ಚಿಕ್ಕಮಗಳೂರು : ಚಿಕ್ಕಮಗಳೂರು ಜಿಲ್ಲೆಯಲ್ಲಿ ಮಳೆಯ ಆರ್ಭಟಕ್ಕೆ ಈಗಾಗಲೇ 5 ಬಲಿಯಾಗಿದೆ. ಇನ್ನೂ ಜಿಲ್ಲೆಯಲ್ಲಿ ಕಳೆದ 3 ದಿನಗಳ ಹಿಂದೆ ಹಳ್ಳ ದಾಟಿ ಹೋಗುವಾಗ ಕೊಚ್ಚಿ ಹೋಗಿದ್ದ ವೃದ್ಧೆಯ ಮೃತದೇಹ ಇಂದು ಪತ್ತೆಯಾಗಿದೆ. ಸೋಮಾವತಿ ನದಿಯಲ್ಲಿ 70 ವರ್ಷದ ತರುವೆ ಗ್ರಾಮದ ರತ್ನಮ್ಮ ಅವರು ಕೊಚ್ಚಿಹೋಗಿದ್ದರು. ಅದಾದ ಬಳಿಕ ಅಗ್ನಿಶಾಮಕದಳ ಸಿಬ್ಬಂದಿ ಸತತವಾಗಿ ಶೋಧ ಕಾರ್ಯ ನಡೆಸಿದ ಬಳಿಕ ಇಂದು ಅವರ ಮೃತದೇಹ ಸಿಕ್ಕಿದೆ. ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರ ಬಳಿಯ ಬಣಕಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಪ್ರಕರಣ ನಡೆದಿತ್ತು.
ಸ್ಯಾಂಡಲ್ವುಡ್ ಇತಿಹಾಸದಲ್ಲೇ ಅತ್ಯಂತ ದುಬಾರಿ ಕ್ಯಾರವನ್ ಮಾಲೀಕರಾದ ಬಾದ್ಷಾ ಕಿಚ್ಚ ಸುದೀಪ್
ಕನ್ನಡ ಚಿತ್ರರಂಗದ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅವರ ವಾಹನ ಪ್ರೇಮ ಇಡೀ ದೇಶಕ್ಕೇ ಗೊತ್ತು. ಅವರ ಬಳಿ ಇರುವ ಐಷಾರಾಮಿ ಕಾರುಗಳ ಸಾಲಿಗೆ ಈಗ ವಿಮಾನದಂತಹ...








