ಅಮೆರಿಕಾದಲ್ಲಿದ್ದೇ ಕನ್ನಡಿಗರಿಗೆ ನೆರವಾದ ಶಾಸ್ತ್ರಿ ನಟಿ ಮಾನ್ಯ
ಬೆಂಗಳೂರು: ದೇಶದಲ್ಲಿ ಕೋವಿಡ್ 2ನೇ ಅಲೆ ಸೃಷ್ಟಿಸಿರುವ ಭೀಕರ ಪರಿಸ್ಥಿತಿಗೆ ಜನರು ಅದ್ರಲ್ಲು ಬಡವರು ತತ್ತರಿಸಿಹೋಗಿದ್ದಾರೆ. ಒಂದೆಡೆ ಆಕ್ಸಿಜನ್ ಕೊರೆತ, ಬೆಡ್ ಕೊರತೆ ಮತ್ತೊಂದೆಡೆ , ಸರಿಯಾದ ಸಮಯಕ್ಕೆ ಚಿಕಿತ್ಸೆ ಸಿಗದೇ , ಚಿಕಿತ್ಸೆಗೆ ಹಣವಿಲ್ಲದೇ ಪರದಾಡುವ ಸ್ಥಿತಿ ಇದೆ.. ದಿನೇ ದಿನೇ , ಸೋಂಕಿತರ ಸಂಖ್ಯೆ , ಸಾವಿನ ಸಂಖ್ಯೆ ಹೆಚ್ಚಾಗ್ತಲೇ ಇದೆ..
ಈ ನಡುವೆ ಸ್ಯಾಂಡಲ್ ವುಡ್ , ಬಾಲಿವುಡ್ , ಟಾಲಿವುಡ್ , ಕಾಲಿವುಡ್ ನ ಅನೇಕ ಸಿನಿಮಾ ತಾರೆಯರು ಬಡವರಿಗೆ , ಕೋವಿಡ್ ಸೋಂಕಿತರಿಗೆ ತಮಗೆ ತೋಚಿದ ಸಹಾಯಗಳನ್ನ ಮಾಡುತ್ತಿದ್ದಾರೆ. ಕಿಚ್ಚ ಸುದೀಪ್ , ಶ್ರೀಮುರುಳಿ, ರಾಗಿಣಿ, ಅಕ್ಷಯ್ ಕುಮಾರ್ , ಸಲ್ಮಾನ್ ಖಾನ್ , ಸೋನು ಸೂದ್ , ಹೀಗೆ ಹಲವರು ಕಷ್ಟದ ಸಂದರ್ಭದಲ್ಲಿ ಸಹಾಯಾಸ್ತ ಚಾಚಿದ್ದಾರೆ.
ಮತ್ತೊಂದೆಡೆ ಅನೇಕ ಸೆಲೆಬ್ರಿಟಿಗಳು ಜೀವ ಕಳೆದುಕೊಂಡಿದ್ದಾರೆ.. ಇನ್ನೂ ಹಲವರು ತಮ್ಮರನ್ನ ಕಳೆದುಕೊಂಡ ದೂಃಖದಲ್ಲಿದ್ದಾರೆ. ಇನ್ನೂ ಅನೇಕರು ಆಗಾಗ ಸಾಮಾಜಿಕ ಜಾಲತಾಣಗಳ ಮೂಲಕ ಜನರಿಗೆ ಜಾಗೃತಿ ಮೂಡಿಸುವ ಪ್ರಯತ್ನದಲ್ಲಿದ್ದಾರೆ.
ಮತ್ತೊಂದೆಡೆ ಸಸಿನಿಮಾರಂಗದಲ್ಲಿ ಕೆಲಸ ಮಾಡುವ ಬಹುತೇಕ ಕಲಾವಿದರು, ತಂತ್ರಜ್ಞರು ಹಾಗೂ ಕಾರ್ಮಿಕರಿಗೆ ಸಹಾಯ ಮಾಡಲು ಸ್ಯಾಂಡಲ್ವುಡ್ ನಟ ಉಪೇಂದ್ರ ಅವರು ಮುಂದಾಗಿದ್ದು, ಅವರ ಜೊತೆಗೆ ಶೋಭರಾಜ್ ಸಾಧುಕೋಕಿಲ ಸೇರಿದಂತೆ ಅನೇಕರು ಅವರ ಜೊತೆಗೆ ಕೈ ಜೋಡಿಸಿದ್ದಾರೆ.
ತಮ್ಮ ಕೈಲಾದಷ್ಟು ದೇಣಿಗೆ ನೀಡುವ ಮೂಲಕ ಅಗತ್ಯ ಇರುವವರಿಗೆ ನೆರವು ತಲುಪುವಂತೆ ಮಾಡುತ್ತಿದ್ದಾರೆ. ಈ ಬಗ್ಗೆ ಉಪೇಂದ್ರ ಅವರು ಸಾಮಾಜಿಕ ಜಾಲತಾಣದ ಮೂಲಕ ಮಾಹಿತಿ ಹಂಚಿಕೊಂಡಿದ್ದಾರೆ. ಇದೀಗ ಅಮೆರಿಕಾದಲ್ಲಿ ನೆಲೆಸಿರುವ ‘ಶಾಸ್ತ್ರೀ’ ಸುಂದರಿ ಕನ್ನಡಿಗರ ಸಹಾಯಕ್ಕೆ ಮುಂದಾಗಿದ್ದಾರೆ.
ನಟಿ ಮಾನ್ಯ ಅಮೆರಿಕಾದಿಂದಲೇ ಕನ್ನಡಿಗರ ಸಂಕಷ್ಕ್ಕೆ ಸಹಾಯ ಮಾಡಿದ್ದಾರೆ. ಲಕ್ಷ ರುಪಾಯಿ ದೇಣಿಗೆ ರೂಪದಲ್ಲಿ ನೀಡಿದ್ಧಾರೆ. ಈ ಹಣದಿಂದ ದಿನಸಿ ಕಿಟ್ ಸದ್ಯದಲ್ಲೇ ವಿತರಿಸಿ ಅದರ ವಿವರ ತಿಳಿಸುತ್ತೇವೆ ಎಂದು ಉಪೇಂದ್ರ ಅವರು ಟ್ವೀಟ್ ಮಾಡಿದ್ದಾರೆ.
ಕೊರೊನ ಮಹಾಮಾರಿ:
ಕೊರೊನ ವೈರಸ್ ಹರಡಲು ಬೇಕಾಗಿರುವುದು ನಮ್ಮ ಸಹಾಯ ಆದರೆ ಹರಡದಂತೆ ಮಾಡಬೇಕಾಗಿರುದು ನಮ್ಮ ಸಹಕಾರ”.
ತಪ್ಪದೇ ಹೊರಗೆ ಹೋದಾಗ ಸ್ವಚ್ಛವಾದ ಮಾಸ್ಕ ಧರಿಸಿ.
ಸಾರ್ವಜನಿಕ ಸ್ಥಳಗಳಲ್ಲಿ ಸಾಮಾಜಿಕ ಅಂತರ ಕಾಪಾಡಿಕೊಳ್ಳಿ .
ಜನ ನಿಬಿಡ ಪ್ರದೇಶದಿಂದ ದೂರವಿರಿ.
ಮನೆ ಸಮೀಪದ ಅಂಗಡಿಯಲ್ಲಿ ಫೋನ್ ಮೂಲಕ ತಮಗೆ ಬೇಕಾದ ದಿನಸಿ ಮತ್ತು ಇತರ ವಸ್ತುಗಳನ್ನು ಪಟ್ಟಿ ಮಾಡಿ ನಿರ್ದಿಷ್ಟ ಸಮಯ ಗೊತ್ತು ಮಾಡಿ.
ನಿಮ್ಮ ಮನೆಗೆ ನೀವೇ ಲಕ್ಷ್ಮಣ ರೇಖೆ ಸೃಷ್ಟಿ ಮಾಡಿ.
ಅನಗತ್ಯ ಓಡಾಟ ಸಲ್ಲದು. ಹೊರಗಡೆ ಹೋಗಿ ಬಂದ ಮೇಲೆ ಬಟ್ಟೆ ಬದಲಾಯಿಸಿ ಸ್ನಾನ ಮಾಡಿ.
ನಮ್ಮ ಹೋರಾಟ ಕೊರೊನ ನಿರ್ಮೂಲನೆಯತ್ತ.
ಇದು ಸಾಕ್ಷ ಟಿವಿಯ ಕಳಕಳಿಯ ವಿನಂತಿ.