ಭಾರತ ಈರುಳ್ಳಿ ರಫ್ತು ನಿಷೇಧಿಸಿದರೆ, ಪಾಕಿಸ್ತಾನಕ್ಕೆ ಲಾಭ – ಶರದ್ ಪವಾರ್
ಮುಂಬೈ, ಸೆಪ್ಟೆಂಬರ್ 16:ಕೇಂದ್ರ ಸರ್ಕಾರ ಸೋಮವಾರ ಈರುಳ್ಳಿ ರಫ್ತನ್ನು ಕೂಡಲೇ ಜಾರಿಗೆ ಬರುವಂತೆ ನಿಷೇಧಿಸಿದೆ. ದೇಶೀಯ ಮಾರುಕಟ್ಟೆಯಲ್ಲಿ ಈರುಳ್ಳಿ ಕೊರತೆ ಉಂಟಾದ ಹಿನ್ನೆಲೆಯಲ್ಲಿ ಸರ್ಕಾರ ಈ ಕ್ರಮ ಕೈಗೊಂಡಿದೆ.
ಏತನ್ಮಧ್ಯೆ ಮಂಗಳವಾರ(ಸೆಪ್ಟೆಂಬರ್ 15, 2020) ಎನ್ ಸಿಪಿ ಮುಖ್ಯಸ್ಥ ಶರದ್ ಪವಾರ್ ಅವರು ಕೇಂದ್ರ ವಾಣಿಜ್ಯ ಸಚಿವ ಪಿಯೂಷ್ ಗೋಯಲ್ ಅವರನ್ನು ಭೇಟಿಯಾಗಿ ಈರುಳ್ಳಿ ರಫ್ತು ನಿಷೇಧದ ಬಗ್ಗೆ ಮರು ಚಿಂತನೆ ನಡೆಸಬೇಕೆಂದು ಒತ್ತಾಯಿಸಿದ್ದಾರೆ.
ವಿದೇಶಗಳಲ್ಲಿ ಭಾರೀ ಬೇಡಿಕೆ ಹೊಂದಿರುವ ಈರುಳ್ಳಿ ರಫ್ತು ನಿಷೇಧದಿಂದ ಗಲ್ಫ್ ದೇಶಗಳು, ಶ್ರೀಲಂಕಾ ಹಾಗೂ ಬಾಂಗ್ಲಾ ದೇಶದ ಈರುಳ್ಳಿ ಮಾರುಕಟ್ಟೆಗಳು ಇಕ್ಕಟ್ಟಿಗೆ ಸಿಲುಕಲಿದೆ.
ಅಷ್ಟೇ ಅಲ್ಲ ಪಾಕಿಸ್ತಾನ ಮತ್ತು ಇತರ ದೇಶಗಳ ಮಾರುಕಟ್ಟೆಗೆ ಇದರಿಂದ ಲಾಭವಾಗಲಿದೆ ಎಂದು ಶರದ್ ಪವಾರ್ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಈರುಳ್ಳಿಯನ್ನು ಪಾಕಿಸ್ತಾನದಲ್ಲಿ ಕೂಡ ಬೆಳೆಯುತ್ತಿದ್ದು ಹಲವಾರು ದೇಶಗಳಿಗೆ ರಫ್ತು ಮಾಡುತ್ತಿದೆ. ಭಾರತ ಈರುಳ್ಳಿ ರಫ್ತು ನಿಷೇಧಿಸಿದರೆ ಈ ನಿರ್ಧಾರ ಪಾಕಿಸ್ತಾನಕ್ಕೆ ಲಾಭ ತಂದು ಕೊಡಲಿದೆ ಎಂದು ಪವಾರ್ ತಿಳಿಸಿದ್ದಾರೆ. ಅಷ್ಟೇ ಅಲ್ಲ ಈರುಳ್ಳಿ ಬೆಳೆಯುವ ರೈತರಿಗೆ ಇದರಿಂದ ಅನ್ಯಾಯವಾಗಲಿದೆ. ಆದುದರಿಂದ ಕೇಂದ್ರ ಸರ್ಕಾರ ತನ್ನ ನಿರ್ಧಾರದ ಬಗ್ಗೆ ಮರು ಚಿಂತನೆ ನಡೆಸುವಂತೆ ಪಿಯೂಷ್ ಗೋಯಲ್ ಜೀ ಅವರಿಗೆ ನಾನು ಮನವಿ ಮಾಡಿಕೊಂಡಿದ್ದೇನೆ ಎಂದು ಪವಾರ್ ಟ್ವೀಟ್ ಮಾಡಿದ್ದಾರೆ
https://twitter.com/PawarSpeaks/status/1305780682216464386?s=19