ಹಿರಿಯ ಸಾಹಿತಿ ಡಾ.ಮಳಲಿ ವಸಂತ ಕುಮಾರ್ ಇನ್ನಿಲ್ಲ
ಮೈಸೂರು : ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಮಾಜಿ ಅಧ್ಯಕ್ಷ, ಹಿರಿಯ ಸಾಹಿತಿ ಡಾ. ಮಳಲಿ ವಸಂತ ಕುಮಾರ್ ಅವರು ವಿಧಿವಶರಾಗಿದ್ದಾರೆ.
ಬಹಳ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ನಿನ್ನೆ ಬೆಂಗಳೂರಿನಲ್ಲಿರುವ ತಮ್ಮ ಪುತ್ರನ ನಿವಾಸದಲ್ಲಿ ನಿನ್ನೆ ಕೊನೆಯುಸಿರೆಳೆದಿದ್ದಾರೆ.
ಇಂದು ಮೈಸೂರು-ಎಚ್.ಡಿ.ಕೋಟೆ ತಾಲೂಕಿನ ಮಾನಂದವಾಡಿ ರಸ್ತೆಯಲ್ಲಿರುವ ಕಳಲವಾಡಿ ಗ್ರಾಮದ ತೋಟದಲ್ಲಿ ಮಧ್ಯಾಹ್ನ ಎರಡು ಗಂಟೆಗೆ ಅವರ ಅಂತ್ಯ ಸಂಸ್ಕಾರ ನೆರವೇರಿದೆ.
ಇದಕ್ಕು ಮುನ್ನ ವಸಂತಕುಮಾರ್ ಮೃತದೇಹ ಅಂತಿಮ ದರ್ಶನಕ್ಕೆ ಪುರಭವನದ ಬಳಿ ವ್ಯವಸ್ಥೆ ಮಾಡಲಾಗಿತ್ತು.
ವಿಧಾನ ಪರಿಷತ್ ಸದಸ್ಯ ಹೆಚ್.ವಿಶ್ವನಾಥ್ ಸೇರಿದಂತೆ ಸಾಹಿತ್ಯ ಹಾಗೂ ರಾಜಕೀಯ ಗಣ್ಯರು ಅಂತಿಮ ದರ್ಶನ ಪಡೆದರು.