ನೇಪಾಳದ ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕರಿಸಿದ ದೇವುಬಾ – “ಸುಪ್ರೀಂ’ ಉದ್ದೇಶ ಪೂರ್ವಕ ತೀರ್ಪು : ಕೆಪಿ ಓಲಿ ಶರ್ಮಾ
ನೇಪಾಳದ ಪ್ರಧಾನಿಯಾಗಿ ನೇಪಾಳಿ ಕಾಂಗ್ರೆಸ್ ನ ಮುಖ್ಯಸ್ಥ ಶೇರ್ ಬಹದ್ದೂರ್ ದೇವುಬಾ ಅವರನ್ನ ನೇಮಿಸುವಂತೆ ಅಲ್ಲಿನ ಸುಪ್ರೀಂ ಕೋರ್ಟ್ ಸೂಚನೆ ನೀಡಿದ ಬಳಿಕ ಒಳಿ ಶರ್ಮಾಗೆ ಭಾರೀ ಮುಖಭಂಗವಾಗಿತ್ತು.. ಇದೀಗ ನೇಪಾಳದ ಪ್ರಧಾನ ಮಂತ್ರಿಯಾಗಿ ನೇಪಾಳದ ಪ್ರಧಾನ ಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ.
ಮಂಗಳವಾರ ಸಂಜೆ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ನೇಪಾಳ ಸುಪ್ರೀಂ ಕೋರ್ಟ್ ಸೋಮವಾರ ನೀಡಿದ ತೀರ್ಪಿನ ಅನುಸಾರ ಪ್ರತಿಪಕ್ಷ ನಾಯಕ 75 ವರ್ಷದ ದೇವುಬಾ ಅವರನ್ನು ಪ್ರಧಾನ ಮಂತ್ರಿಯಾಗಿ ನೇಮಕ ಮಾಡುವ ಬಗ್ಗೆ ಅಧ್ಯಕ್ಷೆ ವಿದ್ಯಾದೇವಿ ಭಂಡಾರಿ ಮಂಗಳವಾರ ನೋಟಿಸ್ ನೀಡಿದ್ದರು. ಅದರಂತೆ ದೇವುಬಾ ಪ್ರಧಾನಿಯಾಗಿ ಪ್ರತಿಜ್ಙಾವಿಧಿ ಸ್ವೀಕರಿಸಿದ್ದಾರೆ.
ರಾಷ್ಟ್ರದ ಅಧ್ಯಕ್ಷೆ ವಿದ್ಯಾದೇವಿ ಭಂಡಾರಿ ಅವರು ತಮ್ಮನ್ನು ಪ್ರಧಾನಿಯಾಗಿ ನೇಮಿಸಿದ ನೋಟಿಸ್ ಪರಿಷ್ಕರಿಸುವ ವರೆಗೆ ಪ್ರತಿಜ್ಞಾ ವಿಧಿ ಸ್ವೀಕರಿಸುವುದಿಲ್ಲ ಎಂದು ಶೇರ್ ಬಹದ್ದೂರ್ ದೇವುಬಾ ಹೇಳಿದ್ದರು. ನೇಪಾಳ ಸುಪ್ರೀಂ ಕೋರ್ಟ್ ಸೋಮವಾರ ನೀಡಿದ ತೀರ್ಪಿನ ಅನುಸಾರ ಪ್ರತಿಪಕ್ಷ ನಾಯಕ 75 ವರ್ಷದ ದೇವುಬಾ ಅವರನ್ನು ಪ್ರಧಾನ ಮಂತ್ರಿಯಾಗಿ ನೇಮಕ ಮಾಡುವ ಬಗ್ಗೆ ಅಧ್ಯಕ್ಷೆ ವಿದ್ಯಾದೇವಿ ಭಂಡಾರಿ ಮಂಗಳವಾರ ನೋಟಿಸ್ ನೀಡಿದ್ದರು.
ರಾಷ್ಟ್ರದ ಸಂವಿಧಾನದ 76 (5) ನೇ ವಿಧಿಗೆ ಅನುಗುಣವಾಗಿ ದೇವುಬಾ ಅವರನ್ನು ಪ್ರಧಾನ ಮಂತ್ರಿಯಾಗಿ ನೇಮಿಸಬೇಕು ಎಂದು ಸುಪ್ರೀಂ ಕೋರ್ಟ್ನ ಮುಖ್ಯ ನ್ಯಾಯಮೂರ್ತಿ ಚೋಳೇಂದ್ರ ಶುಮ್ಶರ್ ರಾಣಾ ನೇತೃತ್ವದ ಐದು ಸದಸ್ಯರ ಸಾಂವಿಧಾನಿಕ ಪೀಠವು ಸೋಮವಾರ ಆದೇಶ ನೀಡಿತ್ತು.
ಕಾನೂನು ಸಲಹೆಯಂತೆ ರಾಷ್ಟ್ರಾಧ್ಯಕ್ಷರಿಗೆ ಸಂದೇಶ ಕಳುಹಿಸಿರುವ ದೇವುಬಾ ಅವರು, ನೋಟಿಸ್ನಲ್ಲಿನ ದೋಷವನ್ನು ಸರಿಪಡಿಸುವವರೆಗೂ ಪ್ರಮಾಣವಚನ ಸ್ವೀಕರಿಸುವುದಿಲ್ಲ ಎಂದು ತಿಳಿಸಿದ್ದಾರೆ ಎಂದು ಮಾಧ್ಯಮ ವರದಿಗಳಿಂದ ಗೊತ್ತಾಗಿತ್ತು. ದೇವುಬಾ ಅವರು ಈ ಹಿಂದೆ, ಸೆಪ್ಟೆಂಬರ್ 1995 ರಿಂದ ಮಾರ್ಚ್ 1997 ವರೆಗೆ, ಜುಲೈ 2001ರಿಂದ ಅಕ್ಟೋಬರ್ 2002ರ ವರೆಗೆ, ಜೂನ್ 2004ರಿಂದ ಫೆಬ್ರವರಿ 2005ರ ವರೆಗೆ, ಜೂನ್ 2017 ರಿಂದ ಫೆಬ್ರವರಿ 2018ರ ವರೆಗೆ ನಾಲ್ಕು ಬಾರಿ ನೇಪಾಳದ ಪ್ರಧಾನ ಮಂತ್ರಿಯಾಗಿ ಸೇವೆ ಸಲ್ಲಿಸಿದ್ದಾರೆ. ಈಗ ಐದನೇ ಬಾರಿಗೆ ಪ್ರಧಾನಿಯಾಗಿದ್ದಾರೆ.
ಇತ್ತ ಮಾಜಿ ಪ್ರಧಾನಿ ಕೆಪಿ ಒಲಿ ಶರ್ಮಾ ಕಿಡಿಕಾರಿದ್ದು, ವಿರೋಧ ಪಕ್ಷಗಳ ಪರವಾಗಿ ಸುಪ್ರೀಂ ಕೋರ್ಟ್ ಉದ್ದೇಶಪೂರ್ವಕವಾಗಿ ತೀರ್ಪು ನೀಡುತ್ತಿದೆ ಆರೋಪಿಸಿದ್ದು, ಈ ರೀತಿಯ ತೀರ್ಪು, ಬಹುಪಕ್ಷಗಳಿರುವ ಸಂಸದೀಯ ವ್ಯವಸ್ಥೆಯ ಮೇಲೆ ದೀರ್ಘಕಾಲೀನ ಪರಿಣಾಮ ಬೀರಲಿದೆ’ ಎಂದು ಹೇಳಿದ್ದಾರೆ.
ರಾಷ್ಟ್ರವನ್ನುದ್ದೇಶಿಸಿ ಮಾತನಾಡಿದ ಒಲಿ, ‘ಜನರಿಂದ ಆಯ್ಕೆಯಾಗಿದ್ದರೂ ನಾನು ಈ ಹುದ್ದೆಗೆ ರಾಜೀನಾಮೆ ನೀಡುತ್ತಿದ್ದೇನೆ. ಏಕೆಂದರೆ ಸುಪ್ರೀಂ ಕೋರ್ಟ್, ನೇಪಾಳಿ ಕಾಂಗ್ರೆಸ್ ಅಧ್ಯಕ್ಷ ಶೇರ್ ಬಹದ್ದೂರ್ ದೇವುಬಾ ಅವರನ್ನು ಎರಡು ದಿನದೊಳಗೆ ಪ್ರಧಾನಿಯನ್ನಾಗಿ ನೇಮಕ ಮಾಡಬೇಕೆಂದು ಆದೇಶ ನೀಡಿದೆ ಎಂದರು.