ADVERTISEMENT
Tuesday, August 4, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಮಿಸ್ ಯೂ ಸ್ಪಿನ್ ಡಾಕ್ಟರ್… ಮುಗಿದೋಯ್ತು ಸ್ಪಿನ್ ಮಾಂತ್ರಿಕನ ಬದುಕು..!

admin by admin
March 5, 2022
in Newsbeat, Sports, ಕ್ರಿಕೆಟ್
Share on FacebookShare on TwitterShare on WhatsappShare on Telegram

ಮೈದಾನದಲ್ಲಿ ಶತ್ರುಗಳು… ಆದ್ರೆ ನಿಜ ಜೀವನದಲ್ಲಿ ಆಪ್ತ ಸ್ನೇಹಿತರು. ತಂಡದೊಳಗಿನ ಒಡನಾಡಿಗಳೇ ವಿಲನ್ ಗಳು.. ಎದುರಾಳಿ ತಂಡಗಳ ಆಟಗಾರರೇ ಹೀರೋಗಳು..ಸ್ಪಾಟ್ ಫೀಕ್ಸಿಂಗ್ ಆರೋಪ, ಉದ್ದೀಪನಾ ದ್ರವ್ಯ ಸೇವನೆ ಆರೋಪ, ಅಲ್ಕೋಹಾಲ್, ಸಿಗರೇಟ್.. ಸೆಕ್ಸ್…ವಿವಾದಗಳು.. ವಿಶ್ವ ದಾಖಲೆಗಳು ಎಲ್ಲವೂ ಕೂಡ ಸ್ಪಿನ್ ಡಾಕ್ಟರ್ ಶೇನ್ ವಾರ್ನ್ ಕ್ರಿಕೆಟ್ ಬದುಕಿನಲ್ಲಿ ಆಗಿ ಹೋಗಿರುವ ಘಟನೆಗಳು.

ಒಬ್ಬ ವ್ಯಕ್ತಿಯಾಗಿ ಶೇನ್ ವಾರ್ನ್ ಆದರ್ಶ ವ್ಯಕ್ತಿ ಅಂತ ಹೇಳುವುದಕ್ಕೆ ಆಗಲ್ಲ. ಆದ್ರೆ ಒಬ್ಬ ಕ್ರಿಕೆಟಿಗನಾಗಿ ಖಂಡಿತವಾಗಿಯೂ ಸ್ಫೂರ್ತಿಯ ಆಟಗಾರ. ಒಬ್ಬ ಸ್ಪಿನ್ ಬೌಲರ್ ಆಗಿ ಮಾದರಿ ಆಟಗಾರ. ಆದ್ರೆ ಶೇನ್ ವಾರ್ನ್ ಅವರನ್ನು ರೋಲ್ ಮಾಡೆಲ್ ಅಂತ ಪರಿಗಣಿಸುವುದು ಕಷ್ಟ. ಕ್ರಿಕೆಟ್ ಮೈದಾನದಲ್ಲಿ ಶೇನ್ ವಾರ್ನ್ ಮಾಡಿರುವ ಮೋಡಿಗೆ ದಾಖಲೆಗಳು ಕೂಡ ಸದ್ದಿಲ್ಲದೆ ಅವರ ಹೆಸರಿನ ಜೊತೆ ಸೇರಿಕೊಂಡಿವೆ. ಹಾಗೇ ವಿವಾದಗಳು ಕೂಡ ಕಪ್ಪುಚುಕ್ಕೆಗಳಾಗಿ ಅವರ ಹೆಸರಿನ ಮುಂದೆ ಅಂಟಿಕೊಂಡಿವೆ. ಹಾಗಂತ ಶೇನ್ ವಾರ್ನ್ ತೀರಾ ಒಳ್ಳೆಯವರು ಅಲ್ಲ. ತೀರಾ ಕೆಟ್ಟವರೂ ಅಲ್ಲ. ಆದ್ರೂ ಎಲ್ಲರು ಕೂಡ ಇಷ್ಟಪಡುವ ವ್ಯಕ್ತಿ.. ತುಂಬಾನೇ ಪ್ರೀತಿಸುವ ಕ್ರಿಕೆಟಿಗ. ಮೈದಾನದಲ್ಲಿ ಎಷ್ಟು ಆಕ್ರಮಣಕಾರಿಯಾಗಿ ಆಡುತ್ತಿದ್ದರೋ ಅಷ್ಟೇ ಹಾಸ್ಯಮಯ ವ್ಯಕ್ತಿ. ವಿಕೆಟ್ ಪಡೆದಾಗ ತುಂಬಾನೇ ಸಂಭ್ರಮಪಡುತ್ತಿದ್ದರು. ಹಾಗೇ ತನ್ನ ಎಸೆತಗಳನ್ನು ದಂಡಿಸುತ್ತಿರುವಾಗ ಮೂಖ ಪ್ರೇಕ್ಷಕನಾಗುತ್ತಿದ್ದರು. ಒಂದು ಕೈಯನ್ನು ಕಟ್ಟಿಕೊಂಡು, ಇನ್ನೊಂದು ಕೈಯ ಹೆಬ್ಬೆರಳನ್ನು ದವಡೆಯ ಮೇಲಿಟ್ಟುಕೊಂಡು, ತೋರು ಬೆರಳನ್ನು ಮೂಗಿನ ಮೇಲಿಟ್ಟುಕೊಂಡು ಕಿರು ನಗೆಯನ್ನು ಬೀರುತ್ತಿದ್ದರು. ಇದು ಶೇನ್ ವಾರ್ನ್ ಕ್ರಿಕೆಟ್ ಬದುಕಿನ ಸ್ಟೈಲ್.

Related posts

ಎಲ್ಲಾ ಹೋಟೆಲ್‌ಗಳಲ್ಲಿ ಬಿಸಿ ನೀರು ಕಡ್ಡಾಯಕ್ಕೆ ಆರೋಗ್ಯ ಇಲಾಖೆ ಸಜ್ಜು

ಎಲ್ಲಾ ಹೋಟೆಲ್‌ಗಳಲ್ಲಿ ಬಿಸಿ ನೀರು ಕಡ್ಡಾಯಕ್ಕೆ ಆರೋಗ್ಯ ಇಲಾಖೆ ಸಜ್ಜು

August 4, 2026
ಸಂಪುಟ ವಿಸ್ತರಣೆ ಬೆನ್ನಲ್ಲೇ ಕಾಂಗ್ರೆಸ್‌ನಲ್ಲಿ ಭುಗಿಲೆದ್ದ ಅಸಮಾಧಾನದ ಕಿಚ್ಚು: ತನ್ವೀರ್ ಸೇಠ್ ಮತ್ತು ಲಕ್ಷ್ಮಿ ಹೆಬ್ಬಾಳ್ಕರ್ ಬೆಂಬಲಿಗರಿಂದ ಬೀದಿಗಿಳಿದು ಪ್ರತಿಭಟನೆ

ಸಂಪುಟ ವಿಸ್ತರಣೆ ಬೆನ್ನಲ್ಲೇ ಕಾಂಗ್ರೆಸ್‌ನಲ್ಲಿ ಭುಗಿಲೆದ್ದ ಅಸಮಾಧಾನದ ಕಿಚ್ಚು: ತನ್ವೀರ್ ಸೇಠ್ ಮತ್ತು ಲಕ್ಷ್ಮಿ ಹೆಬ್ಬಾಳ್ಕರ್ ಬೆಂಬಲಿಗರಿಂದ ಬೀದಿಗಿಳಿದು ಪ್ರತಿಭಟನೆ

August 4, 2026

ಶೇನ್ ವಾರ್ನ್ ಕಷ್ಟಪಟ್ಟು ಕ್ರಿಕೆಟ್ ಆಟಗಾರನಾದ್ರು. ಬದುಕಿಗಾಗಿ ಲಾರಿ ಡ್ರೈವರ್ ಆಗಿದ್ದರು. ಡೆಲಿವರಿ ಬಾಯ್ ಆಗಿದ್ದರು. ಹೀಗೆ ಕಷ್ಟಪಟ್ಟು ಕ್ರಿಕೆಟ್ ಆಟಗಾರನಾಗಿ ರೂಪುಗೊಂಡಿರುವ ಶೇನ್ ವಾರ್ನ್ ಮುಂದೊಂದು ದಿನ ವಿಶ್ವದ ಶ್ರೇಷ್ಠ ಕ್ರಿಕೆಟಿಗನಾಗಿ ರೂಪುಗೊಂಡ್ರು. ಕ್ರಿಕೆಟ್ ನಲ್ಲಿ ಯಶ ಸಾಧಿಸುತ್ತಿದ್ದಂತೆ ತನ್ನ ಹಳೆಯದ ಕಷ್ಟದ ದಿನಗಳನ್ನು ಮರೆತುಬಿಟ್ರು. ಐಶಾರಾಮಿ ಬದುಕಿನ ಜೊತೆಗೆ ಕುಡಿತ, ಸಿಗರೇಟ್, ಸೆಕ್ಸ್, ವಿವಾದಗಳಿಂದಲೂ ಹೆಚ್ಚು ಸುದ್ದಿಯಾದ್ರು. ಆದ್ರೂ ಶೇನ್ ವಾರ್ನ್ ಯಾವುದಕ್ಕೂ ತಲೆಕೆಡಿಸಿಕೊಳ್ಳಲಿಲ್ಲ. ಹಾಸ್ಯ ಪ್ರವೃತ್ತಿಯ ಜೊತೆಗೆ ಸಂಬಂಧಗಳಿಗೆ ಬೆಲೆ ಕೊಡುವ ಶೇನ್ ವಾರ್ನ್ ಗೆ ವಿಶ್ವದ ಶ್ರೇಷ್ಠ ಕ್ರಿಕೆಟಿಗರು ಆಪ್ತ ಸ್ನೇಹಿತರಾದ್ರು. ಈ ನಡುವೆ, ತನ್ನ ಕ್ರಿಕೆಟ್ ಬದುಕಿಗೆ ಪ್ರೇರಣೆ ಮತ್ತು ಶಕ್ತಿ ತುಂಬಿದ್ದ ಸ್ಟೀವ್ ವಾ ಅವರ ವಿರುದ್ಧವೇ ತಿರುಗಿಬಿದ್ದಿದ್ದರು. ತನ್ನ ಆಟೋ ಬಯೋಗ್ರಫಿಯಲ್ಲಿ ಸ್ಟೀವ್ ವಿರುದ್ಧವೇ ಬರೆದಿದ್ದರು. ಅಷ್ಟೇ ಅಲ್ಲ, ಮೈದಾನದಲ್ಲಿ ತನಗೆ ಸವಾಲು ಹಾಕೊಂಡು ಎದುರಾಳಿಗಳಾಗಿದ್ದ ಸಚಿನ್ ತೆಂಡುಲ್ಕರ್, ಬ್ರಿಯಾನ್ ಲಾರಾನಂತಹ ಆಟಗಾರರನ್ನು ಮೆಚ್ಚಿ ಕೊಂಡಾಡಿದ್ದರು.

ಇನ್ನು ಶೇನ್ ವಾರ್ನ್ ಮತ್ತು ಭಾರತೀಯ ಆಟಗಾರರ ನಡುವೆ ಉತ್ತಮವಾದ ಬಾಂಧವ್ಯವಿತ್ತು. ಭಾರತ ವಿರುದ್ಧವೇ ಚೊಚ್ಚಲ ಟೆಸ್ಟ್ ಪಂದ್ಯವನ್ನು ಆಡಿದ್ದರು. ಅಷ್ಟೇ ಅಲ್ಲ, 2008ರ ಚೊಚ್ಚಲ ಐಪಿಎಲ್ ನಲ್ಲಿ ರಾಜಸ್ತಾನ ರಾಯಲ್ಸ್ ತಂಡವನ್ನು ಚಾಂಪಿಯನ್ ಪಟ್ಟಕ್ಕೇರಿಸಿದ್ದರು. ಜೊತೆಗೆ ಐಪಿಎಲ್ ನಲ್ಲಿ ರಾಜಸ್ತಾನ ರಾಯಲ್ಸ್ ತಂಡದ ಮಾರ್ಗದರ್ಶಕರಾಗಿದ್ದರು. ಹೀಗೆ ಭಾರತೀಯ ಆಟಗಾರರು ಮತ್ತು ಭಾರತದ ಯುವ ಆಟಗಾರರ ಜೊತೆ ಶೇನ್ ವಾರ್ನ್ ತುಂಬಾ ಪ್ರೀತಿಯಿಂದ ಬೆರೆಯುತ್ತಿದ್ದರು.

145 ಟೆಸ್ಟ್ ಪಂದ್ಯಗಳಲ್ಲಿ 708 ವಿಕೆಟ್ ಹಾಗೂ 194 ಏಕದಿನ ಪಂದ್ಯಗಳಲ್ಲಿ 293 ವಿಕೆಟ್ ಪಡೆದಿರುವ ಶೇನ್ ವಾರ್ನ್ ಒಟ್ಟು 1001 ಅಂತಾರಾಷ್ಟ್ರೀಯ ವಿಕೆಟ್ ಗಳನ್ನು ಕಬಳಿಸಿದ್ದಾರೆ. ಸದ್ಯ ಟೆಸ್ಟ್ ಕ್ರಿಕೆಟ್ ನಲ್ಲಿ ಗರಿಷ್ಠ ವಿಕೆಟ್ ಪಡೆದ ಎರಡನೇ ಆಟಗಾರನಾಗಿದ್ದಾರೆ. ಇನ್ನೊಂದೆಡೆ 1993ರ ಆಶಷ್ ಸರಣಿಯಲ್ಲಿ ಇಂಗ್ಲೆಂಡ್ ನ ಮೈಕ್ ಗ್ಯಾಟಿಂಗ್ ಅವರ ವಿಕೆಟ್ ಪಡೆದಿರುವುದು ಶತಮಾನದ ಎಸೆತ ಅಂತನೇ ಕರೆಯಲಾಗುತ್ತಿದೆ. ವಿಶ್ವದ ಶ್ರೇಷ್ಠ ಬ್ಯಾಟ್ಸ್ ಮೆನ್ ಗಳನ್ನು ಗಲಿಬಿಲಿಗೊಳಿಸುತ್ತಿದ್ದ ಶೇನ್ ವಾರ್ನ್ ಚಾಣಕ್ಯ ಬೌಲರ್ ಎಂಬುದರಲ್ಲಿ ಎರಡು ಮಾತಿಲ್ಲ. ತನ್ನ 52ನೇ ವಯಸ್ಸಿನಲ್ಲಿ ಈ ಲೋಕದ ಯಾತ್ರೆ ಮುಗಿಸಿದ ಶೇನ್ ವಾರ್ನ್ ಸಾಧನೆ, ಮಾಡಿರುವ ದಾಖಲೆಗಳು ಎಂದೆಂದಿಗೂ ಕ್ರಿಕೆಟ್ ಇತಿಹಾಸದಲ್ಲಿ ಶಾಶ್ವತವಾಗಿರುತ್ತವೆ.

Tags: Shane WarneShane Warne Non MoreSpin Doctor
ShareTweetSendShare
Join us on:

Related Posts

ಎಲ್ಲಾ ಹೋಟೆಲ್‌ಗಳಲ್ಲಿ ಬಿಸಿ ನೀರು ಕಡ್ಡಾಯಕ್ಕೆ ಆರೋಗ್ಯ ಇಲಾಖೆ ಸಜ್ಜು

ಎಲ್ಲಾ ಹೋಟೆಲ್‌ಗಳಲ್ಲಿ ಬಿಸಿ ನೀರು ಕಡ್ಡಾಯಕ್ಕೆ ಆರೋಗ್ಯ ಇಲಾಖೆ ಸಜ್ಜು

by Shwetha
August 4, 2026
0

ರಾಜ್ಯದ ಸಾರ್ವಜನಿಕರ ಆರೋಗ್ಯ ರಕ್ಷಣೆಗೆ ಆರೋಗ್ಯ ಇಲಾಖೆ ಮತ್ತೊಂದು ಮಹತ್ವದ ಕ್ರಮಕ್ಕೆ ಮುಂದಾಗಿದೆ. ಶಾಲೆಗಳ ಸುತ್ತಮುತ್ತ ಜಂಕ್ ಫುಡ್ ಮಾರಾಟಕ್ಕೆ ನಿರ್ಬಂಧ ಹೇರಿದ ಬಳಿಕ, ಇದೀಗ ರಾಜ್ಯದ...

ಸಂಪುಟ ವಿಸ್ತರಣೆ ಬೆನ್ನಲ್ಲೇ ಕಾಂಗ್ರೆಸ್‌ನಲ್ಲಿ ಭುಗಿಲೆದ್ದ ಅಸಮಾಧಾನದ ಕಿಚ್ಚು: ತನ್ವೀರ್ ಸೇಠ್ ಮತ್ತು ಲಕ್ಷ್ಮಿ ಹೆಬ್ಬಾಳ್ಕರ್ ಬೆಂಬಲಿಗರಿಂದ ಬೀದಿಗಿಳಿದು ಪ್ರತಿಭಟನೆ

ಸಂಪುಟ ವಿಸ್ತರಣೆ ಬೆನ್ನಲ್ಲೇ ಕಾಂಗ್ರೆಸ್‌ನಲ್ಲಿ ಭುಗಿಲೆದ್ದ ಅಸಮಾಧಾನದ ಕಿಚ್ಚು: ತನ್ವೀರ್ ಸೇಠ್ ಮತ್ತು ಲಕ್ಷ್ಮಿ ಹೆಬ್ಬಾಳ್ಕರ್ ಬೆಂಬಲಿಗರಿಂದ ಬೀದಿಗಿಳಿದು ಪ್ರತಿಭಟನೆ

by Shwetha
August 4, 2026
0

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಬೆನ್ನಲ್ಲೇ ಆಡಳಿತಾರೂಢ ಕಾಂಗ್ರೆಸ್ ಪಕ್ಷದಲ್ಲಿ ಭಿನ್ನಮತ ಸ್ಫೋಟಗೊಂಡಿದೆ. ಸಚಿವ ಸ್ಥಾನದ ಆಕಾಂಕ್ಷಿಗಳಾಗಿದ್ದ ಹಿರಿಯ ಶಾಸಕರಿಗೆ ಮಂತ್ರಿಗಿರಿ ಕೈತಪ್ಪಿದ್ದರಿಂದ ರಾಜ್ಯದ ವಿವಿಧೆಡೆ...

ಕಾವೇರಿ ವಿವಾದ: ನೀರು ಬಿಡುಗಡೆಗೆ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ತಮಿಳುನಾಡು

ಕಾವೇರಿ ವಿವಾದ: ನೀರು ಬಿಡುಗಡೆಗೆ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ತಮಿಳುನಾಡು

by Shwetha
August 4, 2026
0

ಕಾವೇರಿ ನದಿ ನೀರು ಹಂಚಿಕೆ ವಿವಾದ ಮತ್ತೊಮ್ಮೆ ತೀವ್ರಗೊಂಡಿದ್ದು, ತಮಿಳುನಾಡು ಸರ್ಕಾರ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದೆ. ಜುಲೈ 30ರಂದು ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ (CWMA)...

ರಾಮನ ಪಾತ್ರದಲ್ಲಿ ರಣಬೀರ್ ಕಪೂರ್ ವೀಕ್: ಆದಿಪುರುಷ್ ತಪ್ಪು ಮರುಕಳಿಸಿದರೆ ಸುಮ್ಮನಿರಲ್ಲ- ಯಶ್ ನಟನೆಯ ರಾಮಾಯಣ ಸಿನಿಮಾಗೆ ಎದುರಾಯ್ತು ಅಗ್ನಿಪರೀಕ್ಷೆ

ರಾಮನ ಪಾತ್ರದಲ್ಲಿ ರಣಬೀರ್ ಕಪೂರ್ ವೀಕ್: ಆದಿಪುರುಷ್ ತಪ್ಪು ಮರುಕಳಿಸಿದರೆ ಸುಮ್ಮನಿರಲ್ಲ- ಯಶ್ ನಟನೆಯ ರಾಮಾಯಣ ಸಿನಿಮಾಗೆ ಎದುರಾಯ್ತು ಅಗ್ನಿಪರೀಕ್ಷೆ

by Shwetha
August 4, 2026
0

ಮುಂಬೈ: ಬಾಲಿವುಡ್ ನಲ್ಲಿ ಭಾರಿ ಸದ್ದು ಮಾಡುತ್ತಿರುವ ನಿರ್ದೇಶಕ ನಿತೇಶ್ ತಿವಾರಿ ಅವರ ಕನಸಿನ ಯೋಜನೆ ರಾಮಾಯಣ ಸಿನಿಮಾ ಬಿಡುಗಡೆಗೂ ಮುನ್ನವೇ ವಿವಾದದ ಸುಳಿಗೆ ಸಿಲುಕಿದೆ. ಬರೋಬ್ಬರಿ...

ಬಿಜೆಪಿಯ ಭದ್ರಕೋಟೆ ಧೂಳೀಪಟ ಮಾಡಿದ ಪ್ರಶಾಂತ್ ಕಿಶೋರ್: ಮಣ್ಣು ಮುಕ್ಕಿದ ಬಿಜೆಪಿ ಮತ್ತು ಆರ್‌ಜೆಡಿ- ಬಂಕಿಪುರ ಉಪಚುನಾವಣೆಯಲ್ಲಿ ಜನ ಸುರಾಜ್ ಪಕ್ಷಕ್ಕೆ ಭರ್ಜರಿ ವಿಜಯ

ಬಿಜೆಪಿಯ ಭದ್ರಕೋಟೆ ಧೂಳೀಪಟ ಮಾಡಿದ ಪ್ರಶಾಂತ್ ಕಿಶೋರ್: ಮಣ್ಣು ಮುಕ್ಕಿದ ಬಿಜೆಪಿ ಮತ್ತು ಆರ್‌ಜೆಡಿ- ಬಂಕಿಪುರ ಉಪಚುನಾವಣೆಯಲ್ಲಿ ಜನ ಸುರಾಜ್ ಪಕ್ಷಕ್ಕೆ ಭರ್ಜರಿ ವಿಜಯ

by Shwetha
August 4, 2026
0

ಪಾಟ್ನಾ: ಚುನಾವಣಾ ತಂತ್ರಜ್ಞ ಪ್ರಶಾಂತ್ ಕಿಶೋರ್ ನೇತೃತ್ವದ ಜನ ಸುರಾಜ್ ಪಕ್ಷ ಬಿಹಾರ ರಾಜಕೀಯದಲ್ಲಿ ಹೊಸ ಇತಿಹಾಸ ಬರೆದಿದೆ. ಬಿಜೆಪಿಯ ಅಭೇದ್ಯ ಕೋಟೆ ಎಂದೇ ಪರಿಗಣಿಸಲ್ಪಟ್ಟಿದ್ದ ಬಂಕಿಪುರ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram