ಬೈ ಎಲೆಕ್ಷನ್ : ಈ ಸಲ ಕಪ್ ನಮ್ದೆ ಎಂದ ಹುಲಿಯಾ
ಕೊಪ್ಪಳ : ರಾಜ್ಯದಲ್ಲಿ ಕೊರೊನಾ ಅಬ್ಬರದ ಮಧ್ಯೆ ಬೈ ಎಲೆಕ್ಷನ್ ಕಾವು ಕೂಡ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದೆ. ಮಸ್ಕಿ ವಿಧಾನಸಭಾ ಉಪಚುನಾವಣೆ ಹಿನ್ನೆಲೆಯಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ ಸೇರಿದಂತೆ ಕಾಂಗ್ರೆಸ್ ನಾಯಕರು ಬಿರುಸಿನ ಪ್ರಚಾರ ನಡೆಸುತ್ತಿದ್ದಾರೆ.
ಮಸ್ಕಿಯಲ್ಲಿ ಪ್ರಚಾರ ನಡೆಸಲು ಸಿದ್ದರಾಮಯ್ಯ ಕುಷ್ಟಗಿಗೆ ಆಗಮಿಸಿದ್ದರು. ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಸ್ಕಿ, ಬಸವಕಲ್ಯಾಣ ವಿಧಾನಸಭೆ ಹಾಗೂ ಬೆಳಗಾವಿ ವಿಧಾನಸಭೆ ಈ ಮೂರು ಕ್ಷೇತ್ರಗಳಲ್ಲಿ ನಾವೇ ಗೆಲ್ತೀವಿ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಇದೇ ವೇಳೆ ಸಚಿವ ಜಗದೀಶ್ ಶೆಟ್ಟರ್ ರ ಕಾಂಗ್ರೆಸ್ ಚಿಲ್ಲರೆ ರಾಜಕಾರಣ ಮಾಡ್ತಾರೆ ಎಂಬ ಹೇಳಿಕೆಗೆ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ, ಚಿಲ್ಲರೆ ಅಂದ್ರೆ ಏನೂ ಎಂದು ಪ್ರಶ್ನಿಸಿ, ಜಗದೀಶ್ ಶೆಟ್ಟರ್ ಒಬ್ಬ ಸಚಿವರಾಗಿ ಬೇಜಾವ್ದಾರಿಯಿಂದ ಮಾತನಾಡಬಾರದು. ನಿಮ್ಮ ಹತ್ರ ಏನ್ ಎವಿಡೆನ್ಸ್ ಇದೆ ಎಂದು ಗರಂ ಆದರು.
ಮುಂದುವರಿದು ಸಿಡಿ ವಿಚಾರವಾಗಿ ಹೆಚ್ಚಾಗಿ ಮಾತನಾಡಲ್ಲ ಎಂದ ಸಿದ್ದರಾಮಯ್ಯ, ನ್ಯಾಯಯುತ ತನಿಖೆ ಅಗತ್ಯ ಎಂದು ಹೇಳಿದರು.