ಶರತ್ ಕಾಂಗ್ರೆಸ್ ಸೇರೋದು ಅವನ ಇಚ್ಛೆ : ಸಂಸದ ಬಚ್ಚೇಗೌಡ
ಚಿಕ್ಕಬಳ್ಳಾಪುರ : ಹೊಸಕೋಟೆ ಪಕ್ಷೇತರ ಶಾಸಕ ಶರತ್ ಬಚ್ಚೇಗೌಡ ಕಾಂಗ್ರೆಸ್ ಪಕ್ಷ ಸೇರ್ತಾರೆ ಅನ್ನೋದು ಈಗಾಗಲೇ ಪಕ್ಕಾ ಆಗಿದೆ.
ಈ ಬಗ್ಗೆ ಬಿಜೆಪಿ ಸಂಸದ ಹಾಗೂ ಶರತ್ ತಂದೆ ಬಿ.ಎನ್.ಬಚ್ಚೇಗೌಡ ಪ್ರತಿಕ್ರಿಯಿಸಿದ್ದು, ಕಾಂಗ್ರೆಸ್ ಸೇರೋದು ಶರತ್ ಇಚ್ಛೆ ಎಂದಿದ್ದಾರೆ.
ಚಿಕ್ಕಬಳ್ಳಾಪುರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ನಡೆದ ದಿನಾ ಸಮಿತಿ ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,
ನನ್ನ ಮಗ ಶರತ್ ಬಚ್ಚೇಗೌಡ ಕಾಂಗ್ರೆಸ್ ಪಕ್ಷ ಸೇರೋದು ಆತನಿಗೆ ಬಿಟ್ಟ ವಿಚಾರ. ಬಿಜೆಪಿಯಿಂದ ನಾನು ಸಂಸದನಾಗಿದ್ದೇನೆ. ಪಕ್ಷದಡಿಯಲ್ಲಿ ಕೆಲಸ ಕಾರ್ಯ ಮಾಡುತ್ತಿದ್ದೇನೆ ಎಂದಿದ್ದಾರೆ.
ಇದೇ ವೇಳೆ ನರೇಂದ್ರ ಮೋದಿ ಅವರನ್ನು ಹಾಡಿಹೊಗಳಿದ ಬಚ್ಚೇಗೌಡ, ಪ್ರಧಾನಿ ನರೇಂದ್ರ ಮೋದಿ ಉತ್ತಮ ಕಾರ್ಯ ಮಾಡಿದ್ದಾರೆ. ವಿಶ್ವದಲ್ಲೇ ನಂಬರ್ ಒನ್ ನಾಯಕ ಎನಿಸಿಕೊಂಡಿದ್ದಾರೆ ಎಂದ್ರು.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel