ಸಿದ್ದರಾಮಯ್ಯ ಮತ್ತೆ ಸಿಎಂ : ಹುಲಿಯಾ ಪರ ಆರ್.ಶಂಕರ್ ಬ್ಯಾಟ್
ದಾವಣಗೆರೆ : ಮೈತ್ರಿ ಸರ್ಕಾರಕ್ಕೆ ಕೈ ಕೊಟ್ಟು ಬಿಜೆಪಿ ಸೇರಿ, ಮಂತ್ರಿಸ್ಥಾನದ ಮೇಲೆ ಕಣ್ಣಿಟ್ಟಿರುವ ವಿಧಾನ ಪರಿಷತ್ ಸದಸ್ಯ ಆರ್.ಶಂಕರ್ ಸಿದ್ದರಾಮಯ್ಯ ಪರ ಬ್ಯಾಟ್ ಬೀಸಿದ್ದಾರೆ.
ದಾವಣಗೆರೆಯಲ್ಲಿ ಇಂದು ಕುಟುಬ ಜನಜಾಗೃತಿ ಸಮಾವೇಶ ನಡೆಯಿತು. ಸಭೆಯಲ್ಲಿ ಭಾಗಿಯಾಗಿ ಮಾತನಾಡಿದ ಆರ್.ಶಂಕರ್, ಸಿದ್ದರಾಮಯ್ಯನವರನ್ನು ಮತ್ತೊಮ್ಮೆ ಮುಖ್ಯಮಂತ್ರಿಯನ್ನಾಗಿ ಮಾಡುವ ದಿಕ್ಸೂಚಿ ದಾವಣಗೆರೆಯಿಂದ ಆರಂಭವಾಗಿದೆ ಎಂದು ಹೇಳಿದರು.
ಇದೇ ವೇಳೆ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ ಅವರು, ನಾನು ಈಗಾಗಲೇ ಮಂತ್ರಿಯಾಗಿರಬೇಕಾಗಿತ್ತು. ಯಾಕೆ ತಡವಾಗುತ್ತಿದೆ ಅನ್ನೋದು ನನಗೂ ಗೊತ್ತಿಲ್ಲ.
ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರು ಇಂದು ಆಗುತ್ತೆ, ನಾಳೆ ಆಗುತ್ತೆ ಅಂತಾ ಹೇಳುತ್ತಲೇ ಇದ್ದಾರೆ ಎಂದು ಬೇಸರ ಹೊರಹಾಕಿದರು.
ನಾನು ಯಾವುದಕ್ಕೂ ಅಂಜೋ ಮಗ ಅಲ್ಲ : ಯತ್ನಾಳ್
ಇನ್ನು ನಾವು ನಿಮ್ಮ ಸರ್ಕಾರ ಬರಲು ನಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ನಿಮ್ಮ ಸರ್ಕಾರವನ್ನು ಅಸ್ತಿತ್ವಕ್ಕೆ ತಂದಿದ್ದೇವೆ.
ನಾನಾಗಲೀ, ಎಂಟಿಬಿ ನಾಗರಾಜ್ ಆಗಲೀ ಇಬ್ಬರು ಮಂತ್ರಿಗಳಾಗಿ ಮುಂದಿನ ದಿನಗಳಲ್ಲಿ ನಡೆಯುವ ಸಚಿವ ಸಂಪುಟದಲ್ಲಿ ಕುರುಬ ಸಮುದಾಯವನ್ನು ಎಸ್ ಟಿಗೆ ಸೇರಿಸಬೇಕೆಂಬ ವಿಚಾರವಾಗಿ ದನಿ ಎತ್ತುತ್ತೇವೆ ಎಂದು ಸಭೆಯಲ್ಲಿ ಆರ್.ಶಂಕರ್ ತಿಳಿಸಿದರು.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel









