ಜಾತಿ-ಧರ್ಮದ ರಾಜಕಾರಣ ಬಹಳ ದಿನ ನಡೆಯಲ್ಲ : ಶೋಭಾ ಕರಂದ್ಲಾಜೆ
ಚಿಕ್ಕಮಗಳೂರು : ಇಂದು ರಾಜ್ಯ ಎರಡು ಕ್ಷೇತ್ರಗಳ ಉಪಚುನಾವಣಾ ಫಲಿತಾಂಶ ಪ್ರಕಟವಾಗಿದ್ದು, ಈ ಬಗ್ಗೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಪ್ರತಿಕ್ರಿಯೆ ನೀಡಿದ್ದಾರೆ.
ಚಿಕ್ಕಮಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜನರು ಬುದ್ಧಿವಂತರಾಗಿದ್ದಾರೆ. ನಮ್ಮ ಮಾತು- ನಡೆಯನ್ನು ಅಳತೆ ಮಾಡುತ್ತಾರೆ.
ಜೆಡಿಎಸ್ ಇನ್ನಾದರೂ ಜವಾಬ್ದಾರಿಯುತ ಪಕ್ಷವಾಗಿ ನಡೆದುಕೊಳ್ಳಲಿ ಎಂದು ಹೆಚ್ ಡಿ ಕುಮಾರಸ್ವಾಮಿ ಅವರ ಆರ್ ಎಸ್ ಎಸ್ ಬಗೆಗಿನ ಹೇಳಿಕೆಗಳಿಗೆ ಟಾಂಗ್ ನೀಡಿದರು.
ಇನ್ನು ಮತದಾರರ ಬಗ್ಗೆ ಟೇಕನ್ ಫಾರ್ ಗ್ರಾಂಟೆಡ್ ಮನಸ್ಥಿತಿ ಇರಬಾರದು. ಯಾರನ್ನಾದರೂ ಟೀಕೆ ಮಾಡುವಾಗ ಹಿನ್ನೆಲೆ-ಮುನ್ನೆಲೆ ತಿಳಿದಿರಬೇಕು.
ಆರ್ ಎಸ್ ಎಸ್ ಅಂದರೆ ಏನು, ಅದು ಹೇಗೆ ಕೆಲಸ ಮಾಡುತ್ತದೆ, ಅದರ ನಾಯಕರು ಹೇಗೆ ನಡೆದುಕೊಳ್ಳುತ್ತಿದ್ದಾರೆ.
ಆರ್ ಎಸ್ ಎಸ್ ಹೇಗೆ ದೇಶ ಹಾಗೂ ಸಮಾಜ ಸೇವೆಯನ್ನು ಮಾಡುತ್ತಿದೆ ಎಂಬುದನ್ನು ತಿಳಿದು ಮಾತನಾಡಬೇಕು ಎಂದು ಕುಮಾರಸ್ವಾಮಿ ವಿರುದ್ಧ ತೀವ್ರ ಕಿಡಿಕಾರಿದರು.
ಸಿಂದಗಿಯಲ್ಲಿನ ಗೆಲುವಿನ ಬಗ್ಗೆ ಮಾತನಾಡಿ, ವೋಟ್ ಬ್ಯಾಂಕ್ ರಾಜಕಾರಣ, ಜಾತಿ- ಧರ್ಮದ ಓಲೈಕೆಯ ಮಾತಿಗೆ ಜನರು ಉಪಚುನಾವಣೆಯಲ್ಲಿ ಪಾಠ ಕಲಿಸಿದ್ದಾರೆ ಎಂದರು ಶೋಭಾ ಕರಂದ್ಲಾಜೆ.