Sexual Assault ಇತ್ತಿಚಿನ ದಿನಗಳಲ್ಲಿ ಮನುಷ್ಯನ ಹೇಯ ಕೃತ್ಯಗಳಿಗೆ ಎಲ್ಲೆ ಇಲ್ಲದಂತಾಗಿದೆ .ಅಪರಾಧಗಳು ಮನುಷ್ಯರ ಮೇಲಾಗುವುದು ಸಾಕಾಗದೆ ಇತ್ತಿಚಿನ ದಿನಮಾನದಲ್ಲಿ ಪ್ರಾಣಿಗಳ ಮೇಲು ಹೆಚ್ಚಾಗುತ್ತಿದ್ದೆ.
ಈ ನಿಟ್ಟಿನಲ್ಲಿ ಈಗ ಕೊಡಗು ಜಿಲ್ಲೆಯ ಕುಶಾಲನಗರ ತಾಲೂಕಿನ ಸುಂಟಿಕೊಪ್ಪ ಸಮೀಪದಲ್ಲಿ ಹಿಂತ ಹೀನಾಯ ಘಟನೆಯೊಂದು ನಡೆದಿದೆ. ಈ ಹೇಯ್ಯ ಕೃತ್ಯ ನವೆಂಬರ್ 27ರಂದು ನಡೆದಿದೆ
ಮೇಯಲು ಕಟ್ಟಿಹಾಕಿದ್ದ ಹಸುವಿನ ಮೇಲೆ ಲೈಂಗಿಕ ದೌರ್ಜನ್ಯ ನಡೆಸುತ್ತಿದ್ದ ಹೇಯ ಕೃತ್ಯ ಬೆಳಕಿಗೆ ಬಂದಿದೆ
ಈ ಕೃತ್ವ್ಯಯ ನಡೆಸುತ್ತಿದ್ದ ವ್ಯಕ್ತಿ ಒಬ್ಬನನ್ನು ಸ್ಥಳೀಯ ಗ್ರಾಮಸ್ಥರು ಹಿಡಿದು ಪೊಲೀಸರಿಗೆ ಒಪ್ಪಿಸಿದ ಘಟನೆ ಅಂದಗೋವೆ ಎಂಬ ಗ್ರಾಮದಲ್ಲಿ ನಡೆದಿದೆ.
ಈ ಹಿನಾಯ ಕೃತ್ಯವೆಸಗಿದ ಆರೋಪಿಯನ್ನು ಪೊಲೀಸರು ಬಂದಿಸಿ ಅವನ ವಿರುದ್ಧ ಮೊಕದ್ದಮೆ ದಾಖಲಿಸಿ ನ್ಯಾಯಾಂಗ ಬಂಧನಕ್ಕೆ ಒಳಪಡಿಸಿದ್ದಾರೆ.
ಪೊಲೀಸ್ ತನಿಕಾ ಮಾಹಿತಿಯ ಪ್ರಕಾರ ಸುಂಟಿಕೊಪ್ಪ ಸಮೀಪದ ಅಂದಗೋವೆ ಗ್ರಾಮದ ಸಿ.ಎ ದೇವಯ್ಯ ಅವರ ಹಸುವನ್ನು ಮೇಯಲು ಬಿಟ್ಟಿದ್ದರು , ಸಂತೆಗೆ ಹೋಗಿ ವಾಪಸ್ ಬರುವ ಸಂದರ್ಭ ತಮ್ಮ ಗದ್ದೆಯ ದಾರಿಯಲ್ಲಿ ಮೋಟಾರ್ ಬೈಕ್ ನಿಂತಿದ್ದನ್ನು ನೋಡಿದ ಅವರು ಮನೆ ಹೋಗಿ ಮೇಯಲು ಬಿಟ್ಟಿದ್ದ ಹಸುವನ್ನು ಮರಳಿ ಮನೆಗೆ ತರಲು ಹೋದ ವೇಳೆ ಅಪರಿಚಿತ ವ್ಯಕ್ತಿಯೊಬ್ಬ ಹಸುವಿನ ಮೇಲೆ ಪೈಶಾಚಿಕ ಕೃತ್ಯ ಎಸಗುತ್ತಿರುವುದನ್ನು ನೋಡಿ ಆತನನ್ನು ಹಿಡಿದು ವಿಚಾರಿಸಿದ್ದಾರೆ.
ಸುಂಟಿಕೊಪ್ಪ ಪಂಪ್ ಹೌಸ್ ನಿವಾಸಿಯಾದ ಅಬೂಬಕ್ಕರ್ ಸಿದ್ಧಿಕ್ ಎಂದು ತಿಳಿದು ಬಂದಿದೆ. ಈ ಬಗ್ಗೆ ಪೊಲೀಸರಿಗೆ ದೂರು ನೀಡಿ ಆತನನ್ನು ಪೊಲೀಸರ ಬಂದನಕ್ಕೆ ಒಳಪಡಿಸಿದ್ದಾರೆ.
ಈ ವಿಕೃತ ಕಾಮುಕನಿಗೆ ಭಾರತೀಯ ದಂಡ ಸಂಹಿತೆಯ ಪ್ರಕಾರ ಸೆಕ್ಷನ್ 377 ಮೊಕದ್ದಮೆ ಹಾಕಿದ್ದು ನ್ಯಾಯಾಧೀಶರ ಮುಂದೆ ಹಾಜರುಪಡಿಸಿ ನ್ಯಾಯಾಂಗ ಬಂಧನಕ್ಕೆ ಆದೇಶಿಸಿದ್ದಾರೆ.