ಕೆರೆಯಲ್ಲಿ ಮುಳುಗಿದ 7 ಹುಡುಗಿಯರು ಸಾವು : ಪ್ರಧಾನಿ ಮೋದಿ ಸಂತಾಪ!
ರಾಂಚಿ : ಕರ್ಮ ಪೂಜೆ ವೇಳೆ ನೀರಿನಲ್ಲಿ ಮುಳುಗಿ ಏಳು ಮಂದಿ ಹುಡುಗಿಯರು ಮೃತಪಟ್ಟಿರುವ ಘಟನೆ ಜಾಖರ್ಂಡ್ ನ ಲತೇಹಾರ್ ಜಿಲ್ಲೆಯ ಬಾಲುಮಠದಲ್ಲಿ ನಡೆದಿದೆ. ಈ ಪೈಕಿ ಆರು ಮಂದಿ ಒಂದೇ ಕುಟುಂಬದವರು ಎಂದು ತಿಳಿದುಬಂದಿದೆ.
ಜಾಖರ್ಂಡ್ ನಲ್ಲಿ ನಡೆಯುವ ಪ್ರಮುಖ ಹಬ್ಬವಾದ ಕರ್ಮ ಪೂಜಾ ಮುಗಿಸಿ 10 ಮಂದಿ ಹುಡುಗಿಯರು ಕೆರೆಯಲ್ಲಿ ಮುಳುಗಿ ಸ್ನಾನ ಮಾಡಲು ತೆರಳಿದ್ದಾರೆ.
10 ಹುಡುಗಿಯರಲ್ಲಿ ಮೂವರು ಅಪಾಯದಿಂದ ಪಾರಾಗಿದ್ದಾರೆ. ನೀರಿನಲ್ಲಿ ಮುಳುಗಿದ ವೇಳೆ ಇಬ್ಬರು ಹುಡುಗಿಯರು ರಕ್ಷಿಸಲು ಕೂಗಿದ್ದಾರೆ.
ಈ ವೇಳೆ ಇತರರು ರಕ್ಷಣೆಗೆ ಧಾವಿಸಿದ್ದಾರೆ. ಆದರೆ 7 ಮಂದಿ ನೀರಿನಲ್ಲಿ ಮುಳುಗಿದರೆ, ಮೂವರು ಹುಡುಗಿಯರು ದಡ ಸೇರಿದ್ದಾರೆ. ಈ ಮೂವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಈ ಕುರಿತು ಪ್ರಧಾನಿ ನರೇಂದ್ರ ಮೋದಿ ಟ್ವೀಟ್ ಮಾಡಿ ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವುದರ ಬಗ್ಗೆ ಸಂತಾಪ ಸುಚಿಸಿದ್ದಾರೆ.
ಲತೇಹಾರ್ ಜಿಲ್ಲೆಯಲ್ಲಿ ಯುವ ಜೀವಗಳು ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಆಘಾತ ತಂದಿದೆ. ಈ ಸಂದರ್ಭದಲ್ಲಿ ಅವರ ಕುಟುಂಬಕ್ಕೆ ಸಾಂತ್ವನ ಎಂದು ಮೋದಿ ಟ್ವೀಟ್ ಮಾಡಿದ್ದಾರೆ.