Shraddha Murder Case : ಶ್ರದ್ಧಾ ದೇಹ ತುಂಡುಗಳನ್ನ ಹುಡುಕುವಂತೆ ಪೊಲೀಸರಿಗೆ ಸವಾಲು ಹಾಕಿದ್ದ ಅಫ್ತಾಬ್….
ರಾಷ್ಟ್ರ ರಾಜಧಾನಿ ದೆಹಲಿಯಲ್ಲಿನ ಶ್ರದ್ಧಾ ಮರ್ಡರ್ ಕೇಸ್ ಇಡೀ ದೇಶವನ್ನೇ ಬೆಚ್ಚಿ ಬೀಳಿಸಿದ್ದು , ದಿನೇ ದಿನೇ ಕೇಸ್ ವಿಚಾರವಾಗಿ ಒಂದೊಂದೇ ವಿಚಾರ ಗೊತ್ತಾಗ್ತಿದೆ..
ಇತ್ತೀಚೆಗೆ ಮಂಪರು ಪರೀಕ್ಷೆಗೆ ಒಳಗಾಗಿದ್ದ ಆರೋಪಿ ಅಫ್ತಾಬ್ ಶ್ರದ್ಧಾಳ ಹತ್ಯೆಗೈದು ಆಕೆಯ 35 ತುಂಡುಗಳನ್ನ ಮಾಡಿ ಕಾಡಿನಲ್ಲಿ ಅಲ್ಲಲ್ಲಿ ಹೂತು ಹಾಕಿ್ದಾಗಿ ತಪ್ಪು ಒಪ್ಪಿಕೊಂಡಿದ್ದ..
ಇದೀಗ ಈ ಪ್ರಕರಣ ಸಂಬಂಧ ಮತ್ತೊಂದು ಅಪ್ ಡೇಟ್ ಸಿಕ್ಕಿದೆ..
ಸದ್ಯಕ್ಕೆ ಅಫ್ತಾಬ್ ನನ್ನ ತಿಹಾರ್ ಜೈಲಿನಲ್ಲಿ ಇಡಲಾಗಿದೆ.. ಹತ್ಯಾಕಾಂಡದ ಬಗ್ಗೆ ಕೆಲ ಬೆಚ್ಚಿ ಬೀಳಿಸುವ ಸತ್ಯ ಬಾಯ್ಬಿಟ್ಟಿದ್ದಾನೆ..
ಮೇ 17 ರಂದು ಸಂಜೆ ಶ್ರದ್ಧಾ ಡೇಟಿಂಗ್ ಅಪ್ಲಿಕೇಶನ್ ಸಿಕ್ಕ ವ್ಯಕ್ತಿಯೊಂದಿಗೆ ಡೇಟಿಂಗ್ ಗೆ ಹೋಗಿದ್ದಳು. ಅದಾದ ಬಳಿಕ ಮೇ 18ರಂದು ತಡರಾತ್ರಿ ಮಹ್ರಾಲಿಯಲ್ಲಿರುವ ಫ್ಲಾಟ್ ಗೆ ವಾಪಸ್ ಮರಳಿದ್ದಳು.
ಅದಾದ ನಂತರ ನನ್ನನ್ನು ಬಿಟ್ಟು ಹೋಗುವುದಾಗಿ ಬೆದರಿಕೆ ಹಾಕಿದ್ದಳು. ಆಕೆ ತಾನು ಇನ್ನೊಬ್ಬ ವ್ಯಕ್ತಿಯೊಂದಿಗೆ ಡೇಟಿಂಗ್ ಹೋಗುತ್ತಿರುವುದರ ಬಗ್ಗೆ ತಿಳಿಸಿದ್ದಳು.
ಇದರಿಂದ ಕೋಪಗೊಂಡು ನಾನು ಆಕೆಯ ಕತ್ತು ಹಿಸುಕಿ ಕೊಲೆ ಮಾಡಿದ್ದೇನೆ. ಅದಾದ ಬಳಿಕ ಆಕೆಯ ದೇಹವನ್ನು ಪೀಸ್ ಪೀಸ್ ಮಾಡಿರೋದಾಗಿ ಹೇಳಿದ್ದಾನೆ ಎಂಬುದು ಗೊತ್ತಾಗಿದೆ..
ಅದಾದ ಬಳಿಕ ಅಫ್ತಾಬ್ ನನ್ನು ವಿಚಾರಣೆ ನಡೆಸುವಾಗ ದೆಹಲಿ ಪೊಲೀಸರು ಮತ್ತು ತನಿಖಾ ಸಂಸ್ಥೆಗಳಿಗೆ ಅಫ್ತಾಬ್ ಕೊಲೆಗೆ ಬಳಸಿದ್ದ ವಸ್ತು ಮತ್ತು ಶ್ರದ್ಧಾಳ ದೇಹದ ಭಾಗಗಳನ್ನು ಪತ್ತೆ ಮಾಡುವಂತೆ ಸವಾಲು ಹಾಕಿದ್ದ ಎಂಬುದು ಗೊತ್ತಾಗಿದೆ..
ಪೊಲೀಸರು ಅಫ್ತಾಬ್ ನನ್ನ ವಿಚಾರಣೆ ನಡೆಸಿದ್ದ ವೇಳೆ, ಆತ ಶ್ರದ್ಧಾಳನ್ನು ಕೊಂದಿರುವ ಬಗ್ಗೆ ಒಪ್ಪಿಕೊಂಡಿದ್ದ. ಅಷ್ಟೇ ಅಲ್ಲದೇ ಶ್ರದ್ಧಾಳ ದೇಹದ ಭಾಗಗಳು ಹಾಗೂ ಕೊಲೆ ಮಾಡಲು ಬಳಸಿದ್ದ ಆಯುಧವನ್ನು ಹುಡುಕಲು ನಾನು ನಿಮಗೆ ಚಾಲೆಂಜ್ ಮಾಡುತ್ತೇನೆ ಎಂದು ಪೊಲೀಸರಿಗೆ ಸವಾಲೆಸೆದಿದ್ದ ಎಂಬುದಾಗಿ ತಿಳಿದುಬಂದಿದೆ..
ಅಫ್ತಾಬ್ ಕೊಲೆಯ ಆಯುಧವನ್ನು ತನ್ನ ಗುರುಗ್ರಾಮ್ ಕಚೇರಿಯ ಬಳಿಯ ಪೊದೆಗೆ ಎಸೆದಿದ್ದಾಗಿ ತಿಳಿಸಿರೋದಾಗಿಯೂ ಮಾಹಿತಿ ಸಿಕ್ಕಿದೆ..