ಬೆಂಗಳೂರು: ಹಿರಿಯ ಐಪಿಎಸ್ ಅಧಿಕಾರಿ ಪ್ರತಾಪ್ ರೆಡ್ಡಿ ಅವರು ಸ್ವಯಂ ನಿವೃತ್ತಿ ಘೋಷಿಸಿದ್ದಾರೆ.
ಹೀಗಾಗಿ ಏಪ್ರಿಲ್ 30ರಂದು ಸೇವೆಯಿಂದ ನಿವೃತ್ತಿಗೆ ಸರ್ಕಾರ ಆದೇಶ ಹೊರಡಿಸಿದೆ. ಪ್ರತಾಪ್ ರೆಡ್ಡಿ ಅವರು ಸ್ವಯಂ ನಿವೃತ್ತಿ ಕೋರಿ ಸರ್ಕಾರಕ್ಕೆ ಪತ್ರ ಬರೆದಿದ್ದರು. ಈ ಹಿನ್ನೆಲೆಯಲ್ಲಿ ಅವರ ಸ್ವಯಂ ನಿವೃತ್ತಿ ಪತ್ರವನ್ನು ಸರ್ಕಾರ ಅಂಗೀಕರಿಸಿದೆ. ಏ.30 ಕ್ಕೆ ಇಲಾಖೆಯಿಂದ ಬಿಡುಗಡೆಗೆ ಆದೇಶಿಸಿದೆ.
ಪ್ರತಾಪ್ ರೆಡ್ಡಿ ಸದ್ಯ ಆಂತರಿಕ ಭದ್ರತಾ ವಿಭಾಗದ ಡಿಜಿಪಿ ಆಗಿ ಸೇವೆ ಸಲ್ಲಿಸುತ್ತಿದ್ದಾರೆ. ನಿವೃತ್ತಿಗೂ 2 ತಿಂಗಳ ಮೊದಲೇ ಅವರು ಇಲಾಖೆಯಿಂದ ಬಿಡುಗಡೆ ಮಾಡುವಂತೆ ಕೋರಿ ಪತ್ರ ಬರೆದಿದ್ದರು.