ಬೆಂಗಳೂರು : ಬಿಜೆಪಿ ರಾಜ್ಯ ಕಚೇರಿ ಜಗನ್ನಾಥ ಭವನದಲ್ಲಿ ಜನಸಂಘದ ಸಂಸ್ಥಾಪಕ ದಿವಂಗತ ಶ್ಯಾಮ್ ಪ್ರಸಾದ್ ಮುಖರ್ಜಿಯವರ ಬಲಿದಾನ ದಿವಸ ಹಾಗೂ ಕರ್ನಾಟಕದ ಕೇಸರಿ ಜಗನ್ನಾಥರಾವ್ ಜೋಷಿಯವರ ಜನ್ಮ ಶತಮಾನೋತ್ಸವ ಆಚರಿಸಲಾಯಿತು.
ಈ ಸಂದರ್ಭದಲ್ಲಿ ರಾಜ್ಯ ಸಂಘಟನಾ ಪ್ರಧಾನಕಾರ್ಯದರ್ಶಿ ಅರುಣ್ ಕುಮಾರ್ ಉಭಯ ನಾಯಕರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮತ್ತು ಜಗನ್ನಾಥರಾವ್ ಜೋಷಿಯವರ ಪ್ರತಿಮೆಗೆ ಮಾಲಾರ್ಪಣೆ ಮಾಡಿದರು. ರಾಜ್ಯ ಪ್ರಧಾನಕಾರ್ಯದರ್ಶಿ ಹಾಗೂ ವಿಧಾನಪರಿಷತ್ ಸದಸ್ಯರಾದ ಎನ್. ರವಿಕುಮಾರ್, ಮುದ್ದೆಬಿಹಾಳ ಕ್ಷೇತ್ರದ ಶಾಸಕರಾದ ಎ.ಎಸ್. ನಡಹಳ್ಳಿ, ರಾಜ್ಯ ಕಾರ್ಯದರ್ಶಿ ಹಾಗೂ ಸಫಾಯಿ ಕರ್ಮಚಾರಿ ಆಯೋಗದ ಸದಸ್ಯ ಜಗದೀಶ್ ಹಿರೇಮನಿ, ರಾಜ್ಯ ಖಜಾಂಚಿ ಸುಬ್ಬಣ್ಣ, ಮಾಜಿ ಶಾಸಕರು ಹಾಗೂ ತುಮಕೂರು ಜಿಲ್ಲಾಧ್ಯಕ್ಷ ಬಿ. ಸುರೇಶ್ ಗೌಡ, ಮತ್ತು ರಾಜ್ಯ ಕಾರ್ಯಾಲಯ ಕಾರ್ಯದರ್ಶಿ ಲೋಕೇಶ್ ಅಂಬೆಕಲ್ಲು ಸೇರಿದಂತೆ ವಿವಿಧ ಪದಾಧಿಕಾರಿಗಳು, ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.