ನಟ ಶಿವಣ್ಣ (Shivarajkumar) ಅಮೆರಿಕದಲ್ಲಿ ಶಸ್ತ್ರ ಚಿಕಿತ್ಸೆಗೆ ಒಳಗಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಅವರು ಕರೆ ಮಾಡಿ ಆರೋಗ್ಯ ವಿಚಾರಿಸಿದ್ದಾರೆ.
ಈ ಕುರಿತು ಸಿಎಂ ತಮ್ಮ ಎಕ್ಸ್ ಖಾತೆಯಲ್ಲಿ ಬರೆದುಕೊಂಡಿದ್ದಾರೆ. ಅನಾರೋಗ್ಯದ ಹಿನ್ನೆಲೆಯಲ್ಲಿ ಇಂದು ಶಸ್ತ್ರಚಿಕಿತ್ಸೆಗೆ ಒಳಗಾಗುತ್ತಿರುವ ಕನ್ನಡ ಚಿತ್ರರಂಗದ ಖ್ಯಾತ ನಟ ಶಿವರಾಜ್ಕುಮಾರ್ ಅವರಿಗೆ ಕರೆಮಾಡಿ ಮಾತನಾಡಿ, ಶೀಘ್ರ ಗುಣಮುಖರಾಗುವಂತೆ ಹಾರೈಸಿದ್ದೇನೆ. ನನಗೆ ತಿಳಿದಂತೆ ಶಿವಣ್ಣ ಅವರ ಆತ್ಮವಿಶ್ವಾಸ, ಧೈರ್ಯ ಮತ್ತು ಸಹೃದಯತೆ ಅವರನ್ನು ಈ ಹೋರಾಟದಲ್ಲಿ ಗೆಲ್ಲಿಸಿಕೊಂಡು ಬರಲಿದೆ ಎಂಬ ವಿಶ್ವಾಸವಿದೆ ಎಂದು ಸಿಎಂ ಬರೆದುಕೊಂಡಿದ್ದಾರೆ.
ಬದುಕಿನ ದಾರಿಯಲ್ಲಿ ಎದುರಾಗಿರುವ ಈ ಸಣ್ಣ ಸಂಕಷ್ಟವನ್ನು ನಿವಾರಿಸಿಕೊಂಡು ಆರೋಗ್ಯವಂತರಾಗಿ ಬರಲಿರುವ ಶಿವರಾಜ್ಕುಮಾರ್ ಅವರ ಆಗಮನವನ್ನು ಎದುರು ನೋಡುತ್ತಿರುವ ಅವರ ಹಿತೈಷಿಗಳಲ್ಲಿ ನಾನೂ ಒಬ್ಬ. ನಾಡಿನ ಹಿರಿಯರ ಆಶೀರ್ವಾದ ಮತ್ತು ಕಿರಿಯರ ಶುಭಹಾರೈಕೆ ಶಿವರಾಜ್ಕುಮಾರ್ ಅವರ ಜೊತೆಗಿದ್ದು, ಅವರನ್ನು ಕಾಪಾಡಲಿದೆ ಎಂದು ಸಿದ್ದರಾಮಯ್ಯ ಸಿಎಂ ಹಾರೈಸಿದ್ದಾರೆ.
ಕರಾವಳಿ ವಿವಾದಕ್ಕೆ ಅಂತ್ಯ ಹಾಡಿದ ರಾಜ್ ಬಿ ಶೆಟ್ಟಿ: ವಿವಾದ ಮಾಡೋದು ನಮಗೂ ನೋವು ತರುತ್ತೆ ಎಂದು ಕ್ಷಮೆಯಾಚಿಸಿದ ನಟ -ಕಂಟೆಂಟ್ ಇಲ್ಲ ಅಂತ ಟೀಕಿಸಿದವರಿಗೆ ಪ್ರೀಮಿಯರ್ ಶೋ ಮೂಲಕವೇ ಉತ್ತರ
ನಟ ಪ್ರಜ್ವಲ್ ದೇವರಾಜ್ ಮತ್ತು ನಿರ್ದೇಶಕ ಗುರುದತ್ ಗಾಣಿಗ ನಡುವಿನ ಸಂಭಾವನೆ ಹಾಗೂ ಡಬ್ಬಿಂಗ್ ವಿವಾದದಿಂದ ಸದ್ದು ಮಾಡುತ್ತಿದ್ದ ಕರಾವಳಿ ಚಿತ್ರದ ಕುರಿತು ನಟ ರಾಜ್ ಬಿ...








