ಟಿಪ್ಪು ಜಯಂತಿ ಆಚರಿಸಿದ ಸಿದ್ದರಾಮಯ್ಯರಿಂದ ಪಾಠ ಕಲಿಯಬೇಕಿಲ್ಲ : ಬಿಜೆಪಿ Siddaramaiah
ಬೆಂಗಳೂರು : ನಂಜನಗೂಡು ಸಮೀಪ ದೇವಾಲಯ ತೆರವು ವಿಚಾರವಾಗಿ ವಿಪಕ್ಷ ನಾಯಕ ಸಿದ್ದರಾಮಯ್ಯ ರಾಜ್ಯ ಬಿಜೆಪಿ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದರು. ಈ ಬಗ್ಗೆ ಇದೀಗ ರಾಜ್ಯ ಬಿಜೆಪಿ ಟ್ವಿಟ್ಟರ್ ನಲ್ಲಿ ಸಿದ್ದರಾಮಯ್ಯರ ಕಾಲೆಳೆದಿದೆ.
ಬಿಜೆಪಿ ತನ್ನ ಟ್ವೀಟ್ ನಲ್ಲಿ ದೇವಸ್ಥಾನಗಳನ್ನು ದ್ವಂಸ ಮಾಡಿದ ಟಿಪ್ಪುವಿನ ಜಯಂತಿ ಆಚರಿಸಿದ ನಾಸ್ತಿಕವಾದಿ ಸಿದ್ದರಾಮಯ್ಯರಿಂದ ಪಾಠ ಕಲಿಯಬೇಕಾಗಿಲ್ಲ ಎಂದು ಸಿದ್ದರಾಮಯ್ಯಗೆ ತಿರುಗೇಟು ನೀಡಿದೆ.
ಅಲ್ಲದೆ ಇನ್ನು ಮುಂದೆ ದೇವಸ್ಥಾನಗಳನ್ನು ಒಡೆಯಲು ಅವಕಾಶ ನೀಡುವುದಿಲ್ಲವೆಂದು ಮುಖ್ಯಮಂತ್ರಿ ಸ್ಪಷ್ಟಪಡಿಸಿದ್ದಾರೆ.
ನಂಜನಗೂಡು ದೇವಸ್ಥಾನ ಪುನರ್ನಿಮಾಣಕ್ಕೆ ಕಾನೂನು ವ್ಯಾಪ್ತಿಯಲ್ಲಿ ಕ್ರಮ ಕೈಗೊಳ್ಳಲಾಗುವುದು ಎಂದು ಮಾಹಿತಿ ನೀಡಿದೆ.