ಬೆನ್ನು ನೋವು… ಮತ್ತೆ ಬೆಂಗಳೂರಿನತ್ತ ಸಿದ್ದರಾಮಯ್ಯ
ಬೆಂಗಳೂರು : ಮೇಕೆದಾಟು ಪಾದಯಾತ್ರೆಯನ್ನು ಫುಲ್ ಜೋಷ್ ನಿಂದ ಆರಂಭಿಸಿದ್ದ ವಿಪಕ್ಷ ನಾಯಕ ಸಿದ್ದರಾಮಯ್ಯ ಪದೇ ಪದೇ ಬೆಂಗಳೂರಿಗೆ ವಾಪಸ್ ಆಗುತ್ತಿದ್ದಾರೆ.
ಮೊನ್ನೆ ಸುಸ್ತು, ಮೈ ಕೈ ಕಾಲು ನೋವಿನಿಂದಾಗಿ ಬೆಂಗಳೂರಿಗೆ ಬಂದ್ ವಿಶ್ರಾಂತಿ ಪಡೆದು ಮತ್ತೆ ಪಾದಯಾತ್ರೆಯಲ್ಲಿ ಭಾಗಿಯಾಗಿದ್ದರು.
ಆದ್ರೆ ಇಂದು ಮತ್ತೆ ಬೆನ್ನು ನೋವು ಕಾಣಿಸಿಕೊಂಡಿದ್ದು, ಇದೀಗ ಬೆಂಗಳೂರಿಗೆ ವಾಪಸ್ ಆಗಿದ್ದಾರೆ.
ಸಿದ್ದರಾಮಯ್ಯ ಇಂದು ಏಳು ಕಿಲೋ ಮೀಟರ್ ಪಾದಯಾತ್ರೆ ಮಾಡಿದರು.
ಈ ವೇಳೆ ಅವರಿಗೆ ಬೆನ್ನು ನೋವು ಕಾಣಿಸಿಕೊಂಡಿದ್ದು, ರಾಮನಗರದ ಕಾಂಗ್ರೆಸ್ ನಾಯಕರೊಬ್ಬರ ಮನೆಯಲ್ಲಿ ವಿಶ್ರಾಂತಿ ಪಡೆದರು.
ಆ ಬಳಿಕ ಅಲ್ಲಿಂದ ನೇರವಾಗಿ ಬೆಂಗಳೂರಿನತ್ತ ಪಯಣಿಸಿದ್ದಾರೆ.
ಇತ್ತ ಕಾಂಗ್ರೆಸ್ ಪಾದಯಾತ್ರೆಗೆ ಹೈಕೋರ್ಟ್ ತರಾಟೆ ತೆಗೆದುಕೊಂಡಿದೆ.
ಪಾದಯಾತ್ರೆ ಮಾಡಲು ಯಾರ ಅನುಮತಿ ಪಡೆದಿದ್ದೀರಿ…? ಎಂದು ಪ್ರಶ್ನಿಸಿದೆ.
ಈ ಬಗ್ಗೆ ಮಾತನಾಡಿದ ಸಿದ್ದರಾಮಯ್ಯ, ಕೋರ್ಟ್ ತೀರ್ಪನ್ನ ನಾವು ಪಾಲಿಸುತ್ತೇವೆ ಎಂದಿದ್ದಾರೆ.