ADVERTISEMENT
Sunday, September 20, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Uncategorized

ಶಕ್ತಿಪೀಠ ದರ್ಶನ ಮಾಡಿದರೆ ಮನೆಯಲ್ಲಿ ಅಷ್ಟೈಶ್ವರ್ಯ ವೃದ್ಧಿ, ಸಂಕಷ್ಟ ದೂರ

ಶಕ್ತಿಪೀಠ ದರ್ಶನ ಮಾಡಿದರೆ ಮನೆಯಲ್ಲಿ ಅಷ್ಟೈಶ್ವರ್ಯ ವೃದ್ಧಿ, ಸಂಕಷ್ಟ ದೂರ

Saaksha Editor by Saaksha Editor
September 21, 2025
in Uncategorized
Shakti Peetha Darshan Benefits: Attract Wealth and Remove Life Troubles

ದೇವಿ

Share on FacebookShare on TwitterShare on WhatsappShare on Telegram

ತ್ರಿದೇವಿ ಸ್ವರೂಪಿ ಶಕ್ತಿ ಪೀಠ ಶ್ರೀ ಕ್ಷೇತ್ರಕ್ಕೆ ದರ್ಶನ ಮಾಡಿ ಬಂದರೆ ಮನೆಯಲ್ಲಿ ಸದಾಕಾಲ ಅಷ್ಟೈಶ್ವರ್ಯ ವೃದ್ಧಿಯಾಗಿ ಸಂಕಷ್ಟ ದೂರವಾಗುತ್ತದೆ..!! ಇಲ್ಲಿನ ಐತಿಹ್ಯಗಳ ಅನುಸಾರ, ಇಲ್ಲಿ ತಪಸ್ಸು ಮಾಡುತ್ತಿದ್ದ ಕೋಲ ಮಹರ್ಷಿಗೆ ಓರ್ವ ರಾಕ್ಷಸನು ತೊಂದರೆ ನೀಡಿದ; ಈ ರಾಕ್ಷಸನೂ ಸಹ ತನ್ನ ಸ್ವಾಮಿ ಶಿವನನ್ನು ಮೆಚ್ಚಿಸಿ ಅವನಿಂದ ವರವೊಂದನ್ನು ಪಡೆಯುವುದಕ್ಕಾಗಿ ಶಿವನ ಕುರಿತು ತಪಸ್ಸಿನಲ್ಲಿ ತನ್ನನ್ನು ತೊಡಗಿಸಿಕೊಂಡಿದ್ದ.

Related posts

bigg-boss-kannada-kiccha-sudeep-class-to-modern-manja-and-agni-boys-in-new-promo

ಕಲರ್ಸ್ ಕನ್ನಡದ ಹೊಸ ಪ್ರೋಮೋ ಸಖತ್ ವೈರಲ್: ವಾರದ ಪಂಚಾಯಿತಿಯ ಕಿಚ್ಚನ ಖಡಕ್ ಕ್ಲಾಸ್

September 20, 2026
upendra-birthday-next-level-movie-first-look-released-tarun-shivappa

ರಿಯಲ್ ಸ್ಟಾರ್’ ಉಪೇಂದ್ರ ಹುಟ್ಟುಹಬ್ಬಕ್ಕೆ ಅಭಿಮಾನಿಗಳಿಗೆ ಭರ್ಜರಿ ಗಿಫ್ಟ್: ತರುಣ್ ಶಿವಪ್ಪ ನಿರ್ಮಾಣದ ‘ನೆಕ್ಸ್ಟ್ ಲೆವೆಲ್’ ಫಸ್ಟ್ ಲುಕ್ ರಿಲೀಸ್!

September 20, 2026

ಈ ರಾಕ್ಷಸನು ತನ್ನ ದುಷ್ಟ ಬಯಕೆಯನ್ನು ಪೂರೈಸಿಕೊಳ್ಳದಂತೆ ಅವನನ್ನು ತಡೆಗಟ್ಟುವ ಸಲುವಾಗಿ, ಆದಿಶಕ್ತಿಯು ಅವನನ್ನು ಮಾತುಬಾರದ (ಮೂಕ) ವ್ಯಕ್ತಿಯನ್ನಾಗಿಸಿದಳು. ಹೀಗಾಗಿ ಸ್ವಾಮಿ ಶಿವನು ಅವನ ಮುಂದೆ ಕಾಣಿಸಿಕೊಂಡಾಗ (ಅಂದರೆ ಪ್ರತ್ಯಕ್ಷನಾದಾಗ) ಅವನಿಂದ ಏನನ್ನು ಕೇಳಲೂ ರಾಕ್ಷಸನಿಗೆ ಆಗದಂತಾಯಿತು. ತತ್ಪರಿಣಾಮವಾಗಿ ಅವನು ರೋಷಗೊಂಡ ಮತ್ತು ವಿಮೋಚನೆಗಾಗಿ ಆದಿಶಕ್ತಿಯನ್ನು ಪ್ರಾರ್ಥಿಸಿದ ಕೋಲ ಮಹರ್ಷಿಗೆ ತಕ್ಷಣವೇ ತೊಂದರೆ ಕೊಡಲು ಆರಂಭಿಸಿದ.

ಮೂಕಾಸುರ ರಾಕ್ಷಸನನ್ನು ಪರಾಭವಗೊಳಿಸಿದ ಆದಿಶಕ್ತಿಯನ್ನು ಕುರಿತು ದೇವರುಗಳು ಗುಣಗಾನ ಮಾಡಿ ಅವಳನ್ನು ಮೂಕಾಂಬಿಕಾ ಎಂದು ಕರೆದರು. ಕೋಲ ಮಹರ್ಷಿಯ ಪ್ರಾರ್ಥನೆಯ ಅನುಸಾರವಾಗಿ, ಆ ದಿವ್ಯಮಾತೆಯು ಎಲ್ಲಾ ದೇವರುಗಳ ಜೊತೆಗೂಡಿ ಅಲ್ಲಿಯೇ ನೆಲೆಗೊಂಡಳು ಹಾಗೂ ಭಕ್ತರಿಂದ ಶಾಶ್ವತವಾಗಿ ಪೂಜಿಸಲ್ಪಡುವಂಥ ಭಕ್ತಿ-ಪರಂಪರೆಗೆ ಈ ಸನ್ನಿವೇಶವು ನಾಂದಿಯಾಯಿತು. ಶ್ರೀ ಆದಿ ಶಂಕರಾಚಾರ್ಯರು ತಾವು ಪಡೆದ ಶ್ರೀ ಮೂಕಾಂಬಿಕಾ ದೇವಿಯ ಒಂದು ದರ್ಶನ ಅಥವಾ ಅಂತರ್ದೃಷ್ಟಿಯ ಅನುಸಾರವಾಗಿ ಈ ದೇವತೆಯನ್ನು ಇಲ್ಲಿ ಪ್ರತಿಷ್ಠಾಪಿಸಿದರು ಎಂಬುದಾಗಿ ನಂಬಲಾಗಿದೆ.

ಆ ಕಥೆಯು ಹೀಗೆ ಸಾಗುತ್ತದೆ. ಕೊಡಚಾದ್ರಿ ಬೆಟ್ಟಗಳಲ್ಲಿ ಆದಿ ಶಂಕರರು ಧ್ಯಾನಮಾಡಿದರು ಮತ್ತು ಅವರ ಮುಂದೆ ಪ್ರತ್ಯಕ್ಷಳಾದ ದೇವಿಯು ಅವರ ಬಯಕೆಯೇನೆಂದು ಕೇಳಿದಳು. ತಾನು ಪೂಜಿಸಲು ಬಯಸಿರುವ ಕೇರಳದಲ್ಲಿನ ಸ್ಥಳವೊಂದರಲ್ಲಿ ದೇವಿಯನ್ನು ಸಂಘಟಿಸಿ-ಸ್ಥಾಪಿಸುವ ತಮ್ಮ ಬಯಕೆಯನ್ನು ಅವರು ಹೊರಗೆಡವಿದರು.ಇದಕ್ಕೆ ದೇವಿ ಸಮ್ಮತಿಸಿದಳು ಮತ್ತು ಅವರ ಮುಂದೆ ಒಂದು ಸವಾಲನ್ನೂ ಇರಿಸಿದಳು.

ಇದನ್ನೂ ಓದಿ: ಪಿತೃಪಕ್ಷ ಪೂಜೆ ಮಾಡುವ ಮುನ್ನ ತಿಳಿಯಲೇಬೇಕಾದ ವಿಚಾರಗಳಿವು

ತಾನು ಶಂಕರರನ್ನು ಅನುಸರಿಸುವುದಾಗಿಯೂ ಮತ್ತು ಶಂಕರರು ತಮ್ಮ ಗಮ್ಯಸ್ಥಾನವನ್ನು ತಲುಪುವರೆಗೂ ಹಿಂದಿರುಗಿ ನೋಡಬಾರದೆಂಬುದೇ ಈ ಸವಾಲಾಗಿತ್ತು. ಆದರೆ ಶಂಕರರನ್ನು ಪರೀಕ್ಷಿಸುವ ದೃಷ್ಟಿಯಿಂದ ದೇವಿಯು ತನ್ನ ನಡೆಗೆ ಉದ್ದೇಶಪೂರ್ವಕವಾಗಿ ಅಲ್ಪವಿರಾಮ ನೀಡಿದಳು.

ದೇವಿಯ ಕಾಲ್ಗೆಜ್ಜೆಗಳ ಧ್ವನಿಯು ಶಂಕರರಿಗೆ ಕೇಳದಾದಾಗ, ಅವರು ತತ್‌ಕ್ಷಣವೇ ಹಿಂದಿರುಗಿ ನೋಡಿದರು. ಆಗ ದೇವಿಯು ಅವರನ್ನು ಅನುಸರಿಸುವುದನ್ನು ನಿಲ್ಲಿಸಿದಳು ಮತ್ತು ತನ್ನನ್ನು ಶಂಕರರು ನೋಡುತ್ತಿದ್ದಂತೆ ಆ ಸ್ಥಳದಲ್ಲಿ ತನ್ನ ವಿಗ್ರಹವನ್ನು ಪ್ರತಿಷ್ಠಾಪಿಸುವಂತೆ ಶಂಕರರಿಗೆ ತಿಳಿಸಿದಳು. ಕೊಲ್ಲೂರು ಕ್ಷೇತ್ರವು, ಗೋಕರ್ಣದಿಂದ ಕನ್ಯಾಕುಮಾರಿಯವರೆಗೆ ಹಬ್ಬಿದ್ದ ಪ್ರಾಚೀನ ಕೇರಳದ ಒಂದು ಭಾಗವೂ ಆಗಿತ್ತು.

ಕೇರಳ ಹುಟ್ಟಿದ್ದು ಹೇಗೆ?

ಕೇರಳದ ಹುಟ್ಟಿನ ಕುರಿತಾದ ಒಂದಷ್ಟು ಪುರಾಣ ಕಥೆಗಳನ್ನು ಕಾಣಬಹುದಾಗಿದೆ. ಓರ್ವ ಯೋಧಸನ್ಯಾಸಿ ಅಥವಾ ವೀರಸನ್ಯಾಸಿಯಾಗಿದ್ದ ಪರಶುರಾಮನಿಂದ ಕೇರಳವು ಸೃಷ್ಟಿಯಾದದ್ದು ಅಂಥದ್ದೊಂದು ಪುರಾಣ ಕಥೆ ಎನಿಸಿಕೊಂಡಿದೆ.

ಬ್ರಾಹ್ಮಣರ ಪುರಾಣವು ಪ್ರಕಟಪಡಿಸುವ ಪ್ರಕಾರ, ಮಹಾವಿಷ್ಣುವಿನ ಒಂದು ಅವತಾರವಾದ ಪರಶುರಾಮನು ತನ್ನ ಕದನ ಕೊಡಲಿಯನ್ನು ಸಮುದ್ರದೊಳಗೆ ಎಸೆದ. ಇದರ ಪರಿಣಾಮವಾಗಿ ಕೇರಳದ ಭೂಭಾಗವು ಹುಟ್ಟಿಕೊಂಡಿತು ಮತ್ತು ಜಲರಾಶಿಯಿಂದ ಇದನ್ನು ವಾಸಯೋಗ್ಯವನ್ನಾಗಿ ಪರಿವರ್ತಿಸಲಾಯಿತು.

ವಿಷ್ಣುವಿನ ಹತ್ತು ಅವತಾರಗಳ (ಮೈದಾಳುವಿಕೆ) ಪೈಕಿ ಪರಶುರಾಮನದು ಆರನೆಯ ಅವತಾರವಾಗಿತ್ತು. ಪರಶು ಎಂಬ ಪದವು ಸಂಸ್ಕೃತದಲ್ಲಿ ‘ಕೊಡಲಿ’ ಎಂಬ ಅರ್ಥವನ್ನು ನೀಡುತ್ತದೆ. ಆದ್ದರಿಂದ ಪರಶುರಾಮ ಎಂದರೆ ‘ಕೊಡಲಿಯನ್ನು ಹೊಂದಿರುವ ರಾಮ’ ಎಂದರ್ಥ.

ಆಳುವ ಕುಲಕ್ಕೆ ಸೇರಿದ ಕ್ಷತ್ರಿಯರ ಸೊಕ್ಕಿನ ಪೀಡನೆಯಿಂದ ಪ್ರಪಂಚವನ್ನು ವಿಮೋಚನೆಗೊಳಿಸುವುದು ಅವನ ಜನನದ ಗುರಿಯಾಗಿತ್ತು. ಭೂಮಿಯ ಮೇಲಿನ ಎಲ್ಲಾ ಪುರುಷ ಕ್ಷತ್ರಿಯರನ್ನು ಅವನು ಸಾಯಿಸಿದ ಮತ್ತು ಅವರ ರಕ್ತವನ್ನು ಐದು ಸರೋವರಗಳಲ್ಲಿ ಭರ್ತಿಮಾಡಿದ. ಕ್ಷತ್ರಿಯ ರಾಜರನ್ನು ನಾಶಪಡಿಸಿದ ನಂತರ, ತನ್ನ ಪಾಪಗಳಿಗಾಗಿ ಪ್ರಾಯಶ್ಚಿತ್ತವನ್ನು ಮಾಡಿಕೊಳ್ಳುವ ಮಾರ್ಗವೊಂದನ್ನು ಕಂಡುಕೊಳ್ಳಲು ಅವನು ವಿದ್ವಜ್ಜನರ ಸಮೂಹವನ್ನು ಸಂಪರ್ಕಿಸಿದ.

ಶಾಶ್ವತ ನರಕ-ಶಿಕ್ಷೆಯಿಂದ ತನ್ನ ಆತ್ಮವನ್ನು ರಕ್ಷಿಸಿಕೊಳ್ಳಬೇಕೆಂದರೆ, ತಾನು ಜಯಿಸಿದ್ದ ಭೂಭಾಗಗಳನ್ನು ಬ್ರಾಹ್ಮಣರಿಗೆ ಅವನು ಹಸ್ತಾಂತರಿಸಬೇಕು ಎಂಬ ಸಲಹೆಯು ಅವನಿಗೆ ದಕ್ಕಿತು. ಅವರು ಸಲಹೆ ನೀಡಿದಂತೆಯೇ ಅವನು ನಡೆದುಕೊಂಡ ಮತ್ತು ಗೋಕರ್ಣಂನಲ್ಲಿ ಧ್ಯಾನಕ್ಕೆ ಕುಳಿತುಕೊಂಡ.

ಅಲ್ಲಿ ಸಾಗರಗಳ ದೇವರಾದ ವರುಣ ಮತ್ತು ಭೂಮಿಯ ದೇವತೆಯಾದ ಭೂಮಿದೇವಿ ಅವನನ್ನು ಹರಸಿದರು. ಗೋಕರ್ಣಂನಿಂದ ಹೊರಟು ಅವನು ಕನ್ಯಾಕುಮಾರಿಯನ್ನು ತಲುಪಿದ ಮತ್ತು ತನ್ನ ಕೊಡಲಿಯನ್ನು ಸಾಗರದ ಆ ಬದಿಯ ಉತ್ತರದ ಕಡೆಗೆ ಎಸೆದ. ಆ ಕೊಡಲಿಯು ಬಂದು ನೆಲೆಗೊಂಡ ಸ್ಥಳವು ಕೇರಳವಾಗಿತ್ತು. ಇದು ಗೋಕರ್ಣಂ ಮತ್ತು ಕನ್ಯಾಕುಮಾರಿಗಳ ನಡುವೆ ನೆಲೆಗೊಂಡಿರುವ 160 ಕಾತಮ್‌ನಷ್ಟಿರುವ (ಒಂದು ಹಳೆಯ ಅಳತೆ) ಭೂಭಾಗವಾಗಿತ್ತು.

ಪುರಾಣಗಳು ಹೇಳುವ ಪ್ರಕಾರ, ಪರಶುರಾಮನು 64 ಬ್ರಾಹ್ಮಣ ಕುಟುಂಬಗಳನ್ನು ಕೇರಳದಲ್ಲಿ ನೆಲೆಗೊಳಿಸಿದ; ಕ್ಷತ್ರಿಯರನ್ನು ತಾನು ಕೊಂದ ಪಾಪಕ್ಕೆ ಪ್ರಾಯಶ್ಚಿತ್ತ ಮಾಡಿಕೊಳ್ಳಲೆಂದು ಇವರನ್ನು ಆತ ಉತ್ತರದಿಂದ ಕರೆತಂದ. ಪುರಾಣಗಳ ಅನುಸಾರ, ಕೇರಳವು ಪರಶುರಾಮ ಕ್ಷೇತ್ರಂ, ಅಂದರೆ, ‘ಪರಶುರಾಮನ ಭೂಭಾಗ’ ಎಂಬುದಾಗಿಯೂ ಕರೆಯಲ್ಪಡುತ್ತದೆ; ಸಮುದ್ರದಿಂದ ಸದರಿ ಭೂಭಾಗವನ್ನು ಅವನು ವಾಸಯೋಗ್ಯವಾಗಿಸಿದ ಎಂಬ ಐತಿಹ್ಯವೇ ಈ ಹೆಸರಿಗೆ ಕಾರಣ.

ಲೇಖಕರು: ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ, ದೈವಜ್ಞ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ರಾವ್

ನಿಮ್ಮ ಜೀವನದ ಯಾವುದೇ ಗುಪ್ತ,ಪ್ರೀತಿ-ಪ್ರೇಮ ದಾಂಪತ್ಯ,ವೈವಾಹಿಕ,ವ್ಯವಹಾರಿಕ ಎಂತಹ ಸಮಸ್ಯೆಗಳೇ ಇದ್ದರೂ ಆ ಸಮಸ್ಯೆಗಳಿಗೆ ದೈವಿಕ ವಿಧಿವಿಧಾನದ ಶಾಸ್ತ್ರೋವಾದ ಮಾರ್ಗವನ್ನು ಕೆಲವೇ ಗಂಟೆಯಲ್ಲಿ ಪೋನಿನ ಮೂಲಕ ಶಾಶ್ವತವಾಗಿ ಪರಿಹಾರ ತಿಳಿಸಿಕೊಡುತ್ತಾರೆ  ತಪ್ಪದೆ ಕರೆ ಮಾಡಿ 85489 98564

ಮತ್ತಷ್ಟು ಜ್ಯೋತಿಷ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್‌ ಮಾಡಿ

Tags: Benefits of Shakti Peetha VisitdasaraDevi temples for prosperityGoddess blessings for successPilgrimage for successPowerful temples for wealthReligious travel IndiaRemove problems through DarshanShakti Peetha DarshanShakti Temples in IndiaWealth through Shakti Peethaಐಶ್ವರ್ಯ ಹೆಚ್ಚುವ ದರ್ಶನಕಷ್ಟ ನಿವಾರಣೆಗೆ ಶಕ್ತಿಪೀಠಕಷ್ಟ ಪರಿಹಾರ ದರ್ಶನದೇವಿಯ ಆಶೀರ್ವಾದಧಾರ್ಮಿಕ ಪ್ರವಾಸಮನೆಯಲ್ಲಿ ಐಶ್ವರ್ಯಲಕ್ಷ್ಮಿ ಶಕ್ತಿ ದರ್ಶನಶಕ್ತಿ ದೇವಸ್ಥಾನದಲ್ಲಿ ಶ್ರದ್ಧೆಶಕ್ತಿ ದೇವಾಲಯಶಕ್ತಿ ಪೂಜಾ ಮಹಿಮೆಶಕ್ತಿಪೀಠ ದರ್ಶನಶಕ್ತಿಪೀಠ ಲಾಭಗಳು
ShareTweetSendShare
Join us on:

Related Posts

bigg-boss-kannada-kiccha-sudeep-class-to-modern-manja-and-agni-boys-in-new-promo

ಕಲರ್ಸ್ ಕನ್ನಡದ ಹೊಸ ಪ್ರೋಮೋ ಸಖತ್ ವೈರಲ್: ವಾರದ ಪಂಚಾಯಿತಿಯ ಕಿಚ್ಚನ ಖಡಕ್ ಕ್ಲಾಸ್

by admin
September 20, 2026
0

ಕಲರ್ಸ್ ಕನ್ನಡದ ಹೊಸ ಪ್ರೋಮೋ ಸಖತ್ ವೈರಲ್: ವಾರದ ಪಂಚಾಯಿತಿಯ ಕಿಚ್ಚನ ಖಡಕ್ ಕ್ಲಾಸ್ ಒಳಗೊಂಡ ಕಲರ್ಸ್ ಕನ್ನಡ ಬಿಡುಗಡೆ ಮಾಡಿರುವ ಹೊಸ ಪ್ರೋಮೋ ಸಾಮಾಜಿಕ ಜಾಲತಾಣಗಳಲ್ಲಿ...

upendra-birthday-next-level-movie-first-look-released-tarun-shivappa

ರಿಯಲ್ ಸ್ಟಾರ್’ ಉಪೇಂದ್ರ ಹುಟ್ಟುಹಬ್ಬಕ್ಕೆ ಅಭಿಮಾನಿಗಳಿಗೆ ಭರ್ಜರಿ ಗಿಫ್ಟ್: ತರುಣ್ ಶಿವಪ್ಪ ನಿರ್ಮಾಣದ ‘ನೆಕ್ಸ್ಟ್ ಲೆವೆಲ್’ ಫಸ್ಟ್ ಲುಕ್ ರಿಲೀಸ್!

by admin
September 20, 2026
0

ಬೆಂಗಳೂರು: ‘ರಿಯಲ್ ಸ್ಟಾರ್’ ಉಪೇಂದ್ರ ಅವರಿಗೆ ಇಂದು (ಸೆಪ್ಟೆಂಬರ್ 18) ಹುಟ್ಟುಹಬ್ಬದ ಸಂಭ್ರಮ. ತಮ್ಮ ವಿಶಿಷ್ಟ ಆಲೋಚನೆ ಹಾಗೂ ಚಿತ್ರಕಥೆಗಳ ಮೂಲಕ ದಕ್ಷಿಣ ಭಾರತದಲ್ಲೇ ಹೊಸ ಅಲೆ...

pa-ranjith-vettuvam-movie-kiccha-sudeep-voice-over-kannada

ಪಾ. ರಂಜಿತ್ ನಿರ್ದೇಶನದ ಅದ್ಧೂರಿ ಆಕ್ಷನ್ ಸಿನಿಮಾ ‘ವೆಟ್ಟುವಮ್’; ಕನ್ನಡದಲ್ಲಿ ಕಿಚ್ಚ ಸುದೀಪ್ ಧ್ವನಿ

by admin
September 20, 2026
0

ಬೆಂಗಳೂರು: ಭಾರತೀಯ ಚಿತ್ರರಂಗದ ಖ್ಯಾತ ನಿರ್ದೇಶಕ ಪಾ. ರಂಜಿತ್ ಅವರ ಸಾರಥ್ಯದಲ್ಲಿ ಮೂಡಿಬರುತ್ತಿರುವ ಬಹುನಿರೀಕ್ಷಿತ ಪ್ಯಾನ್ ಇಂಡಿಯಾ ಅಪೋಕ್ಯಾಲಿಪ್ಟಿಕ್ ಆಕ್ಷನ್ ಸಿನಿಮಾ ‘ವೆಟ್ಟುವಮ್’ ಸಿನಿಪ್ರಿಯರಲ್ಲಿ ಭಾರಿ ಕುತೂಹಲ...

natural-star-nani-the-paradise-movie-press-meet-bengaluru

“ಬೆಂಗಳೂರಿಗೆ ಬಂದರೆ ಸ್ವಂತ ಮನೆಗೆ ಬಂದಂತೆ ಭಾಸವಾಗುತ್ತದೆ”; ‘ನ್ಯಾಚುರಲ್ ಸ್ಟಾರ್’ ನಾನಿ ಮನದಾಳದ ಮಾತು, ‘ಪ್ಯಾರಡೈಸ್’ ಸಿನಿಮಾ ಬಗ್ಗೆ ಬಿಗ್ ಅಪ್ಡೇಟ್!

by admin
September 20, 2026
0

​ಬೆಂಗಳೂರು: ತೆಲುಗು ಚಿತ್ರರಂಗದ ‘ನ್ಯಾಚುರಲ್ ಸ್ಟಾರ್’ ಖ್ಯಾತಿಯ ನಟ ನಾನಿ ಅಭಿನಯದ ಬಹುನಿರೀಕ್ಷಿತ ನೂತನ ಆ್ಯಕ್ಷನ್ ಡ್ರಾಮಾ The Paradise ಸಿನಿಮಾದ ಪ್ರಚಾರಾರ್ಥವಾಗಿ ಬೆಂಗಳೂರಿನಲ್ಲಿ ಅದ್ಧೂರಿ ಪತ್ರಿಕಾಗೋಷ್ಠಿ...

jio-home-offers-free-amazon-prime-lite-for-one-year-on-30mbps-and-100mbps-plans

ಜಿಯೋಹೋಮ್‌ ಬಳಕೆದಾರರಿಗೆ ಒಂದು ವರ್ಷದ ಅಮೆಜಾನ್ ಪ್ರೈಮ್ ಲೈಟ್ ಉಚಿತ

by admin
September 20, 2026
0

* 3-ಇನ್-1 (ಟಿವಿ + ಒಟಿಟಿ + ವೈ-ಫೈ) ಯೋಜನೆಯ ಹೊಸ ಮತ್ತು ಅಸ್ತಿತ್ವದಲ್ಲಿರುವ ಗ್ರಾಹಕರು ಪ್ರಯೋಜನವನ್ನು ಪಡೆಯುತ್ತಾರೆ * ಅಮೆಜಾನ್ ಪ್ರೈಮ್ ವಿಡಿಯೋದೊಂದಿಗೆ ಉಚಿತ ಮತ್ತು...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram