ADVERTISEMENT
Sunday, March 22, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

Shinzo Abe | ಜಗತ್ತನ್ನ ಬೆಚ್ಚಿ ಬೀಳಿಸಿದ್ದ ಮಹಾನ್ ನಾಯಕರ ಕೊಲೆಗಳು

Mahesh M Dhandu by Mahesh M Dhandu
July 15, 2022
in Newsbeat, Saaksha Special, ಎಸ್ ಸ್ಪೆಷಲ್
Share on FacebookShare on TwitterShare on WhatsappShare on Telegram

Shinzo Abe | ಜಗತ್ತನ್ನ ಬೆಚ್ಚಿ ಬೀಳಿಸಿದ್ದ ಮಹಾನ್ ನಾಯಕರ ಕೊಲೆಗಳು

ಜಪಾನ್ ನ ಮಾಜಿ ಪ್ರಧಾನಿ ಶಿಂಜೋ ಅಬೆ ಅವರ ಕೊಲೆ ಇಡೀ ವಿಶ್ವವನ್ನು ಬೆಚ್ಚಿ ಬೀಳಿಸಿದೆ. ಪಕ್ಷದ ಪರವಾಗಿ ಜನರ ನಡುವೆ ಪ್ರಚಾರ ನಡೆಸುವಾಗ ಯಮಗಾಮಿ ಎಂಬ ವ್ಯಕ್ತಿ ಶಿಂಜೋ ಅವರನ್ನ ಗುಂಡಿಕ್ಕೆ ಕೊಲೆ ಮಾಡಿದ್ದಾನೆ.

Related posts

ಗಂಗಾ ನದಿಯಲ್ಲಿ ಇಫ್ತಾರ್ ಕೂಟ 14 ಯುವಕರ ಬಂಧನ ಖಂಡಿಸಿದ ಓವೈಸಿ ಕೊಳಚೆ ನೀರು ಸೇರಿದಾಗ ಧಕ್ಕೆಯಾಗದ ಭಾವನೆ ಊಟ ಮಾಡಿದರೆ ಘಾಸಿಯಾಗುತ್ತದೆಯೇ

ಗಂಗಾ ನದಿಯಲ್ಲಿ ಇಫ್ತಾರ್ ಕೂಟ 14 ಯುವಕರ ಬಂಧನ ಖಂಡಿಸಿದ ಓವೈಸಿ ಕೊಳಚೆ ನೀರು ಸೇರಿದಾಗ ಧಕ್ಕೆಯಾಗದ ಭಾವನೆ ಊಟ ಮಾಡಿದರೆ ಘಾಸಿಯಾಗುತ್ತದೆಯೇ

March 22, 2026
ಹೆದರಿ ಹಿಂದೆ ಸರಿದಿಲ್ಲ ಭೇಟೆ ಆಡಲು ಹೊಂಚು ಹಾಕಿದ್ದಾರೆ ರಾಕಿಂಗ್ ಸ್ಟಾರ್ ಯಶ್ : ಧುರಂಧರ್ 2 ಅಬ್ಬರದ ನಡುವೆ ಟಾಕ್ಸಿಕ್ ಸೈಲೆಂಟ್ ಆಗಿದ್ದೇಕೆ!

ಹೆದರಿ ಹಿಂದೆ ಸರಿದಿಲ್ಲ ಭೇಟೆ ಆಡಲು ಹೊಂಚು ಹಾಕಿದ್ದಾರೆ ರಾಕಿಂಗ್ ಸ್ಟಾರ್ ಯಶ್ : ಧುರಂಧರ್ 2 ಅಬ್ಬರದ ನಡುವೆ ಟಾಕ್ಸಿಕ್ ಸೈಲೆಂಟ್ ಆಗಿದ್ದೇಕೆ!

March 22, 2026

ಶಿಂಜೋ ಅವರ ಕೊಲೆಗೆ ನಾನಾ ಕಾರಣಗಳನ್ನು ಹೇಳಲಾಗುತ್ತಿದೆ. ಆದ್ರೆ ಈ ಘಟನೆ ವಿಶ್ವದಲ್ಲಿ ನಡೆದ ಮಹಾನ್ ನಾಯಕರ ಕೊಲೆಗಳನ್ನು ನೆನಪಿಸಿವೆ.

ಅಂತಹ ಪಟ್ಟಿಯನ್ನ ಈ ವಿಡಿಯೋದಲ್ಲಿ ನಾವು ನೋಡೋಣ..

1865 – ಅಮೆರಿಕಾ ಅಧ್ಯಕ್ಷ ಅಬ್ರಹಾಂ ಲಿಂಕನ್ ಕೊಲೆ

ಏಪ್ರಿಲ್ 14, 1865 ಇಡೀ ವಿಶ್ವವನ್ನೇ ಬೆಚ್ಚಿ ಬೀಳಿಸಿದ ಕೊಲೆ ಇದು. ಅಂದು ಅಮೆರಿಕಾ ಅಧ್ಯಕ್ಷ ಅಬ್ರಹಾಂ ಲಿಂಕನ್ ಅವರು ವಾಷಿಂಗ್ ಟನ್ ನಲ್ಲಿ ನಾಟಕ ನೋಡುತ್ತಿದ್ದಾಗ ರಂಗಭೂಮಿ ನಟನ ಗುಂಡೇಟಿಗೆ ಬಲಿಯಾಗಿದ್ರು. ನಾವು ಇತಿಹಾಸದಲ್ಲಿ ರಾಜ ಮಹಾರಾಜರ ಕೊಲೆಗಳು ದಾಖಲಾಗಿದ್ದರೂ ಆಧುನಿಕ ಜಗತ್ತಿನ ಒಂದು ದೇಶದ ಮುಖ್ಯಸ್ಥ ಹತ್ಯೆಯಾಗಿದ್ದು ಇದೇ ಮೊದಲು.

1881 ಅಮೆರಿಕಾದ ಅಧ್ಯಕ್ಷ ಜೇಮ್ಸ್ ಗಾರ್ ಫೀಲ್ಡ್ ಕೊಲೆ   

ಲಿಂಕನ್ ಅವರ ಕೊಲೆಯ ಬಳಿಕ ಅಮೆರಿಕಾದ 20ನೇ ಅಧ್ಯಕ್ಷನಾಗಿದ್ದ ಜೇಮ್ಸ್ ಜಾರ್ ಫೀಲ್ಡ್ ಅವರ ಮೇಲೆ ಗುಂಡಿನ ದಾಳಿ ನಡೆದಿತ್ತು. 1881 ಜುಲೈ 2 ರಂದು ಈ ಘಟನೆ ನಡೆದಿದ್ದು, 79 ದಿನಗಳ ನಂತರ ಸೆಪ್ಟಂಬರ್ 19 ರಂದು ಜೇಮ್ಸ್ ಕೊನೆಯುಸಿರೆಳೆದಿದ್ದರು.

1901  ಅಮೆರಿಕಾ ಅಧ್ಯಕ್ಷ ವಿಲಿಯಮ್ ಮೆಕೆನ್ ಲೀ ಕೊಲೆ

1901 ಸೆಪ್ಟಂಬರ್ 14 ರಂದು ನ್ಯೂಯಾರ್ಕ್ ನಲ್ಲಿ ವಿಲಿಯಮ್  ಮೆಕೆನ್ ಲೀ ಅವರನ್ನು ಗುಂಡಿಟ್ಟು ಕೊಲೆ ಮಾಡಲಾಯ್ತು. ಆರ್ಥಿಕ ಹಿಂಜರಿತದಿಂದ ಕೆಲಸ ಕಳೆದುಕೊಂಡಿದ್ದ ಲಿಯೋನ್ ಎಂಬಾತ ಈ ಕೊಲೆ ಮಾಡಿದ್ದ.

1948 ಮಹಾತ್ಮ ಗಾಂಧಿಜೀ ಕೊಲೆ

ಈ ಘಟನೆ ಇಡೀ ವಿಶ್ವಕ್ಕೆ ದೊಡ್ಡ ಆಘಾತವನ್ನ ನೀಡಿತ್ತು. ಶಾಂತಿ ದೂತ ಕೊಲೆಗೆ ಇಡೀ ಜಗತ್ತು ತಲೆತಗ್ಗಿಸಿತ್ತು. 1948 ಜನವರಿ 30 ರಂದು ದೆಹಲಿಯಲ್ಲಿ ನಾತೂರಾಮ್ ಗೋಡ್ಸೆ ಗಾಂಧಿಯವರನ್ನ ಗುಂಡಿಟ್ಟು ಕೊಂದಿದ್ದ. ಭಾರತ ಎರಡು ಭಾಗವಾಗಲು ಗಾಂಧೀಜಿಯೇ ಕಾರಣ ಎಂದು ಭಾವಿಸಿ ಗೋಡ್ಸೆ ಗಾಂಧಿಜೀಯವರನ್ನ ಕೊಲೆ ಮಾಡಿದ್ದ. ದೆಹಲಿಯ ಬಿರ್ಲಾ ಹೌಸ್ ನಲ್ಲಿ ಈ ಘಟನೆ ನಡೆದಿತ್ತು.

Shinzo Abe The murders of great leaders shocked the world saaksha tv
Shinzo Abe The murders of great leaders shocked the world saaksha tv

1963 ಅಮೆರಿಕಾ ಅಧ್ಯಕ್ಷ ಜಾನ್ ಎಫ್ ಕೆನಡಿ ಕೊಲೆ

ಅಧಿಕಾರದಲ್ಲಿದ್ದಾಗಲೇ ಕೊಲೆಯಾದ ಅಮೆರಿಕಾದ ನಾಲ್ಕನೇ ಅಧ್ಯಕ್ಷ ಜಾನ್ ಎಫ್ ಕೆನಡಿ. ಅಮೆರಿಕಾದ 35ನೇ ಅಧ್ಯಕ್ಷರಾಗಿದ್ದ ಕೆನಡಿ ಅವರನ್ನು 1936ರ ನವೆಂಬರ್ 22 ರಂದು ಕೊಲೆ ಮಾಡಲಾಯ್ತು. ಟೆಕ್ಸಾಸ್ ನ ರಾಜಧಾನಿ ಡಲ್ಲಾಸ್ ನಲ್ಲಿ ನಡೆದ ಚುನಾವಣಾ ರ್ಯಾಲಿಯಲ್ಲಿ ಭಾಗಿಯಾಗಿದ್ದಾಗ ಕೆನಡಿ ಅವರ ಕೊಲೆಯಾಯ್ತು.  ಆದ್ರೆ ಇವರ ಕೊಲೆಗೆ ಇದೇ ಕಾರಣ ಅಂತಾ ಈವರೆಗೂ ತಿಳಿದು ಬಂದಿಲ್ಲ.

ಮಾರ್ಟಿನ್ ಲೂಥರ್ ಕಿಂಗ್ 1968

ಮಹಾತ್ಮ ಗಾಂಧೀಜಿ ಅವರ ತತ್ವಗಳ ಅನುಯಾಯಿಗಳಾಗಿದ್ದ ಮಾರ್ಟಿನ್ ಲೂಥರ್ ಕಿಂಗ್ ಜೂನಿಯರ್ ಅವರನ್ನ ಕೊಲೆ ಮಾಡಲಾಗಿತ್ತು. 1968 ರ ಏಪ್ರಿಲ್ 4 ರಂದು ಜೇಮ್ಸ್ ರೇ ಎಂಬಾತ ಕಪ್ಪು ವರ್ಣಿಯರನ್ನ ಒಗ್ಗೂಡಿಸಲು ಲೂಥರ್ ನಡೆಸುತ್ತಿದ್ದ ಹೋರಾಟಗಳ ಕಾರಣದಿಂದಾಗಿ ಅವರನ್ನ ಗುಂಡಿಟ್ಟು ಕೊಲೆ ಮಾಡಿದ್ರು.

Shinzo Abe The murders of great leaders shocked the world saaksha tv
Shinzo Abe The murders of great leaders shocked the world saaksha tv

ಭಾರತ ಪ್ರಧಾನಿ ಇಂದಿರಾ ಗಾಂಧಿ ಕೊಲೆ 1984

ಮಹಾತ್ಮ ಗಾಂಧಿಯವರ ಕೊಲೆಯ ಬಳಿಕ ಇಡೀ ಭಾರತವನ್ನು ಬೆಚ್ಚಿ ಬೀಳಿಸಿದ ಕೊಲೆ ಅಂದ್ರೆ ಅದು ಇಂಧಿರಾ ಗಾಂಧಿ ಅವರ ಕೊಲೆ. 1984ರ ಅಕ್ಟೋಬರ್ 30 ರಂದು ಇಂದಿರಾ ಗಾಂಧಿಯವರನ್ನ ಅವರ ಬಾಡಿಗಾರ್ಡ್ ಗಳೇ ಕೊಲೆ ಮಾಡಿದರು. ಇಂದಿರಾ ಗಾಂಧಿ ಅವರ ದೇಹಕ್ಕೆ 33 ಗುಂಡುಗಳು ಹೊಕ್ಕಿದ್ದವು.

ರಾಜೀವ್ ಗಾಂಧಿ ಕೊಲೆ 1991

ಇಂದಿರಾ ಗಾಂಧಿ ಅವರ ಕೊಲೆಯಾದ ಐದು ವರ್ಷಕ್ಕೆ ರಾಜೀವ್ ಗಾಂಧಿ ಅವರ ಕೊಲೆಯಾಯ್ತು. 1991 ರ ಮೇ 21 ರಂದು ತಮಿಳುನಾಡಿನ ಶ್ರೀಪೆರಂಬುದೂರಿನಲ್ಲಿ ಮಾನವ ಬಾಂಬ್ ಸ್ಫೋಟಿಸಿ ರಾಜೀವ್ ಗಾಂಧಿಯವರನ್ನ ಕೊಲೆ ಮಾಡಲಾಯ್ತು. ಈ ಘಟನೆಯಲ್ಲಿ ರಾಜೀವ್ ಗಾಂಧಿ ಅವರ ದೇಹ ಛಿದ್ರ ಛಿದ್ರವಾಗಿತ್ತು.

ಹೀಗೆ ಅಧಿಕಾರ, ದ್ವೇಷ, ರಾಜಕೀಯ, ಹಣದ ಕಾರಣಕ್ಕಾಗಿ ಜಗತ್ತಿನಲ್ಲಿ ಹಲವು ನಾಯಕರ ಕೊಲೆಗಳಾಗಿವೆ.   

Tags: #Saaksha TVMahatma Gandhishinzo abe
ShareTweetSendShare
Join us on:

Related Posts

ಗಂಗಾ ನದಿಯಲ್ಲಿ ಇಫ್ತಾರ್ ಕೂಟ 14 ಯುವಕರ ಬಂಧನ ಖಂಡಿಸಿದ ಓವೈಸಿ ಕೊಳಚೆ ನೀರು ಸೇರಿದಾಗ ಧಕ್ಕೆಯಾಗದ ಭಾವನೆ ಊಟ ಮಾಡಿದರೆ ಘಾಸಿಯಾಗುತ್ತದೆಯೇ

ಗಂಗಾ ನದಿಯಲ್ಲಿ ಇಫ್ತಾರ್ ಕೂಟ 14 ಯುವಕರ ಬಂಧನ ಖಂಡಿಸಿದ ಓವೈಸಿ ಕೊಳಚೆ ನೀರು ಸೇರಿದಾಗ ಧಕ್ಕೆಯಾಗದ ಭಾವನೆ ಊಟ ಮಾಡಿದರೆ ಘಾಸಿಯಾಗುತ್ತದೆಯೇ

by Shwetha
March 22, 2026
0

ಉತ್ತರ ಪ್ರದೇಶದ ವಾರಣಾಸಿಯಲ್ಲಿರುವ ಪವಿತ್ರ ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ನಡೆಸಿದ ಆರೋಪದ ಮೇಲೆ 14 ಮುಸ್ಲಿಂ ಯುವಕರನ್ನು ಪೊಲೀಸರು ಬಂಧಿಸಿರುವ ಘಟನೆ ಈಗ ಭಾರಿ...

ಹೆದರಿ ಹಿಂದೆ ಸರಿದಿಲ್ಲ ಭೇಟೆ ಆಡಲು ಹೊಂಚು ಹಾಕಿದ್ದಾರೆ ರಾಕಿಂಗ್ ಸ್ಟಾರ್ ಯಶ್ : ಧುರಂಧರ್ 2 ಅಬ್ಬರದ ನಡುವೆ ಟಾಕ್ಸಿಕ್ ಸೈಲೆಂಟ್ ಆಗಿದ್ದೇಕೆ!

ಹೆದರಿ ಹಿಂದೆ ಸರಿದಿಲ್ಲ ಭೇಟೆ ಆಡಲು ಹೊಂಚು ಹಾಕಿದ್ದಾರೆ ರಾಕಿಂಗ್ ಸ್ಟಾರ್ ಯಶ್ : ಧುರಂಧರ್ 2 ಅಬ್ಬರದ ನಡುವೆ ಟಾಕ್ಸಿಕ್ ಸೈಲೆಂಟ್ ಆಗಿದ್ದೇಕೆ!

by Shwetha
March 22, 2026
0

ಕನ್ನಡ ಚಿತ್ರರಂಗ ಮಾತ್ರವಲ್ಲ ಇಡೀ ಭಾರತೀಯ ಚಿತ್ರರಂಗವೇ ಕಾತುರದಿಂದ ಕಾಯುತ್ತಿದ್ದ ಮಹಾ ಘರ್ಷಣೆಯೊಂದು ಸ್ವಲ್ಪದರಲ್ಲೇ ತಪ್ಪಿದೆ. ಕೆಜಿಎಫ್ 2 ಬಿಡುಗಡೆಯಾಗಿ ಬರೋಬ್ಬರಿ ನಾಲ್ಕು ವರ್ಷಗಳ ಕಾಲ ಯಶ್...

ನೆರೆಹೊರೆಯವರನ್ನು ನೆಮ್ಮದಿಯಿಂದ ಇರಲು ಬಿಡದ ಪಾಕಿಸ್ತಾನ ಮತ್ತು ಇಸ್ರೇಲ್ ಒಂದೇ ಪಾಕಿಸ್ತಾನದ ವಿರುದ್ಧ ಓವೈಸಿ ಆಕ್ರೋಶ

ನೆರೆಹೊರೆಯವರನ್ನು ನೆಮ್ಮದಿಯಿಂದ ಇರಲು ಬಿಡದ ಪಾಕಿಸ್ತಾನ ಮತ್ತು ಇಸ್ರೇಲ್ ಒಂದೇ ಪಾಕಿಸ್ತಾನದ ವಿರುದ್ಧ ಓವೈಸಿ ಆಕ್ರೋಶ

by Shwetha
March 22, 2026
0

ಹೈದರಾಬಾದ್ ನ ಐತಿಹಾಸಿಕ ಮೆಕ್ಕಾ ಮಸೀದಿಯಲ್ಲಿ ಎಐಎಂಐಎಂ ಮುಖ್ಯಸ್ಥ ಹಾಗೂ ಸಂಸದ ಅಸಾದುದ್ದೀನ್ ಓವೈಸಿ ಅವರು ಪಾಕಿಸ್ತಾನದ ವಿರುದ್ಧ ಹಿಂದೆಂದೂ ಕಾಣದಂತಹ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಮುಸ್ಲಿಂ...

ಬಾಯಿ ಚಪಲಕ್ಕೆ ಮಾತನಾಡುವ ಮೂರ್ಖರಿಗೆ ನಾನು ಉತ್ತರಿಸಲ್ಲ ಯತ್ನಾಳ್ ವಿರುದ್ಧ ಗುಡುಗಿದ ಬಿ ವೈ ವಿಜಯೇಂದ್ರ

ಬಾಯಿ ಚಪಲಕ್ಕೆ ಮಾತನಾಡುವ ಮೂರ್ಖರಿಗೆ ನಾನು ಉತ್ತರಿಸಲ್ಲ ಯತ್ನಾಳ್ ವಿರುದ್ಧ ಗುಡುಗಿದ ಬಿ ವೈ ವಿಜಯೇಂದ್ರ

by Shwetha
March 22, 2026
0

ರಾಜ್ಯ ಬಿಜೆಪಿಯಲ್ಲಿ ಆಂತರಿಕ ಭಿನ್ನಮತ ಹಾಗೂ ನಾಯಕರ ನಡುವಿನ ವಾಗ್ಯುದ್ಧ ದಿನದಿಂದ ದಿನಕ್ಕೆ ತಾರಕಕ್ಕೇರುತ್ತಿದೆ. ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಬಿಜೆಪಿ ಉದ್ದೇಶಪೂರ್ವಕವಾಗಿ ಡಮ್ಮಿ ಅಭ್ಯರ್ಥಿಯನ್ನು...

ದಿನ ಭವಿಷ್ಯ (09-03-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (22-03-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

by Shwetha
March 22, 2026
0

ದಿನ ಭವಿಷ್ಯ: 22-03-2026 ಮೇಷ ರಾಶಿ: ಇಂದು ನಿಮಗೆ ಅತ್ಯಂತ ಉತ್ಸಾಹಭರಿತ ದಿನವಾಗಲಿದೆ. ಉದ್ಯೋಗದಲ್ಲಿ ನಿಮ್ಮ ಕಾರ್ಯಕ್ಷಮತೆಗೆ ತಕ್ಕ ಮನ್ನಣೆ ದೊರೆಯಲಿದ್ದು, ಹೊಸ ಜವಾಬ್ದಾರಿಗಳು ಸಿಗುವ ಸಾಧ್ಯತೆ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram