ಮೈಸೂರು: ಕೊರೊನಾ ಸೋಂಕಿತರ ಸಂಪರ್ಕ ಹೊಂದಿರುವ ಶಂಕೆ ಹಿನ್ನೆಲೆಯಲ್ಲಿ ಮಾಜಿ ಸಿಎಂ ಹಾಗೂ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಸ್ವಯಂ ಹೋಂ ಕ್ವಾರಂಟೈನ್ಗೆ ಒಳಗಾಗಿದ್ದಾರೆ ಎನ್ನಲಾಗಿದೆ.
ಬೆಂಗಳೂರಿನಿಂದ ಹೊರಟು ಮೈಸೂರಿನ ತೋಟದ ಮನೆಗೆ ಶನಿವಾರವೇ ಬಂದಿರುವ ಸಿದ್ದರಾಮಯ್ಯ, ಎಚ್.ಡಿ.ಕೋಟಿ ರಸ್ತೆಯ ಟಿ.ಕಾಟೂರಿನ ಬಳಿ ಇರುವ ತಮ್ಮ ಫಾರಂನಲ್ಲಿ ಹೋಂ ಕ್ವಾರಂಟೈನ್ಗೆ ಒಳಗಾಗಿದ್ದಾರೆ.
sಸಿದ್ದರಾಮಯ್ಯ ಅವರಿಗೆ ಪುತ್ರ ಡಾ.ಯತೀಂದ್ರ ಜೊತೆ ಕುಟುಂಬ ಸಾಥ್ ನೀಡಿದೆ.
ಆದ್ರೆ, ಸಿದ್ದರಾಮಯ್ಯ ಹೋಂ ಕ್ವಾರಂಟೈನ್ ಆಗಿದ್ದಾರೆ ಎಂಬ ವದಂತಿ ಹರಿದಾಡುತ್ತಿದೆ. ಅದು ಸುಳ್ಳು. ವಿಶ್ರಾಂತಿಗಾಗಿ ಬಂದಿದ್ದು, ಕೆಲ ಕಾರ್ಯಕ್ರಮಗಳಲ್ಲಿ ಭಾಗಿಯಾಗಿದ್ದಾರೆ. ಮಂಗಳವಾರ ಸಂಜೆ ಅಥವಾ ಬುಧವಾರ ಬೆಂಗಳೂರಿಗೆ ಹಿಂದಿರುಗಲಿದ್ದಾರೆ ಎಂದು ಸಿದ್ದರಾಮಯ್ಯ ಅವರ ಆಪ್ತ ಮೂಲಗಳು ತಿಳಿಸಿವೆ.
ಪರೀಕ್ಷಾ ವ್ಯವಸ್ಥೆ ಹಾಳು ಮಾಡಿದ BJP: ಮಧು ಬಂಗಾರಪ್ಪ ವಾಗ್ದಾಳಿ
ಮಧು ಬಂಗಾರಪ್ಪ ಅವರು BJP ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಹಿಜಾಬ್ ವಿಚಾರವನ್ನು ಮುಂದಿಟ್ಟುಕೊಂಡು ಅನಗತ್ಯ ಗಲಾಟೆ ಸೃಷ್ಟಿಸಲಾಗುತ್ತಿದೆ ಎಂದು ಆರೋಪಿಸಿದ್ದಾರೆ. ರಾಜ್ಯದಲ್ಲಿ ಪ್ರಸ್ತುತ ಪಾರದರ್ಶಕ ಹಾಗೂ...








