ಬೆಂಗಳೂರು: ಗೆಳತಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆಂಬ ಆರೋಪದ ಹಿನ್ನೆಲೆಯಲ್ಲಿ ನಟ ಚರಿತ್ ಬಾಳಪ್ಪ (Charith Balappa) ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಕನ್ನಡದ ಮುದ್ದುಲಕ್ಷ್ಮಿ, ಲವಲವಿಕೆ, ಸರ್ಪಸಂಬಂಧ ಸೇರಿದಂತೆ ತೆಲುಗಿನ ಕೆಲವು ಧಾರಾವಾಹಿಗಳಲ್ಲಿ ಚರಿತ್ ನಟಿಸಿದ್ದಾರೆ. ಸದ್ಯ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಚರಿತ್ ನನ್ನು ರಾಜರಾಜೇಶ್ವರಿ ನಗರ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಲೈಂಗಿಕ ದೌರ್ಜನ್ಯ, ಕೊಲೆ ಬೆದರಿಕೆ ಹಾಗೂ ಹಲ್ಲೆ ಮಾಡಿರುವುದಾಗಿ ನಟನ ವಿರುದ್ಧ ಯುವತಿ ಆರೋಪಿಸಿದ್ದಾರೆ. ಪ್ರೀತಿಸುವ ನೆಪದಲ್ಲಿ ದೈಹಿಕ ಸಂಪರ್ಕಕ್ಕೆ ಒತ್ತಾಯಿಸಿದ್ದಾನೆ. ಜೊತೆಗೆ ಯುವತಿ ವಾಸ ಮಾಡುತ್ತಿದ್ದ ಮನೆಗೆ ನುಗ್ಗಿ ಸಹಚರರ ಜೊತೆ ಕಿರುಕುಳ ನೀಡಿದ್ದಾನೆ. ಹಣಕ್ಕೂ ಬೇಡಿಕೆಯಿಟ್ಟಿದ್ದು, ಹಣ ಕೊಡದಿದ್ದರೆ ಆಕೆಯ ಖಾಸಗಿ ಫೋಟೋ, ವೀಡಿಯೋ ಹರಿಬಿಡುವ ಬೆದರಿಕೆ ಹಾಕಿದ್ದಾನೆ ಎಂದು ಯುವತಿ ಆರೋಪಿಸಿ, ದೂರು ನೀಡಿದ್ದಾರೆ.
ಈ ಹಿನ್ನೆಲೆಯಲ್ಲಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಬ್ರಾಹ್ಮಣ ಸಮುದಾಯಕ್ಕೆ ಸಚಿವ ಸ್ಥಾನ ತಪ್ಪಿದ್ದು ನಿಜ: ನನ್ನನ್ನು ಸಮಾಧಾನಪಡಿಸುವ ಅಗತ್ಯವಿಲ್ಲ ಸಚಿವ ಸ್ಥಾನದ ವಿಚಾರ ಈಗ ಮುಗಿದ ಅಧ್ಯಾಯ ಎಂದ ದಿನೇಶ್ ಗುಂಡೂರಾವ್
ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ನಂತರ ಅತೃಪ್ತಗೊಂಡಿರುವ ಶಾಸಕರ ಪಟ್ಟಿಯಲ್ಲಿ ಕೇಳಿಬರುತ್ತಿರುವ ಮಾಜಿ ಸಚಿವ ದಿನೇಶ್ ಗುಂಡೂರಾವ್ ಅವರು ತಮ್ಮ ನಿಲುವನ್ನು ಸ್ಪಷ್ಟಪಡಿಸಿದ್ದಾರೆ. ಸಚಿವ ಸ್ಥಾನ...








