ಸಿದ್ದರಾಮಯ್ಯ ಹಿಂದೂ ವಿರೋಧಿ : ಅರುಣ್ ಸಿಂಗ್ Siddaramaiah
ದಾವಣಗೆರೆ : ಸಿದ್ದರಾಮಯ್ಯ ಹಿಂದೂ ವಿರೋಧಿ ಎಂದು ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಕಿಡಿಕಾರಿದ್ದಾರೆ.
ದೇವಾಲಯ ತೆರವು ವಿಚಾರವಾಗಿ ಸಿದ್ದರಾಮಯ್ಯ ರಾಜ್ಯ ಬಿಜೆಪಿ ಸರ್ಕಾರದ ವಿರುದ್ಧ ಕಿಡಿಕಾರಿದ್ದರು.
ಈ ವಿಚಾರವಾಗಿ ಪ್ರತಿಕ್ರಿಯೆ ನೀಡಿರುವ ಅರುಣ್ ಸಿಂಗ್, ಈ ಮೊದಲು ಕಾಂಗ್ರೆಸಿಗರು ಮಸೀದಿಗಳ ಬಗ್ಗೆ ಮಾತನಾಡುತ್ತಿದ್ದರು.
ಈಗ ಸಿದ್ದರಾಮಯ್ಯ ದೇವಾಲಯಗಳ ಬಗ್ಗೆ ಮಾತನಾಡುತ್ತಿದ್ದಾರೆ. ದೇವಾಲಯಗಳ ಬಗ್ಗೆ ಮಾತನಾಡುವುದನ್ನು ಅವರು ಯಾವಾಗ ಕಲಿತರು ಎಂದು ವ್ಯಂಗ್ಯವಾಡಿದರು.
ಸಿದ್ದರಾಮಯ್ಯ ಹಿಂದೂ ವಿರೋಧಿ ಎಂದ ಅರುಣ್ ಸಿಂಗ್, ದೇವಸ್ಥಾನಗಳನ್ನು ಉಳಿಸುವ ಬಗ್ಗೆ ಈಗ ಮಾತಾಡುತ್ತಿದ್ದಾರೆ. ಅವರು ಮಸೀದಿಗಳ ಬಗ್ಗೆಯೇ ಹೆಚ್ಚು ಮಾತನಾಡುತ್ತಿದ್ದರು ಎಂದು ಟಾಂಗ್ ನೀಡಿದರು.









