ಲೈಂಗಿಕ ಕಿರುಕುಳ ನೀಡುತ್ತಿದ್ದ ಕಾಮುಕನಿಗೆ ಧರ್ಮದೇಟು
ಉಡುಪಿ: ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ ಯುವಕನಿಗೆ ಜನರು ಧರ್ಮದೇಟು ನೀಡಿರುವ ಘಟನೆ ಉಡುಪಿಯ ಅಜ್ಜರಕಾಡು ಬಳಿ ನಡೆದಿದೆ.
ಅಂಬಲಪಾಡಿಯ ನಿವಾಸಿ ರಸೇಲ್ ಗಾಮಾ ದೌರ್ಜನ್ಯವೆಸಗಿದ ಆರೋಪಿ ಎಂದು ಗುರುತಿಸಲಾಗಿದೆ. ಅಜ್ಜರ ಕಾಡು ಸರಕಾರಿ ಕಾಲೇಜು ವಿದ್ಯಾರ್ಥಿನಿ ದೌರ್ಜನ್ಯಕ್ಕೆ ಒಳಗಾದ ಸಂತ್ರಸ್ತೆ. ಕಾಮುಕನಿಗೆ ಧರ್ಮದೇಟು ನೀಡಿದ ಜನರು ಬಳಿಕ ಪೊಲೀಸರಿಗೆ ಒಪ್ಪಿಸಿದ್ದಾರೆ.
ನಡೆದ್ದೇನು?: ಏಪ್ರಿಲ್ 19 (ಮಂಗಳವಾರ) ಅಜ್ಜರ ಕಾಡು ಸರಕಾರಿ ಕಾಲೇಜು ವಿದ್ಯಾರ್ಥಿನಿ, ಪರೀಕ್ಷೆ ಮುಗಿಸಿಕೊಂಡು ಮನೆಗೆ ತೆರಳಲು ಅಜ್ಜರಕಾಡು ಎಲ್ ಐಸಿ ಎದುರು ಬಸ್ ಗಾಗಿ ಕಾಯುತ್ತಾ ನಿಂತಿದ್ದಳು. ಈ ವೇಳೆ ಸ್ಥಳಕ್ಕೆ ಬಂದ ಆರೋಪಿ ರಸೇಲ್ ಗಾಮಾ ತಾನು ಬಂದ ತುಸು ದೂರಿನಲ್ಲಿ ಸ್ಕೂಟಿ ನಿಲ್ಲಿಸಿದ್ದಾನೆ.
ನಂತರ ಏಕಾಏಕಿ ವಿದ್ಯಾರ್ಥಿನಿಯ ಮೈಮೇಲೆ ಎರಗಿ ಕೆಳಗಿ ಬೀಳಿಸಿ ವಿದ್ಯಾರ್ಥನಿಗೆ ಲೈಂಗಿಕ ಕಿರುಕುಳ ನೀಡಲು ಯತ್ನಿಸಿದ್ದಾನೆ. ಆಗ ವಿದ್ಯಾರ್ಥಿನಿ ಜೋರಾಗಿ ಕಿರುಚಾಡಿದ್ದಾಳೆ. ಕೂಡಲೇ ಸಹಾಯಕ್ಕೆ ಧಾವಿಸಿದ ಸಾರ್ವಜನಿಕರು ಕಾಮುಕನಿಗೆ ಥಳಿಸಿ ಪೊಲೀಸರಿಗೆ ಒಪ್ಪಿಸಿದ್ದಾರೆ. ಸದ್ಯ ಉಡುಪಿ ಮಹಿಳಾ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.