Shivaratri : ಮಲೆಮಹದೇಶ್ವರ ಬೆಟ್ಟದಲ್ಲಿ ಫೆ 17 ರಿಂದ 21 ರವರೆಗೆ ಮಹಾಶಿವರಾತ್ರಿ ಜಾತ್ರೆ…..
ದಕ್ಷಿಣ ಭಾರತದ ಪ್ರಮುಖ ತೀರ್ಥ ಕ್ಷೇತ್ರಗಳಲ್ಲಿ ಒಂದಾಗಿರುವ ಚಾಮರಜನಗರ ಜಿಲ್ಲೆ ಹನೂರು ತಾಲೂಕಿನ ಮಲೆಮಹದೇಶ್ವರ ಬೆಟ್ಟದಲ್ಲಿ ಇದೇ ಫೆಬ್ರವರಿ 17 ರಿಂದ ಫೆಬ್ರವರಿ 21 ರ ವರೆಗೆ ಮಹಾಶಿವರಾತ್ರಿ ಜಾತ್ರೆ ನಡೆಯಲಿದು ಭಕ್ತ ಸಾಗರವೇ ಹರಿದು ಬರುತ್ತಿದೆ.
ಬೆಂಗಳೂರು, ರಾಮನಗರ, ಮಂಡ್ಯ, ಕನಕಪುರ ಭಾಗದ ಜನರು ಮಾದಪ್ಪ ನನ್ನ ಕಣ್ತುಂಬಿಕೊಳ್ಳಲು ಜನ ಕಾಲ್ನಡಿಗೆ ಮೂಲಕ ಸಾವಿರಾರು ಜನ ಸಂಗಮ ನದಿಯನ್ನ ದಾಟಿ ಬರುತ್ತಿದ್ದಾರೆ. ಶಿವರಾತ್ರಿ ಜಾತ್ರೆ ಕಣ್ತುಂಬಿಕೊಳ್ಳಲು ಬರುತ್ತಿರುವ ಲಕ್ಷಾಂತರ ಜನರಿಗೆ ಸ್ಥಳಿಯರು ಮಜ್ಜಿಗೆ, ಪಾನಕ ವಿತರಿಸುತ್ತಿದ್ದಾರೆ.
ಕಳೆದ ಬಾರಿ ಪಾದಯಾತ್ರೆ ಮೂಲಕ ತೆರಳುತ್ತಿದ್ದ ವೇಳೆ ಕಾವೇರಿ ಸಂಗಮದಲ್ಲಿ ನೀರಿನ ಹರಿವು ಹೆಚ್ಚಾಗಿ ಮೂವರು ಭಕ್ತರು ನಾಪತ್ತೆಯಾಗಿದ್ದರು. ಈ ಬಾರಿ ಇಂತಹ ಘಟನೆಗಳು ಮರುಕಳಿಸಿದಂತೆ ಹಾಗೂ ಭಕ್ತಾದಿಗಳಿಗೆ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ರಾಮನಗರ ಜಿಲ್ಲಾಡಳಿತದ ವತಿಯಿಂದ ಅಗತ್ಯ ಮುಂಜಾಗ್ರತಾ ಕ್ರಮಗಳನ್ನ ಕೈಗೊಳ್ಳಲಾಗಿದೆ. ನೀರಿನ ಹೊರಹರಿವನ್ನುನಿಲ್ಲಿಸಲಾಗಿದ್ದು ಪಾದಯಾತ್ರಿಗಳ ಸುರಕ್ಷತೆಗೆ 20 ನುರಿತ ಈಜುಗಾರರು ನೇಮಿಸಲಾಗಿದೆ.
ಮಲೆಮಹದೇಶ್ವರ ಬೆಟ್ಟ ಜಾತ್ರೆಗಾಗಿ ಸಾರಿಗೆ ಸಂಸ್ಥೆಯ 5 ದಿನಗಳ ಕಾಲ ನಿರಂತರ 500 ಬಸ್ ಸೇವೆಯನ್ನು ಕೊಡಲು ಮುಂದಾಗಿದೆ. ಜೊತೆಗೆ, ಸುರಕ್ಷಿತ ಕ್ರಮವಾಗಿ ದ್ವಿಚಕ್ರ ವಾಹನಗಳ ಓಡಾಟವನ್ನು ಸಂಪೂರ್ಣವಾಗಿ ನಿರ್ಬಂಧಿಸಿ ಎಸ್ಪಿ ಆದೇಶ ಹೊರಡಿಸಿದ್ದಾರೆ.
Shivaratri : Mahashivaratri Jatra at Malemahadeshwar Hill from 17th to 21st Feb….