ಇಂದಿನಿಂದ ಅಧಿವೇಶನ : ಸಾವಿರಾರು ನೌಕರರಿಂದ ವಿಧಾನಸೌಧ ಮುತ್ತಿಗೆ
ಬೆಂಗಳೂರು : ಇಂದಿನಿಂದ ರಾಜ್ಯ ವಿಧಾನ ಮಂಡಲ ಅಧಿವೇಶನ ಆರಂಭವಾಗಲಿದ್ದು, ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಸಾವಿರಾರು ನೌಕರರು ವಿಧಾನಸೌಧ ಮುತ್ತಿಗೆ ಹಾಕಲಿದ್ದಾರೆ.
ಇಂದು ವಿಧಾನಸಭಾ ಅಧಿವೇಶನದ ಹಿನ್ನೆಲೆ ಸಿಐಟಿಯು ಅಡಿಯಲ್ಲಿ ಬರುವ 131 ಇಲಾಖೆಗಳಲ್ಲಿ ಕೆಲಸ ಮಾಡುವ ನೌಕರರು ಬೆಂಗಳೂರಿನಲ್ಲಿ ಪ್ರತಿಭಟನೆ ನಡೆಸಲಿದ್ದಾರೆ.
ಇದರಲ್ಲಿ ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರು, ಆಶಾ ಕಾರ್ಯಕರ್ತೆಯರು, ಬಿಸಿಯೂಟ ಕಾರ್ಯಕರ್ತೆಯರು, ಕಟ್ಟಡ ಕಾರ್ಮಿಕರು, ಸಾರಿಗೆ ನೌಕರರು ಭಾಗಿಯಾಗಲಿದ್ದಾರೆ.
ಇವರು ಮೆಜೆಸ್ಟಿಕ್ ನ ರೈಲು ನಿಲ್ದಾಣದಿಂದ ವಿಧಾನಸೌಧ ಚಲೋ ಹೆಸರಲ್ಲಿ ಬೃಹತ್ ರ್ಯಾಲಿ ನಡೆಸಲಿದ್ದಾರೆ.
ಈ ಹಿನ್ನೆಲೆ ಇಂದು ಮೆಜೆಸ್ಟಿಕ್ ಸುತ್ತಮುತ್ತ ಸಂಚಾರ ಮಾಡುವ ವಾಹನ ಸವಾರರು ತುಸು ಜಾಗ್ರತೆ ವಹಿಸುವುದು ಸೂಕ್ತ. ಈ ಪ್ರದೇಶದಲ್ಲಿ ಮಧ್ಯಾಹ್ನ 1 ಗಂಟೆಯವರೆಗೆ ಟ್ರಾಫಿಕ್ ಜಾಮ್ ಆಗಲಿದೆ.
ಕಾರ್ಮಿಕ ಸಂಘಟನೆಗಳ ಪ್ರಮುಖ ಬೇಡಿಕೆಗಳು
1.ಖಾಯಂ ನೌಕರಿ
2.ಮಾಸಿಕ ರೂ.24 ಸಾವಿರ ಸಮಾನ ಕನಿಷ್ಠ ವೇತನ
3. ಲಾಕ್ಡೌನ್, ಸೀಲ್ಡೌನ್ , ಕ್ವಾರಂಟೈನ್ ವೇಳೆಯಲ್ಲಿ ವೇತನ ನೀಡಬೇಕು
4. ಲೇ- ಆಫ್, ರಿಟ್ರೆಂಚ್ಮೆಂಟ್ ಮುಚ್ಚುವಿಕೆಗೆ ಅನುಮತಿ ನಿರಾಕರಣೆ
5. ರಾಜ್ಯ ಕಾರ್ಮಿಕ ಸಮ್ಮೇಳನಕ್ಕಾಗಿ ಕರ್ನಾಟಕ ಕಾರ್ಮಿಕ ಅಧ್ಯಯನ ಸಂಸ್ಥೆ ಬಲಪಡಿಸುವುದು