ನೆಲಮಂಗಲ: ಶಾಲಾ ಬಸ್, ಬೈಕ್ ಮತ್ತು ಬುಲೇರೊ ಮಧ್ಯೆ ಸರಣಿ ಅಪಘಾತ ಸಂಭವಿಸಿದ್ದು, ಹಲವರು ಗಾಯಗೊಂಡಿರುವ ಘಟನೆ ನಡೆದಿದೆ.
ಈ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ರಾಷ್ಟ್ರೀಯ ಹೆದ್ದಾರಿ-4 ರ ಬೂದಿಹಾಳ್ ಬಳಿ ನಡೆದಿದೆ. ಘಟನೆಯಲ್ಲಿ ಬೈಕ್ ನಲ್ಲಿ ತೆರಳುತ್ತಿದ್ದ ರಾಜೇಶ್ ಹಾಗೂ ಗಂಗಧರ್ ಗಂಭೀರವಾಗಿ ಗಾಯಗೊಂಡಿದ್ದಾರೆ.
ಗಾಯಾಳುಗಲನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ನೀಡಲಾಗುತ್ತಿದೆ. ಬುಲೆರೊ ವಾಹನ ರಸ್ತೆಯಲ್ಲಿಯೇ ಬಿದ್ದಿದ್ದರಿಂದಾಗಿ ಕೆಲವು ಸಮಯ ಸ್ಥಳದಲ್ಲಿ ಟ್ರಾಫಿಕ್ ಜಾಮ್ ಉಂಟಾಗಿತ್ತು. ಆನಂತರ ವಾಹನ ಅಲ್ಲಿಂದ ಎತ್ತಿದಾಗ ಪರಿಸ್ಥಿತಿ ಸುಧಾರಿಸಿತು. ಈ ಕುರಿತು ನೆಲಮಂಗಲ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.