ಸಚಿವ ಸ್ಥಾನ ಬೇಡ ಅನ್ನೋದಕ್ಕೆ ನಾನೇನು ಸನ್ಯಾಸಿಯಲ್ಲ – ಶಿವರಾಮ ಹೆಬ್ಬಾರ
ಉತ್ತರ ಕನ್ನಡ : ಸಿಎಂ ಬಿ ಎಸ್ ಯಡಿಯೂರಪ್ಪನವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ ಬೆನ್ನಲ್ಲೇ ಮುಂದಿನ ಸಿಎಂ ಯಾರು ಎನ್ನುವ ಪ್ರಶ್ನೆ ಎದುರಾಗಿದೆ.. ಹತ್ತಾರು ನಾಯಕರ ಹೆಸರು ಸಿಎಂ ರೇಸ್ ನಲ್ಲಿದೆ.. ಇಂದು ಸಂಜೆ ಶಾಸಕಾಂಗ ಸಭೆಯ ನಂತರ ನೂತನ ಸಿಎಂ ಘೋಷಣೆಯಾಗುವ ನಿರೀಕ್ಷೆಯೂ ಇದೆ..
ಈ ನಡುವೆ ಅನೇಕರು ಸಚಿವ ಸ್ಥಾನಗಳಿಗಾಗಿ ಲಾಬಿ ನಡೆಸ್ತಾಯಿದ್ದಾರೆ.. ಅಂತವರ ಪೈಕಿ ಶಿವರಾಮ ಹೆಬ್ಬಾರ ಅವರ ಹೆಸರು ಕೂಡ ಕೇಳಿ ಬರ್ತಿದೆ.. ಇದಕ್ಕೆ ಪ್ರತಿಕ್ರಿಯಿಸಿರುವ ಹೆಬ್ಬಾರ ಅವರು ಸಚಿವರ ಆಯ್ಕೆ ಪಕ್ಷದ ಹೈಕಮಾಂಡ್ ಹಾಗೂ ನೂತನ ಮುಖ್ಯಮಂತ್ರಿ ವಿವೇಚನೆಗೆ ಬಿಟ್ಟಿದ್ದು. ಆದದ್ರೆ ಹುದ್ದೆ ಬೇಡ ಎನ್ನಲು ನಾನೇನು ಸನ್ಯಾಸಿಯಲ್ಲ ಎಂದು ಹೇಳಿದ್ದಾರೆ. ಅಲ್ಲದೇ ಬಾಂಬೆ ಟೀಮ್ ಎಂಬುದು ಈಗ ಮುಗಿದ ಅಧ್ಯಾಯ. ನಾವೆಲ್ಲ ಬಿಜೆಪಿ ಶಾಸಕರು. ಯಾರಿಗೆ ಸಚಿವ ಸ್ಥಾನ ನೀಡಬೇಕೆಂದು ಹಿರಿಯರೇ ತೀರ್ಮಾನಿಸುತ್ತಾರೆ ಎಂದರು.
ನಾನು 2 ಬಾರಿಯೂ ಅದೃಷ್ಟದಿಂದಲೇ ಸಿಎಂ ಆದೆ. ಜನರ ಆರ್ಶೀವಾದದಿಂದ ಅಲ್ಲ – ಹೆಚ್ ಡಿಕೆ
ಜೊತೆಗೆ ಪಕ್ಷದ ಶಿಸ್ತು, ಸಿದ್ಧಾಂತಕ್ಕೆ ತಲೆಬಾಗಿ ಯಡಿಯೂರಪ್ಪ ರಾಜೀನಾಮೆ ನೀಡಿದ್ದಾರೆ. ಬೇಸರವಿಲ್ಲ ಎಂದು ಅವರೇ ಸ್ಪಷ್ಟಪಡಿಸಿದ್ದಾರೆ. ಕಾಲಕಾಲಕ್ಕೆ ತಕ್ಕಂತೆ ಪಕ್ಷದ ವರಿಷ್ಠರು ತೆಗೆದುಕೊಳ್ಳುವ ನಿರ್ಧಾರಕ್ಕೆ ಎಲ್ಲರೂ ತಲೆಬಾಗುತ್ತೇವೆ ಎಂದರು.