ಮೊದಲ ಟೆಸ್ಟ್ ಪಂದ್ಯದಲ್ಲಿ ಶ್ರೇಯಸ್ ಅಯ್ಯರ್ ಪದಾರ್ಪಣೆ
ಕಾನ್ಪುರ : ಗುರುವಾರದಿಂದ ನ್ಯೂಜಿಲೆಂಡ್ ವಿರುದ್ಧದ ಟೆಸ್ಟ್ ಸರಣಿ ಆರಂಭವಾಗಲಿದೆ.
ಈ ಪಂದ್ಯದಲ್ಲಿ ಮುಂಬೈನ ಯುವ ಬ್ಯಾಟರ್ ಶ್ರೇಯಸ್ ಅಯ್ಯರ್ ಪದಾರ್ಪಣೆ ಮಾಡಲಿದ್ದಾರೆ.
ಈ ಬಗ್ಗೆ ಸ್ವತಃ ಟೀಂ ಇಂಡಿಯಾದ ಹಂಗಾಮಿ ನಾಯಕ ಅಜಿಂಕ್ಯ ರಹಾನೆ ಮಾಹಿತಿ ನೀಡಿದ್ದಾರೆ.
ಕಾನ್ಪುರದಲ್ಲಿ ನಡೆಯುವ ಮೊದಲ ಪಂದ್ಯಕ್ಕೂ ಮುನ್ನ ಮಾಧ್ಯಮದೊಂದಿಗೆ ಮಾತನಾಡಿದ ರಹಾನೆ, ಮೊದಲ ಪಂದ್ಯದಲ್ಲಿ ಶ್ರೇಯಸ್ ಅಯ್ಯರ್ ಡೆಬ್ಯೂ ಮಾಡಲಿದ್ದಾರೆ ಎಂದು ತಿಳಿಸಿದ್ದಾರೆ.
ಅಂದಹಾಗೆ ಕಿವೀಸ್ ವಿರುದ್ಧದ ಮೊದಲ ಪಂದ್ಯದಿಂದ ವಿರಾಟ್ ಕೊಹ್ಲಿ ವಿಶ್ರಾಂತಿ ಪಡೆದಿರುವುದರಿಂದ ಅಜಿಂಕ್ಯ ರಹಾನೆ ತಂಡವನ್ನು ಮುನ್ನಡೆಸಲಿದ್ದಾರೆ.
ಇತ್ತ ಆರಂಭಿಕ ಆಟಗಾರ ಕೆ ಎಲ್ ರಾಹುಲ್ ಗಾಯಗೊಂಡಿರುವುದರಿಂದ ಸರಣಿಯಿಂದ ಔಟ್ ಆಗಿದ್ದಾರೆ.
ಇನ್ನೊಂದೆಡೆ ರೋಹಿತ್ ಶರ್ಮಾ ಕೂಡ ತಂಡದಲ್ಲಿಲ್ಲ.. ಹೀಗಾಗಿ ಕಿವೀಸ್ ವಿರುದ್ಧದ ಪಂದ್ಯದಲ್ಲಿ ಆರಂಭಿಕರಾಗಿ ಮಯಾಂಕ್, ಗಿಲ್ ಕಣಕ್ಕಿಳಿದರೇ ಒನ್ ಡೌನ್ ನಲ್ಲಿ ಪೂಜಾರಾ ಬರಲಿದ್ದಾರೆ.
ಇದಾದ ಬಳಿಕ ರಹಾನೆ ಕ್ರೀಸ್ ಗೆ ಬರಲಿದ್ದಾರೆ. ಬಳಿಕ ಐದನೇ ಆಟಗಾರ ಸ್ಥಾನಕ್ಕೆ ಯಾದವ್, ಅಯ್ಯರ್ ನಡುವೆ ಪೈಪೋಟಿ ಏರ್ಪಟ್ಟಿತ್ತು. ಇದೀಗ ಶ್ರೇಯರ್ ಗೆ ಚಾನ್ಸ್ ಸಿಕ್ಕಿದೆ.