ಶಿವಮೊಗ್ಗ : ಆಗಸ್ಟ್ 5 ರಂದು ಅಯೋಧ್ಯೆಯಲ್ಲಿ ನಡೆಯಲಿರುವ ರಾಮಮಂದಿರ ನಿರ್ಮಾಣದ ಭೂಮಿ ಪೂಜೆಯ ಸಂಭ್ರಮಕ್ಕೆ ಶಿವಮೊಗ್ಗ ಸಜ್ಜಾಗಿದೆ.
ಈ ಕುರಿತು ವಿಶ್ವಹಿಂದೂ ಪರಿಷತ್ ಜಿಲ್ಲಾ ಘಟಕದ ಅಧ್ಯಕ್ಷ ರಮೇಶ್ ಬಾಬು ಜಾದವ್ ಸುದ್ದಿಗೋಷ್ಟಿ ನಡೆಸಿ ಮಾಹಿತಿ ನೀಡಿದ್ದು, ಶ್ರೀರಾಮ ಮಂದಿರದ ಕನಸು ಶತಮಾನಗಳ ಹೋರಾಟ. ಸಾವಿರಾರು ಸಾಧುಸಂತರ ಬೇಡಿಕೆ. ಕೊನೆಗೂ ಮಂದಿರದ ನಿರ್ಮಾಣಕ್ಕೆ ಮುಹೂರ್ತ ನಿಶ್ಚಯಿಸಲಾಗಿದೆ. ಕೊರೊನಾ ವೈರಸ್ ಕಾರಣ ಎಲ್ಲ ರಾಮಭಕ್ತರೂ ಅಯೋಧ್ಯೆಗೆ ತೆರಳಲು ಸಾಧ್ಯವಿಲ್ಲ. ಹಾಗಾಗಿ, ವಿಶ್ವಹಿಂದೂ ಪರಿಷತ್ ಕೇಂದ್ರೀಯ ಮಹಾಪ್ರಧಾನ ಕಾರ್ಯದರ್ಶಿ ಮಿಲಿಂದ ಪಾರಂಡೆ ಅವರು ತಮ್ಮ ಮನೆ, ಮಠ ಮಂದಿರ, ಧಾರ್ಮಿಕ ಕೇಂದ್ರಗಳಲ್ಲಿ ಸರಳವಾಗಿ ಕಾರ್ಯಕ್ರಮ ಆಯೋಜಿಸಲು ಸೂಚಿಸಿದ್ದಾರೆ.
ಅಂದು ನಗರದ ಕೋಟೆ ಸೀತಾರಾಮಾಂಜನೇಯ ದೇವಸ್ಥಾನದಲ್ಲಿ ಬೆಳಿಗ್ಗೆ 8ಕ್ಕೆಗೆ ಶ್ರೀರಾಮತಾರಕ ಹೋಮ. 10 ಗಂಟೆಗೆ ಸಣ್ಣ ಸಭಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಬೀದಿ, ಮನೆ, ಗ್ರಾಮ, ದೇವಾಲಯಗಳಲ್ಲಿ ತಳಿರುತೋರಣಗಳಿಂದ ಅಲಂಕರಿಸಲಾಗುತ್ತಿದೆ. ಭಜನೆ, ಸಂಕೀರ್ತನೆ, ಜಪ, ಪೂಜೆ, ಪುಷ್ಪಾರ್ಚನೆ, ದೂಪ, ದೀಪ, ನೈವೇದ್ಯಗಳಿಂದ ಶ್ರೀರಾಮನನ್ನು ಆರಾಧಿಸಿ ಪ್ರಸಾದ ವಿತರಿಸುವರು ಎಂದು ತಿಳಿಸಿದರು.
ಇನ್ನು ಸುದ್ದಿಗೋಷ್ಟಿಯಲ್ಲಿ ವಿಶ್ವಹಿಂದೂ ಪರಿಷತ್ ಪದಾಧಿಕಾರಿಗಳಾದ ಚಂದ್ರಕಾAತ್, ಎಸ್.ಆರ್.ನಟರಾಜ್, ನಾರಾಯಣ ಜಿ.ವರ್ಣೇಕರ್, ಸತೀಶ್, ರಾಜೇಶ ಗೌಡ, ವಿ.ಕೆ.ಜೈನ್ ಇದ್ದರು.