ಬೆಂಗಳೂರು : ಕರುನಾಡ ಚಕ್ರವರ್ತಿ ಶಿವರಾಜ್ ಕುಮಾರ್ ಹುಟ್ಟುಹಬ್ಬ ಅಂದ್ರೆ ಅಭಿಮಾನಿಗಳ ಪಾಲಿಗೆ ಅದೊಂದು ಹಬ್ಬ. ಅಂದು ಶಿವಣ್ಣನ ಅಭಿಮಾನಿಗಳ ಮನೆಮನದಲ್ಲಿ ಹಬ್ಬದ ಸಂಭ್ರಮವಿರುತ್ತೆ. ಅಭಿಮಾನಿಗಳೆಲ್ಲರೂ ಶಿವಣ್ಣನ ಮನೆಗೆ ತೆರಳಿ ಬರ್ತ್ ಡೇ ವಿಶ್ ಮಾಡಿ ಸಿಹಿ ಹಂಚಿ ಸಂಭ್ರಮಿಸುತ್ತಾರೆ. ಆದ್ರೆ ಈ ಬಾರಿ ಕೊರೊನಾ ವೈರಸ್ ಸಂಭ್ರಮಕ್ಕೆ ಬ್ರೇಕ್ ಹಾಕಿದೆ.
ಹೆಮ್ಮಾರಿ ಕೊರೊನಾ ಹಿನ್ನೆಲೆ ಅನೇಕ ನಟರು ತಮ್ಮ ಹುಟ್ಟುಹಬ್ಬವನ್ನು ಅದ್ದೂರಿಯಾಗಿ ಆಚರಣೆ ಮಾಡದಂತೆ ಅಭಿಮಾನಿಗಳಲ್ಲಿ ಮನವಿ ಮಾಡಿಕೊಂಡಿದ್ದಾರೆ. ಅದರಂತೆ ಇದೀಗ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅವರು ತಮ್ಮ ಹುಟ್ಟುಹಬ್ಬಕ್ಕೂ ಮುನ್ನ ಅಭಿಮಾನಿಗಳಲ್ಲಿ ಮನವಿ ಮಾಡಿಕೊಂಡಿದ್ದಾರೆ.
ಇದೇ ತಿಂಗಳ 12ರಂದು ಶಿವಣ್ಣ ಅವರ ಹುಟ್ಟುಹಬ್ಬವಿದೆ. ಕೊರೊನಾ ಕಾರಣ ಈ ಬಾರಿ ಶಿವಣ್ಣ ತಮ್ಮ ಹುಟ್ಟುಹಬ್ಬವನ್ನು ಅದ್ಧೂರಿಯಾಗಿ ಆಚರಣೆ ಮಾಡಿಕೊಳ್ಳದಿರಲು ನಿರ್ಧಾರಿಸಿದ್ದಾರೆ.
https://www.instagram.com/tv/CCK89X2HBPq/?utm_source=ig_web_button_share_sheet
ಈ ಕುರಿತು ಶಿವರಾಜ್ ಕುಮಾರ್ ಇನ್ಸ್ ಸ್ಟಾಗ್ರಾಂನಲ್ಲಿ ವಿಡಿಯೋ ಅಪ್ಲೋಡ್ ಮಾಡಿದ್ದು, ‘ಎಲ್ಲರಿಗೂ ನಮಸ್ಕಾರ, ನೀವೆಲ್ಲರೂ ಆರೋಗ್ಯವಾಗಿ ಚೆನ್ನಾಗಿದ್ದೀರಿ ಎಂದುಕೊಂಡಿದ್ದೇನೆ. ನಾನು ಕೂಡ ಆರೋಗ್ಯವಾಗಿದ್ದೀನಿ, ನೀವು ಚೆನ್ನಾಗಿರಬೇಕೆಂದು ದೇವರಲ್ಲಿ ಪ್ರಾರ್ಥನೆ ಮಾಡಿಕೊಳ್ಳುತ್ತೇನೆ. ಈ ತಿಂಗಳು ನನ್ನ ಹುಟ್ಟುಹಬ್ಬವಿದೆ. ಆದರೆ ಆ ದಿನ ನಾನು ಮನೆಯಲ್ಲಿ ಇರಲ್ಲ. ಯಾಕೆಂದರೆ ಇಂತಹ ಸಂದರ್ಭದಲ್ಲಿ ನನ್ನ ಹುಟ್ಟುಹಬ್ಬಕ್ಕಿಂತ ನಿಮ್ಮ ಆರೋಗ್ಯ ಮುಖ್ಯ’ ಎಂದು ಅಭಿಮಾನಿಗಳಲ್ಲಿ ಮನವಿ ಮಾಡಿಕೊಂಡಿದ್ದಾರೆ..
‘ಹುಟ್ಟುಹಬ್ಬದ ದಿನ ನೀವೆಲ್ಲರೂ ಮನೆಯ ಬಳಿ ಬಂದರೆ ಸಾಮಾಜಿಕ ಅಂತರ ಕಾಪಾಡಲು ಕಷ್ಟವಾಗುತ್ತದೆ. ಇದರಿಂದ ನಿಮ್ಮೆಲ್ಲರಿಗೂ ನೋವಾಗುತ್ತದೆ ಎಂದು ನನಗೆ ಗೊತ್ತು. ನನಗೂ ಅಷ್ಟೆ ನೋವಾಗುತ್ತೆ. ಆದರೆ ಈ ಹುಟ್ಟುಹಬ್ಬದಲ್ಲಿ ನನ್ನ ಆರೋಗ್ಯಕ್ಕಿಂತ ನಿಮ್ಮ ಆರೋಗ್ಯ ನನಗೆ ತುಂಬಾ ಮುಖ್ಯ. ಹೀಗಾಗಿ ನೀವೆಲ್ಲರೂ ನಿಮ್ಮ ಆರೋಗ್ಯವನ್ನು ನೋಡಿಕೊಳ್ಳಲಿ’.
‘ವಿಡಿಯೋದಲ್ಲಿ ಈ ಕೊರೊನಾ ಮುಗಿದ ಮೇಲೆ ನಾವೆಲ್ಲರೂ ಒಂದು ಕಡೆ ಭೇಟಿ ಮಾಡೋಣ ಎಂದು ಅಭಿಮಾನಿಗಳಿಗೆ ಭರವಸೆ ನೀಡಿರುವ ಶಿವಣ್ಣ, ಈ ಕೊರೊನಾಗೆ ಭಯಪಡುವಂತ ಅವಶ್ಯಕತೆ ಇಲ್ಲ. ಎಲ್ಲರೂ ಧೈರ್ಯವಾಗಿ ಇರಬೇಕು. ಈ ಕೊರೊನಾ ಹೋಗಲು ಸಾಮಾಜಿಕ ಅಂತರ ಕಾಪಾಡಿ, ನಿಯಮಗಳನ್ನು ಪಾಲಿಸಿ. ನಮ್ಮೆಲ್ಲರನ್ನೂ ಕಾಪಾಡಲು ಆ ದೇವರು ಇದ್ದಾನೆ. ನಿಮ್ಮೆಲ್ಲರ ಆಶೀರ್ವಾದ ನನ್ನ ಮೇಲೆ ಇರುತ್ತದೆ ಎಂಬ ನಂಬಿಕೆ ಇದೆ. ಧೈರ್ಯವಾಗಿರಿ, ಸುರಕ್ಷಿತವಾಗಿರಿ’ ಎಂದು ಧೈರ್ಯ ತುಂಬಿದ್ದಾರೆ.








