ಶಿರವಾಳ ಗ್ರಾಮದ ವೃತ್ತಕ್ಕೆ ಅಪ್ಪು ಹೆಸರು puneeth-rajkumar saaksha tv
ಶಿವಮೊಗ್ಗ : ಪುನೀತ್ ರಾಜ್ ಕುಮಾರ್ ಅವರ ಅಕಾಲಿನ ನಿಧನದ ಸುದ್ದಿಯನ್ನು ಅರಗಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ.
46ರ ಹರೆಯದಲ್ಲೇ ಈ ಲೋಕದ ಯಾತ್ರೆಯನ್ನು ಮುಗಿಸಿದ್ದ ಅಪ್ಪು ಅಭಿಮಾನಿಗಳ ಮನದಲ್ಲಿ ಎಂದೆಂದಿಗೂ ನೆನಪಿನಲ್ಲಿ ಉಳಿಯುತ್ತಾರೆ.
ಒಬ್ಬ ಕಲಾವಿದನಾಗಿ ಸಾಕಷ್ಟು ಹೆಸರು, ಸಾಧನೆ ಮಾಡಿರುವ ಅಪ್ಪು, ಮಾನವೀಯತೆಯ ಗುಣಗಳ ಮೂಲಕವೂ ಅಭಿಮಾನಿಗಳ ಹೃದಯದಲ್ಲಿ ಶಾಶ್ವತವಾದ ಸ್ಥಾನವನ್ನು ಪಡೆದುಕೊಂಡಿದ್ದಾರೆ.
ಡಾ. ರಾಜ್ ಕುಮಾರ್ ನಡೆದ ಹಾದಿಯಲ್ಲಿ ಮುನ್ನಡೆದಿದ್ದ ಅಪ್ಪು ತಂದೆಗೆ ತಕ್ಕ ಮಗನಾಗಿ ಕರುನಾಡಿನ ಯುವ ರತ್ನನಾಗಿ ರಾರಾಜಿಸಿ ಮರೆಯಾಗಿದ್ದಾರೆ.
ಪುನೀತ್ ಅವರು ಮರಣ ಹೊಂದಿದ ನಂತರ ಹಲವು ಮಂದಿ ಶ್ರದ್ಧಾಂಜಲಿ ಸಲ್ಲಿಸಿದ್ದಾರೆ.
ಅದರಂತೆ ಸಾಗರ ತಾಲೂಕಿನ ಶಿರವಾಳ ಗ್ರಾಮಸ್ಥರು ತಮ್ಮ ಗ್ರಾಮದ ವೃತ್ತವೊಂದಕ್ಕೆ ಪುನೀತ್ ರಾಜ್ ಕುಮಾರ್ ವೃತ್ತ ಎಂದು ನಾಮಕರಣ ಮಾಡಿ ತಮ್ಮ ಅಭಿಮಾನವನ್ನು ಮೆರೆದಿದ್ದಾರೆ.