ಬೆಂಗಳೂರು: ಕಾಂಗ್ರೆಸ್ ಅಧಿಕಾರಕ್ಕೆ ಬರುತ್ತಿದ್ದಂತೆ ಹಲವು ನಾಯಕರು ಸಚಿವ ಸ್ಥಾನದಿಂದ ವಂಚಿತರಾಗಿದ್ದರು. ಹೀಗಾಗಿ ನಾಯಕರ ವಿರುದ್ಧ ಹಲವರು ಸಿಡಿದಿದ್ದರು. ಸದ್ಯ ನಿಗಮ ಮಂಡಳಿಯಲ್ಲಿ ಅವರಿಗೆ ಅವಕಾಶ ನೀಡಲಾಗಿದ್ದು, ಶಮನಕ್ಕೆ ಲೇಪನ ಹಚ್ಚುವ ಕಾರ್ಯ ನಡೆದಿದೆ ಎಂಬ ಮಾತು ರಾಜಕೀಯ ಪಡಸಾಲೆಯಲ್ಲಿ ಕೇಳಿ ಬರುತ್ತಿದೆ.
ಮೊದಲ ಹಂತದಲ್ಲಿ 25 ನಿಗಮ ಮಂಡಳಿ(boards and corporations) ಭರ್ತಿ ಮಾಡಿಕೊಳ್ಳಲು ಹಿರಿಯರು ಮುಂದಾಗಿದ್ದಾರೆ ಎನ್ನಲಾಗಿದೆ. ಅಲ್ಲದೇ, 3ಕ್ಕಿಂತ ಹೆಚ್ಚು ಬಾರಿ ಗೆದ್ದ ಶಾಸಕರಿಗೆ ಮಣೆ ಹಾಕಲು ಹೈಕಮಾಂಡ್ ಸೇರಿದಂತೆ ಹಿರಿಯ ನಾಯಕರು ಮುಂದಾಗಿದ್ದಾರೆ ಎನ್ನಲಾಗಿದೆ.
ಬಸವರಾಜ ರಾಯರೆಡ್ಡಿ, ನರೇಂದ್ರಸ್ವಾಮಿ, ವಿನಯ ಕುಲಕರ್ಣಿ, ಬಂಗಾರಪೇಟೆ ನಾರಾಯಣಸ್ವಾಮಿ, ಗಣೇಶ್ ಹುಕ್ಕೇರಿ, ಕೋಲಾರ ನಂಜೇಗೌಡ, ಬಿ.ಕೆ.ಸಂಗಮೇಶ್, ವಿಜಯಾನಂದ ಕಾಶಪ್ಪನವರ, ರಾಜೇಗೌಡ, ರಘುಮೂರ್ತಿ, ಅನಿಲ್ ಚಿಕ್ಕಮಾದು ಬಿ.ಆರ್. ಪಾಟೀಲ್, ಎಂ.ವೈ. ಪಾಟೀಲ್, ಬಿ.ಜಿ.ಗೋವಿಂದಪ್ಪ. ರಾಘವೇಂದ್ರ ಹಿಟ್ನಾಳ್, ಪ್ರಸಾದ್ ಅಬ್ಬಯ್ಯ, ಎ.ಆರ್.ಕೃಷ್ಣಮೂರ್ತಿ, ಶಿವಲಿಂಗೇಗೌಡ, ರೂಪ ಶಶಿಧರ್ ಅವರನ್ನು ನಿಗಮ ಮಂಡಳಿಗಳಿಗೆ ಆಯ್ಕೆ ಮಾಡಲಾಗಿದೆ ಎನ್ನಲಾಗುತ್ತಿದೆ.