Siddaramaiah | ಇದೆಂತಹ ಹೇಡಿತನ ಬಸವರಾಜ ಬೊಮ್ಮಾಯಿ : ಸಿದ್ದು ಪ್ರಶ್ನೆ
ಬೆಂಗಳೂರು : ಸಿದ್ದರಾಮಯ್ಯನವರು ಸಿಎಂಯಾಗಿದ್ದಾಗ ನಡೆದಿರುವ ಎಲ್ಲ ನೇಮಕಾತಿಗಳಲ್ಲಿಯೂ ಹಗರಣಗಳಾಗಿದ್ದು, ಆ ಕುರಿತ ದಾಖಲಾತಿಗಳನ್ನು ಶೀಘ್ರ ತಲುಪಿಸುವೆ. ದಾಖಲಾತಿಗಳನ್ನು ನೋಡಿ ಸಿದ್ದರಾಮಯ್ಯನವರ ವಿರುದ್ಧ ಕ್ರಮ ತೆಗೆದುಕೊಳ್ಳುವಿರಾ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರಿಗೆ ಬೊಮ್ಮಾಯಿ ಸವಾಲು ಹಾಕಿದ್ದರು.
ಈ ಕುರಿತು ಸಿದ್ದರಾಮಯ್ಯ ಟ್ವಿಟ್ಟರ್ ನಲ್ಲಿ ಪ್ರತಿಕ್ರಿಯೆ ನೀಡಿದ್ದು, ಸಾರ್ವಜನಿಕ ಸಭೆಗಳಲ್ಲಿ ವಿರೋಧ ಪಕ್ಷದ ವಿರುದ್ಧ ಅಬ್ಬರಿಸುತ್ತಿರುವ ನಿಮಗೆ, ನೀವು ಎರಡುವರೆ ಸಾವಿರ ಕೋಟಿ ದುಡ್ಡು ಕೊಟ್ಟು ಮುಖ್ಯಮಂತ್ರಿಯಾಗಿದ್ದೀರಿ ಎಂದು ಆರೋಪ ಮಾಡುತ್ತಿರುವ ನಿಮ್ಮದೇ ಪಕ್ಷದ ಒಬ್ಬ ಶಾಸಕನ ವಿರುದ್ಧ ಸೊಲ್ಲೆತ್ತುವ ಧೈರ್ಯ ಇಲ್ಲ. ಇದೆಂತಹ ನಿಮ್ಮ ಹೇಡಿತನ ಬಸವರಾಜ ಬೊಮ್ಮಾಯಿ ಎಂದು ಪ್ರಶ್ನಿಸಿದ್ದಾರೆ.
ಕಾಂಗ್ರೆಸ್ ನಾಯಕರ ಬಗ್ಗೆ @RahulGandhi ಅವರಿಂದಲೇ ನೀವು ತನಿಖೆ ಮಾಡಿಸುವುದಾದರೆ @DKShivakumar ವಿರುದ್ಧ ಇಡಿ, ಐಟಿಗಳನ್ನು ಯಾಕೆ ಛೂ ಬಿಟ್ಟಿದ್ದೀರಿ? ಈ ಸಂಸ್ಥೆಗಳು ನಡೆಸುತ್ತಿರುವ ತನಿಖೆಯನ್ನು ನಿಲ್ಲಿಸಿ, ಆ ಪ್ರಕರಣಗಳನ್ನೆಲ್ಲ ರಾಹುಲ್ ಗಾಂಧಿಯವರಿಗೆ ಕಳಿಸಿಬಿಡಿ @BSBommai.
8/8#PayCM— Siddaramaiah (@siddaramaiah) October 19, 2022
ನಿಮ್ಮ ಖಾಲಿ ಡಬ್ಬದ ಸದ್ದಿಗೆ ಹೆದರುವವರು ಯಾರೂ ಇಲ್ಲ. ನಿಮ್ಮ ಧಮ್ –ತಾಖತ್ ಗಳ ಮಾತುಗಳೆಲ್ಲವೂ ಸಾರ್ವಜನಿಕ ಸಭೆಗಳಿಗಷ್ಟೇ ಸೀಮಿತ. ಮುಖ್ಯಮಂತ್ರಿ ಸ್ಥಾನ ಉಳಿಸಿಕೊಳ್ಳಬೇಕಾದರೆ ಮತ್ತೆ ನೀವು ಆರ್ ಎಸ್ ಎಸ್ ನಾಯಕರ ಮನೆಗೆ ತೆರಳಿ ಪಾದಪೂಜೆ ಮಾಡಲೇಬೇಕು ಬಸವರಾಜ ಬೊಮ್ಮಾಯಿ.
ಸಾರ್ವಜನಿಕ ಸಭೆಗಳಲ್ಲಿ ವಿರೋಧ ಪಕ್ಷದ ವಿರುದ್ಧ ಅಬ್ಬರಿಸುತ್ತಿರುವ ನಿಮಗೆ, ನೀವು ಎರಡುವರೆ ಸಾವಿರ ಕೋಟಿ ದುಡ್ಡು ಕೊಟ್ಟು ಮುಖ್ಯಮಂತ್ರಿಯಾಗಿದ್ದೀರಿ ಎಂದು ಆರೋಪ ಮಾಡುತ್ತಿರುವ ನಿಮ್ಮದೇ ಪಕ್ಷದ ಒಬ್ಬ ಶಾಸಕನ ವಿರುದ್ಧ ಸೊಲ್ಲೆತ್ತುವ ಧೈರ್ಯ ಇಲ್ಲ. ಇದೆಂತಹ ನಿಮ್ಮ ಹೇಡಿತನ ಬಸವರಾಜ ಬೊಮ್ಮಾಯಿ

ಕಾಂಗ್ರೆಸ್ ನಾಯಕರ ಬಗ್ಗೆ ರಾಹುಲ್ ಗಾಂಧಿ ಅವರಿಂದಲೇ ನೀವು ತನಿಖೆ ಮಾಡಿಸುವುದಾದರೆ ಡಿ.ಕೆ.ಶಿವಕುಮಾರ್ ವಿರುದ್ಧ ಇಡಿ, ಐಟಿಗಳನ್ನು ಯಾಕೆ ಛೂ ಬಿಟ್ಟಿದ್ದೀರಿ? ಈ ಸಂಸ್ಥೆಗಳು ನಡೆಸುತ್ತಿರುವ ತನಿಖೆಯನ್ನು ನಿಲ್ಲಿಸಿ, ಆ ಪ್ರಕರಣಗಳನ್ನೆಲ್ಲ ರಾಹುಲ್ ಗಾಂಧಿಯವರಿಗೆ ಕಳಿಸಿಬಿಡಿ ಎಂದು ಸಿದ್ದರಾಮಯ್ಯ ಟ್ವಿಟ್ಟರ್ ನಲ್ಲಿ ಕುಟುಕಿದ್ದಾರೆ.








