾಖೆ ಸಮ್ಮತಿ ಸೂಚಿಸಿದೆ ಎನ್ನಲಾಗಿದೆ. ಇದು ಮುಖ್ಯಮಂತ್ರಿಗಳ ಒಪ್ಪಿಗೆ ಬಳಿಕವೇ ಅಧಿಕೃತವಾಗಿ ಹೊರಬೇಕಿದೆ.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel