ಬೆಂಗಳೂರು: ವಿಧಾನಮಂಡಲ ಜಂಟಿ ಅಧಿವೇಶನ ಆರಂಭಗೊಂಡಿದ್ದು, ಉಭಯ ಸದನವನ್ನುದ್ದೇಶಿಸಿ ರಾಜ್ಯಪಾಲ ವಜುಭಾಯ್ ವಾಲಾ ಅವರು ಭಾಷಣ ಮಾಡುತ್ತಿದ್ದಾರೆ. ರಾಜ್ಯಪಾಲರನ್ನು ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ, ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹಾಗೂ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಸ್ವಾಗತಿಸಿದರು.
ಜಂಟಿ ಅಧಿವೇಶನವನ್ನುದ್ದೇಶಿ ಭಾಷಣ ಆರಂಭಿಸಿದ ರಾಜ್ಯಪಾಲರು, ರಾಜ್ಯ ಸರ್ಕಾರದ ಸಾಧನೆಗಳು, ಜಾರಿಯಾದ ಯೋಜನೆಗಳ ಕುರಿತು ಪ್ರಸ್ತಾಪಿಸಿದರು.
ನೆರೆ ಪರಿಹಾರಕ್ಕೆ ಸರ್ಕಾರ ಸೂಕ್ತರೀತಿಯಲ್ಲಿ ಸ್ಪಂದನೆ ನೀಡುತ್ತಿದೆ. ಅಲ್ಲದೆ, ಕೇಂದ್ರ ಸರ್ಕಾರದ ಸಹಕಾರದೊಂದಿಗೆ ಪ್ರವಾಹ ಪೀಡಿತ ಪ್ರದೇಶದ ಜನರಿಗೆ ಹಾಗೂ ಬೆಲೆ ಕಳೆದುಕೊಂಡ ರೈತರಿಗೆ ಸಮರೋಪಾದಿಯಲ್ಲಿ ಪರಿಹಾರ ನೀಡಿದೆ ಎಂದು ತಿಳಿಸಿದರು.
ಇಂದಿನಿಂದ ಆರಂಭವಾಗಿರುವ ಅಧಿವೇಶನ ಮಾರ್ಚ್ 31ಕ್ಕೆ ಮುಕ್ತಾಯಗೊಳ್ಳಲಿದೆ.
ರಾಜ್ಯದ ರೈತರಿಗೆ ಗುಡ್ ನ್ಯೂಸ್ ಹಾಗೂ ರಸಗೊಬ್ಬರ ಮಾಫಿಯಾಗೆ ಬಿಗ್ ಶಾಕ್: ಇನ್ಮುಂದೆ ಗೊಬ್ಬರ ಖರೀದಿಗೆ ಫ್ರೂಟ್ಸ್ ಐಡಿ ಕಡ್ಡಾಯ
ರಾಜ್ಯದ ಅನ್ನದಾತರಿಗೆ ಮುಂಗಾರು ಹಂಗಾಮಿನ ಸಮಯದಲ್ಲಿ ಎದುರಾಗುತ್ತಿದ್ದ ಬಹುದೊಡ್ಡ ಸಮಸ್ಯೆಗೆ ಮುಕ್ತಿ ಹಾಡಲು ರಾಜ್ಯ ಸರ್ಕಾರ ಮುಂದಾಗಿದೆ. ರೈತರಿಗೆ ಸಕಾಲದಲ್ಲಿ ರಸಗೊಬ್ಬರ ತಲುಪಿಸಲು ಮತ್ತು ಮಾರುಕಟ್ಟೆಯಲ್ಲಿ ಉದ್ದೇಶಪೂರ್ವಕವಾಗಿ...








