ಚಿತ್ರದುರ್ಗ : ಒಬ್ಬ ಹೆಣ್ಣು ಮಗಳ ಮೇಲೆ ಎಫ್ ಐಆರ್ ಹಾಕಿಸಿದವರು ಗಂಡಸರೇ ಎಂಬ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ( D.K.Shivakumar) ಹೇಳಿಕೆಗೆ ಸಚಿವ ಶ್ರೀರಾಮುಲು ( Shriramulu) ಕೆಂಡಕಾರಿದ್ದು, ಇದೆಲ್ಲಾ ವರ್ಕೌಟ್ ಆಗಲ್ಲ ಎಂದು ಗುಡುಗಿದ್ದಾರೆ.
ಚಿತ್ರದುರ್ಗ ಜಿಲ್ಲೆಯ ಹಿರಿಯೂರು ಪಟ್ಟಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ರಾಮುಲು, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ವಿರುದ್ಧ ಕಿಡಿಕಾರಿದರು.
ಕಾಂಗ್ರೆಸ್ ನಾಯಕರಿಗೆ ಶಿರಾ ಹಾಗೂ ಆರ್ ಆರ್ ನಗರ ವಿಧಾನಸಭಾ ಕ್ಷೇತ್ರಗಳ ಚುನಾವಣೆಯಲ್ಲಿ ಸೋಲಿನ ಹತಾಶೆ ಕಾಡುತ್ತಿದೆ.
ಇದನ್ನೂ ಓದಿ : ನನಗೆ 70 ವರ್ಷ ವಯಸ್ಸಾಗಿದೆ, ಓಡಾಡಲು ಆಗೋಲ್ಲ : ಕಾರಜೋಳ ಕಣ್ಣೀರು
ಅವರು ಸರ್ಕಾರ ನಡೆಸಿದ್ದ ಸಂದರ್ಭದಲ್ಲಿ ಈ ರೀತಿಯ ಲೋಪಗಳು ಆಗಿವೆ. ಈ ಎಫ್ ಐಆರ್ ನಮ್ಮ ಸರ್ಕಾರ ಹಾಕಿಲ್ಲ.
ಬದಲಾಗಿ ಚುನಾವಣಾ ಆಯೋಗ ಎಫ್ಐಆರ್ ಹಾಕಿದೆ ಎಂದು ಸಮರ್ಥಿಸಿಕೊಂಡರು.
ಎರಡು ವಿಧಾನಸಭಾ ಕ್ಷೇತ್ರಗಳಲ್ಲಿ ಸೋಲುವ ಭೀತಿಯಿಂದ ಡಿಕೆಶಿ ಹತಾಶೆಯಿಂದ ಹೀಗೆ ಮಾತನಾಡುತ್ತಿದ್ದಾರೆ.
ಇದೆಲ್ಲಾ ವರ್ಕೌಟ್ ಆಗಲ್ಲ. ಚುನಾವಣೆ ವೇಳೆ ಹೀಗೆ ಮಾತನಾಡುವುದು ಕಾಂಗ್ರೆಸ್ಸಿನವರ ಸಂಪ್ರದಾಯವಾಗಿದೆ.
ಇದನ್ನೂ ಓದಿ : ಶಿರಾ ಬಿಜೆಪಿ ಅಭ್ಯರ್ಥಿ ಐಷಾರಾಮಿ ಕಾರು ಪ್ರಿಯ
ಅವರು ಸಿಂಪತಿ ಗಿಟ್ಟಿಸಿಕೊಳ್ಳಲು ಈ ರೀತಿ ಮಾತನಾಡುತ್ತಿದ್ದಾರೆಂದು ಡಿಕೆಶಿಗೆ ರಾಮುಲು ಟಾಂಗ್ ನೀಡಿದರು.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel