ಸಿಂಹ ದತ್ತು ಪಡೆದು ದರ್ಶನ್ ಹೆಸರಿಟ್ಟ ನಿರ್ಮಾಪಕಿ ಶೈಲಜಾ ನಾಗ್ , ವಿ.ಹರಿಕೃಷ್ಣ
ಕೊರೊನಾ ಸಂಕಷ್ಟದಲ್ಲಿ ಮನುಷ್ಯರು ಅಷ್ಟೇ ಅಲ್ದೇ ಪ್ರಾಣಿಗಳು ಸಹ ಸಂಕಷ್ಟಕ್ಕೆ ಸಿಲುಕಿವೆ.. ಲಾಕ್ ಡಡೌನ್ ನಿಂದಾಗಿ ರಾಜ್ಯದಲ್ಲಿ 9 ಮೃಗಾಲಯಗಳು ಆರ್ಥಿಕವಾಗಿ ಸಂಕಷ್ಟಕ್ಕೆ ಸಿಲುಕಿವೆ.. ಹೀಗಾಗಿ ಇತ್ತೀಚೆಗೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ವಿಡಿಯೋ ಮುಖಾಂತರ ಪ್ರಾಣಿಗಳನ್ನ ದತ್ತು ಪಡೆದು ನೆರವಾಗುವಂತೆ ಮನವಿ ಮಾಡಿಕೊಂಡಿದ್ದರು.. ಇದಾದ ನಂತರ ಅಭಿಮಾನಿಗಳುಪ್ರಾಣಿಗಳನ್ನದತ್ತು ಪಡೆಯಲು ಮುಗಿಬಿದ್ದಿದ್ದಾರೆ.
ಇದೀಗ ಸಿನಿಮಾ ನಿರ್ಮಾಪಕಿ ಶೈಲಜಾ ನಾಗರಾಜ್ ಹಾಗೂ ಸಂಗೀತ ನಿರ್ದೇಶಕ ವಿ.ಹರಿಕೃಷ್ಣ ಸಿಂಹವೊಂದನ್ನು ದತ್ತು ಪಡೆದಿದ್ದಾರೆ. ದರ್ಶನ್ ನಟಿಸಿದ್ದ ‘ಯಜಮಾನ’ ಸಿನಿಮಾ ನಿರ್ಮಾಣ ಮಾಡಿದ್ದ ಶೈಲಜಾ ನಾಗರಾಜ್, ಹಾಗೂ ಸಂಗೀತ ನಿರ್ದೇಶಕ ಹರಿಕೃಷ್ಣ, ಮೈಸೂರಿನ ಚಾಮರಾಜೇಂದ್ರ ಮೃಗಾಲಯದಲ್ಲಿರುವ ಸಿಂಹವೊಂದನ್ನು ದತ್ತು ಪಡೆದಿದ್ದಾರೆ. ದತ್ತು ಪಡೆದ ಸಿಂಹಕ್ಕೆ ದರ್ಶನ್ ಎಂದು ಹೆಸರಿಟ್ಟಿದ್ದಾರೆ. ಇನ್ನೂ ನಿರರ್ಮಾಪಕಿ ಶೈಲಜಾ ನಾಗರಾಜ್ ಹಾಗೂ ವಿ.ಹರಿಕೃಷ್ಣ ಅವರಿಗೆ ದರ್ಶನ್ ಸಾಮಾಜಿಕ ಜಾಲತಾಣದಲ್ಲಿ ಧನ್ಯವಾದ ಸಲ್ಲಿಸಿದ್ದಾರೆ.
ಕೊರೊನ ಮಹಾಮಾರಿ:
ಕೊರೊನ ವೈರಸ್ ಹರಡಲು ಬೇಕಾಗಿರುವುದು ನಮ್ಮ ಸಹಾಯ ಆದರೆ ಹರಡದಂತೆ ಮಾಡಬೇಕಾಗಿರುದು ನಮ್ಮ ಸಹಕಾರ”.
ತಪ್ಪದೇ ಹೊರಗೆ ಹೋದಾಗ ಸ್ವಚ್ಛವಾದ ಮಾಸ್ಕ ಧರಿಸಿ.
ಸಾರ್ವಜನಿಕ ಸ್ಥಳಗಳಲ್ಲಿ ಸಾಮಾಜಿಕ ಅಂತರ ಕಾಪಾಡಿಕೊಳ್ಳಿ .
ಜನ ನಿಬಿಡ ಪ್ರದೇಶದಿಂದ ದೂರವಿರಿ.
ಮನೆ ಸಮೀಪದ ಅಂಗಡಿಯಲ್ಲಿ ಫೋನ್ ಮೂಲಕ ತಮಗೆ ಬೇಕಾದ ದಿನಸಿ ಮತ್ತು ಇತರ ವಸ್ತುಗಳನ್ನು ಪಟ್ಟಿ ಮಾಡಿ ನಿರ್ದಿಷ್ಟ ಸಮಯ ಗೊತ್ತು ಮಾಡಿ.
ನಿಮ್ಮ ಮನೆಗೆ ನೀವೇ ಲಕ್ಷ್ಮಣ ರೇಖೆ ಸೃಷ್ಟಿ ಮಾಡಿ.
ಅನಗತ್ಯ ಓಡಾಟ ಸಲ್ಲದು. ಹೊರಗಡೆ ಹೋಗಿ ಬಂದ ಮೇಲೆ ಬಟ್ಟೆ ಬದಲಾಯಿಸಿ ಸ್ನಾನ ಮಾಡಿ.
ನಮ್ಮ ಹೋರಾಟ ಕೊರೊನ ನಿರ್ಮೂಲನೆಯತ್ತ.
ಇದು ಸಾಕ್ಷ ಟಿವಿಯ ಕಳಕಳಿಯ ವಿನಂತಿ.