ಶ್ರೀಲಂಕಾ ಪರಿಸ್ಥಿತಿ ಅತ್ಯಂತ ಶೋಚನೀಯವಾಗಿಬಿಟ್ಟಿದೆ.. ಜನರು ರಸ್ತೆಗಳಿದು ಹಿಂಸಾಚಾರದಲ್ಲಿ ತೊಡಗಿದ್ದಾರೆ.. ಅತಿ ಕೆಟ್ಟ ಪರಿಸ್ಥಿತಿಗೆ ಶ್ರೀಲಂಕಾ ತಲುಪಿದೆ.. ಇದೀಗ ಸರ್ಕಾರದ ವಿರುದ್ಧ ಶಾಂತಿಯುತವಾಗಿ ಪ್ರತಿಭಟಿಸುತ್ತಿದ್ದವರ ಮೇಲೆ ದಾಳಿ ನಡೆಸಿದ ಆರೋಪದ ಮೇಲೆ ಆಡಳಿತಾರೂಢ ಪಕ್ಷದ ಇಬ್ಬರು ಸಂಸದರನ್ನು ಮಂಗಳವಾರ ಬಂಧಿಸಲಾಗಿದೆ. ಸನತ್ ನಿಶಾಂತ ಮತ್ತು ಮಿಲನ್ ಜಯತಿಲಕೆ ಬಂಧಿತ ಸಂಸದರಾಗಿದ್ದಾರೆ. ಇಬ್ಬರೂ ದಾಳಿಕೋರರೊಂದಿಗೆ ಕಾಣಿಸಿಕೊಂಡಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.
ತೀವ್ರ ಆರ್ಥಿಕ ಬಿಕ್ಕಟ್ಟು ಎದುರಿಸುತ್ತಿರುವ ಶ್ರೀಲಂಕಾದಲ್ಲಿ ಸರ್ಕಾರದ ವಿರುದ್ಧ ಕಳೆದ ಮೇ 9ರಂದು ಇಲ್ಲಿನ ಟೆಂಪಲ್ ಟ್ರೀ ಬಳಿ ಶಾಂತಿಯುತವಾಗಿ ಪ್ರತಿಭಟನೆ ನಡೆಸಲಾಗುತ್ತಿತ್ತು. ಈ ವೇಳೆ ಸರ್ಕಾರದ ಬೆಂಬಲಿಗ ಗುಂಪೊಂದು ಪ್ರತಿಭಟನಕಾರರ ಮೇಲೆ ತೀವ್ರ ದಾಳಿ ನಡೆಸಿತ್ತು. ಘಟನೆಯಲ್ಲಿ 200 ಮಂದಿ ಗಾಯಗೊಂಡಿದ್ದರು.
ಶ್ರೀಲಂಕಾ ಪರಿಸ್ಥಿತಿ ಅತ್ಯಂತ ಶೋಚನೀಯವಾಗಿಬಿಟ್ಟಿದೆ.. ಜನರು ರಸ್ತೆಗಳಿದು ಹಿಂಸಾಚಾರದಲ್ಲಿ ತೊಡಗಿದ್ದಾರೆ.. ಅತಿ ಕೆಟ್ಟ ಪರಿಸ್ಥಿತಿಗೆ ಶ್ರೀಲಂಕಾ ತಲುಪಿದೆ.. ಇದೀಗ ಸರ್ಕಾರದ ವಿರುದ್ಧ ಶಾಂತಿಯುತವಾಗಿ ಪ್ರತಿಭಟಿಸುತ್ತಿದ್ದವರ ಮೇಲೆ ದಾಳಿ ನಡೆಸಿದ ಆರೋಪದ ಮೇಲೆ ಆಡಳಿತಾರೂಢ ಪಕ್ಷದ ಇಬ್ಬರು ಸಂಸದರನ್ನು ಮಂಗಳವಾರ ಬಂಧಿಸಲಾಗಿದೆ.