Siddaramaiah | ಉತ್ತರಕುಮಾರರಂತೆ, ವಿದೂಷಕರಂತೆ ವರ್ತಿಸುವುದನ್ನು ನಿಲ್ಲಿಸಿ
ಬೆಂಗಳೂರು : ನಾನು ಅಂಕಿ ಅಂಶಗಳ ಮೂಲಕ ಚರ್ಚೆಗೆ ಸಿದ್ಧನಿದ್ದೇನೆ. ಬಿಜೆಪಿ ಅವರೂ ಅಂಕಿಅಂಶಗಳೊಂದಿಗೆ ಚರ್ಚೆಗೆ ಬರಲಿ. ಅದು ಬಿಟ್ಟು ಉತ್ತರಕುಮಾರರಂತೆ, ವಿದೂಷಕರಂತೆ ವರ್ತಿಸುವುದನ್ನು ನಿಲ್ಲಿಸಿ ಎಂದು ರಾಜ್ಯ ಬಿಜೆಪಿ ನಾಯಕರಿಗೆ ವಿಪಕ್ಷ ನಾಯಕ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ.
ಈ ಕುರಿತು ಸರಣಿ ಟ್ವೀಟ್ ಗಳನ್ನು ಮಾಡಿರುವ ಸಿದ್ದರಾಮಯ್ಯ, ದೇಶದಲ್ಲಿ ಸಂವಿಧಾನವನ್ನು ಜಾರಿಗೆ ತಂದು ದಲಿತ- ದಮನಿತರು ಹಾಗೂ ಸರ್ವಜನಾಂಗದ ಏಳಿಗೆಗೆ ಕಾರಣರಾಗಿದ್ದು ಕಾಂಗ್ರೆಸ್ ಪಕ್ಷ ಎಂಬುದನ್ನು ಮರೆಯಬಾರದು. ನಾವು ಅಧಿಕಾರಕ್ಕೆ ಬಂದದ್ದೇ ಸಂವಿಧಾನ ಬದಲಾಯಿಸಲು ಎಂದವರ ಬಗ್ಗೆ ಜನ ಎಚ್ಚರಿಕೆಯಿಂದ ಇರಬೇಕು.
ಮೀಸಲಾತಿಯನ್ನು ವಿರೋಧಿಸಿದವರು, ದಲಿತ- ಹಿಂದುಳಿದ ಸಮುದಾಯದ ಮಕ್ಕಳ ವಿದ್ಯಾರ್ಥಿ ವೇತನ ನಿಲ್ಲಿಸಿದವರು, ಈ ಸಮುದಾಯಗಳ ಜನರಿಗೆ ಮನೆಗಳನ್ನು ನೀಡದವರು, ಉದ್ಯೋಗ ನೀಡದವರು, ಅನ್ನಭಾಗ್ಯದ ಅಕ್ಕಿಗೆ ಕತ್ತರಿ ಹಾಕಿದ @BJP4Karnataka ಅವರು ಅದು ಹೇಗೆ ಶೋಷಿತರ ಪರವಾಗುತ್ತಾರೆ? 5/10#ಜನಪೀಡಕಯಾತ್ರೆ
— Siddaramaiah (@siddaramaiah) October 13, 2022
2013 ರಿಂದ ಈಚೆಗೆ ರಾಜ್ಯದಲ್ಲಿ ನಾವು ಎಸ್ಸಿಪಿ/ ಟಿಎಸ್ಪಿ ಕಾಯ್ದೆಯನ್ನು ಜಾರಿಗೆ ತಂದು ಶೋಷಿತ ಸಮುದಾಯಗಳಿಗೆ ಅನುದಾನವನ್ನು ಕಾದಿರಿಸುವಂತೆ ಮಾಡಿದರೆ, ಬಿಜೆಪಿ ಸರ್ಕಾರ ಈ ಅನುದಾನವನ್ನು ಅನ್ಯ ಉದ್ದೇಶಗಳಿಗೆ ಖರ್ಚು ಮಾಡಿ ತಳ ಸಮುದಾಯಗಳಿಗೆ ಅನ್ಯಾಯ ಮಾಡುತ್ತಿದೆ.
ಎಸ್.ಸಿ / ಎಸ್.ಟಿ ಸಮುದಾಯಕ್ಕೆ ಗುತ್ತಿಗೆ ಕಾಮಗಾರಿಗಳಲ್ಲಿ ಮೀಸಲಾತಿ ಜಾರಿಗೆ ತಂದವರು ನಾವು. ಬಿಜೆಪಿ ಸರ್ಕಾರ 2 ಕೋಟಿ ವರೆಗಿನ ಕಾಮಗಾರಿಗಳಿಗೆ ಟೆಂಡರ್ ಕೂಡ ಕರೆಯದೆ ಕೆಆರ್ಡಿಸಿಎಲ್ ನವರಿಗೆ ವಹಿಸುವ ನೀತಿ ತಂದಿದೆ.ಇದರಿಂದ ದಲಿತ ಸಮುದಾಯಗಳ ಆರ್ಥಿಕ ಸಬಲೀಕರಣ ಸಾಧ್ಯವೇ?

ಮೀಸಲಾತಿಯನ್ನು ವಿರೋಧಿಸಿದವರು, ದಲಿತ- ಹಿಂದುಳಿದ ಸಮುದಾಯದ ಮಕ್ಕಳ ವಿದ್ಯಾರ್ಥಿ ವೇತನ ನಿಲ್ಲಿಸಿದವರು, ಈ ಸಮುದಾಯಗಳ ಜನರಿಗೆ ಮನೆಗಳನ್ನು ನೀಡದವರು, ಉದ್ಯೋಗ ನೀಡದವರು, ಅನ್ನಭಾಗ್ಯದ ಅಕ್ಕಿಗೆ ಕತ್ತರಿ ಹಾಕಿದ ಬಿಜೆಪಿ ಅವರು ಅದು ಹೇಗೆ ಶೋಷಿತರ ಪರವಾಗುತ್ತಾರೆ?
ನಮ್ಮ ಸರ್ಕಾರದ 5 ವರ್ಷಗಳ ಆಡಳಿತದಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಒಂದರಿಂದಲೆ 10,500 ಕೋಟಿ ಖರ್ಚು ಮಾಡಿದ್ದೆವು. ಬಿಜೆಪಿ ಮತ್ತು ಬಸವರಾಜ ಬೊಮ್ಮಾಯಿ ಅವರ ಸರ್ಕಾರ ಮಾರ್ಚ್ ವರೆಗೆ ಖರ್ಚು ಮಾಡಿದ್ದು ಕೇವಲ 5,700 ಕೋಟಿ. ಇಷ್ಟು ಸಾಕ?
ನಾನು ಅಂಕಿ ಅಂಶಗಳ ಮೂಲಕ ಚರ್ಚೆಗೆ ಸಿದ್ಧನಿದ್ದೇನೆ. @BJP4Karnataka ಅವರೂ ಅಂಕಿಅಂಶಗಳೊಂದಿಗೆ ಚರ್ಚೆಗೆ ಬರಲಿ. ಅದು ಬಿಟ್ಟು ಉತ್ತರಕುಮಾರರಂತೆ, ವಿದೂಷಕರಂತೆ ವರ್ತಿಸುವುದನ್ನು ನಿಲ್ಲಿಸಿ.
ನಿಮ್ಮ ಸುಳ್ಳು ಭಾಷಣಗಳಿಗೆ ಮರುಳಾಗಿ ಜನ ಚಪ್ಪಾಳೆ ತಟ್ಟುವ ಕಾಲ ಮುಗಿದುಹೋಗಿದೆ. 9/10#ಜನಪೀಡಕಯಾತ್ರೆ
— Siddaramaiah (@siddaramaiah) October 13, 2022
ದಲಿತ ಮತ್ತು ಹಿಂದುಳಿದ ವರ್ಗಗಳ ಮಕ್ಕಳು ವಿದೇಶಗಳಿಗೆ ಹೋಗಿ ವಿದ್ಯಾಭ್ಯಾಸ ಮಾಡಿ ಬರಲು ಅರಿವು ಎಂಬ ಯೋಜನೆ ತಂದಿದ್ದೆವು. ಬಿಜೆಪಿ ಅಧಿಕಾರಕ್ಕೆ ಬಂದ ಮೇಲೆ ಈ ಯೋಜನೆಯಡಿ ದಲಿತ ಮತ್ತು ಹಿಂದುಳಿದ ವರ್ಗಗಳ ಎಷ್ಟು ವಿದ್ಯಾರ್ಥಿಗಳಿಗೆ ಅನುಕೂಲ ಮಾಡಿಕೊಟ್ಟಿದ್ದೀರಿ? ಎಂಬ ಅಂಕಿ ಅಂಶ ಮಂಡಿಸಿ.
ನಮ್ಮ ಸರ್ಕಾರದ ಅವಧಿಯಲ್ಲಿ ದಲಿತ, ಹಿಂದುಳಿದ ವರ್ಗಗಳ ಮಕ್ಕಳ ವಿದ್ಯಾಭ್ಯಾಸಕ್ಕಾಗಿ 1,471 ವಿದ್ಯಾರ್ಥಿನಿಲಯ, ವಸತಿ ಶಾಲೆಗಳನ್ನು ಕಟ್ಟಿದ್ದೆವು. 15 ಲಕ್ಷ ಮನೆಗಳನ್ನು ನಿರ್ಮಿಸಿದ್ದೆವು. ಅಸಂಖ್ಯಾತರಿಗೆ ಗಂಗಾ ಕಲ್ಯಾಣ ಯೋಜನೆಯಡಿ ಕೊಳವೆ ಬಾವಿ ಕೊರೆಸಿ ವಿದ್ಯುತ್ ಸಂಪರ್ಕ ನೀಡಿದ್ದೆವು. ಬಿಜೆಪಿ ಕೊಡುಗೆ ಏನು?
ನಮ್ಮ ಸರ್ಕಾರದ ಅವಧಿಯಲ್ಲಿ ದಲಿತ, ಹಿಂದುಳಿದ ವರ್ಗಗಳ ಮಕ್ಕಳ ವಿದ್ಯಾಭ್ಯಾಸಕ್ಕಾಗಿ 1,471 ವಿದ್ಯಾರ್ಥಿನಿಲಯ, ವಸತಿ ಶಾಲೆಗಳನ್ನು ಕಟ್ಟಿದ್ದೆವು. 15 ಲಕ್ಷ ಮನೆಗಳನ್ನು ನಿರ್ಮಿಸಿದ್ದೆವು.
ಅಸಂಖ್ಯಾತರಿಗೆ ಗಂಗಾ ಕಲ್ಯಾಣ ಯೋಜನೆಯಡಿ ಕೊಳವೆ ಬಾವಿ ಕೊರೆಸಿ ವಿದ್ಯುತ್ ಸಂಪರ್ಕ ನೀಡಿದ್ದೆವು. @BJP4Karnataka ಕೊಡುಗೆ ಏನು?8/10#ಜನಪೀಡಕಯಾತ್ರೆ— Siddaramaiah (@siddaramaiah) October 13, 2022
ನಾನು ಅಂಕಿ ಅಂಶಗಳ ಮೂಲಕ ಚರ್ಚೆಗೆ ಸಿದ್ಧನಿದ್ದೇನೆ. ಬಿಜೆಪಿ ಅವರೂ ಅಂಕಿಅಂಶಗಳೊಂದಿಗೆ ಚರ್ಚೆಗೆ ಬರಲಿ. ಅದು ಬಿಟ್ಟು ಉತ್ತರಕುಮಾರರಂತೆ, ವಿದೂಷಕರಂತೆ ವರ್ತಿಸುವುದನ್ನು ನಿಲ್ಲಿಸಿ. ನಿಮ್ಮ ಸುಳ್ಳು ಭಾಷಣಗಳಿಗೆ ಮರುಳಾಗಿ ಜನ ಚಪ್ಪಾಳೆ ತಟ್ಟುವ ಕಾಲ ಮುಗಿದುಹೋಗಿದೆ ಎಂದು ಬರೆದುಕೊಂಡಿದ್ದಾರೆ.








