ಮೈಸೂರು: ಕೊರೊನಾ ಸೋಂಕಿತರ ಸಂಪರ್ಕ ಹೊಂದಿರುವ ಶಂಕೆ ಹಿನ್ನೆಲೆಯಲ್ಲಿ ಮಾಜಿ ಸಿಎಂ ಹಾಗೂ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಸ್ವಯಂ ಹೋಂ ಕ್ವಾರಂಟೈನ್ಗೆ ಒಳಗಾಗಿದ್ದಾರೆ ಎನ್ನಲಾಗಿದೆ.
ಬೆಂಗಳೂರಿನಿಂದ ಹೊರಟು ಮೈಸೂರಿನ ತೋಟದ ಮನೆಗೆ ಶನಿವಾರವೇ ಬಂದಿರುವ ಸಿದ್ದರಾಮಯ್ಯ, ಎಚ್.ಡಿ.ಕೋಟಿ ರಸ್ತೆಯ ಟಿ.ಕಾಟೂರಿನ ಬಳಿ ಇರುವ ತಮ್ಮ ಫಾರಂನಲ್ಲಿ ಹೋಂ ಕ್ವಾರಂಟೈನ್ಗೆ ಒಳಗಾಗಿದ್ದಾರೆ.
sಸಿದ್ದರಾಮಯ್ಯ ಅವರಿಗೆ ಪುತ್ರ ಡಾ.ಯತೀಂದ್ರ ಜೊತೆ ಕುಟುಂಬ ಸಾಥ್ ನೀಡಿದೆ.
ಆದ್ರೆ, ಸಿದ್ದರಾಮಯ್ಯ ಹೋಂ ಕ್ವಾರಂಟೈನ್ ಆಗಿದ್ದಾರೆ ಎಂಬ ವದಂತಿ ಹರಿದಾಡುತ್ತಿದೆ. ಅದು ಸುಳ್ಳು. ವಿಶ್ರಾಂತಿಗಾಗಿ ಬಂದಿದ್ದು, ಕೆಲ ಕಾರ್ಯಕ್ರಮಗಳಲ್ಲಿ ಭಾಗಿಯಾಗಿದ್ದಾರೆ. ಮಂಗಳವಾರ ಸಂಜೆ ಅಥವಾ ಬುಧವಾರ ಬೆಂಗಳೂರಿಗೆ ಹಿಂದಿರುಗಲಿದ್ದಾರೆ ಎಂದು ಸಿದ್ದರಾಮಯ್ಯ ಅವರ ಆಪ್ತ ಮೂಲಗಳು ತಿಳಿಸಿವೆ.
ಬೀದಿಬದಿ ವ್ಯಾಪಾರಿಗಳ ತೆರವು ಇಲ್ಲ, ಕೇವಲ ಸ್ಥಳಾಂತರ: ಸಚಿವ ಕೃಷ್ಣ ಬೈರೇಗೌಡ ಯೂಟರ್ನ್, ಜುಲೈ 10ರಿಂದ ಅನಾಥ ವಾಹನಗಳ ಸಫಾಯಿ ಶುರು
ಬೆಂಗಳೂರು: ಸಿಲಿಕಾನ್ ಸಿಟಿಯ ಪಾದಚಾರಿ ಮಾರ್ಗಗಳ ಒತ್ತುವರಿ ತೆರವು ಕಾರ್ಯಾಚರಣೆ ವಿಚಾರದಲ್ಲಿ ಬೆಂಗಳೂರು ಅಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ ಅವರು ಮಹತ್ವದ ಯೂಟರ್ನ್ ತೆಗೆದುಕೊಂಡಿದ್ದಾರೆ. ಗ್ರೇಟರ್ ಬೆಂಗಳೂರು...








