ಚಾಮುಂಡೇಶ್ವರಿ ಕ್ಷೇತ್ರದಿಂದ ಸ್ಪರ್ದಿಸಲ್ಲ ಸಿದ್ದರಾಮಯ್ಯ ಸ್ಪಷ್ಟನೆ…
ಚಾಮುಂಡೇಶ್ವರಿ ಕ್ಷೇತ್ರದಿಂದ ನಾನು ಮುಂದಿನ ಭಾರಿ ಸ್ಪರ್ದಿಸುವುದಿಲ್ಲ. 2023ರ ವಿಧಾನಸಭಾ ಚುನಾವಣೆಯೇ ನನ್ನ ಕೊನೆಯ ಚುನಾವಣೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮೈಸೂರಿನಲ್ಲಿ ಘೋಷಿಸಿದ್ದಾರೆ.
ಚಾಮುಂಡೇಶ್ವರಿ ಕ್ಷೇತ್ರ ನನ್ನನ್ನು ಸೋಲಿಸಿದೆ, ಗೆಲ್ಲಿಸಿಯೂ ಇದೆ. ಸೋಲು-ಗೆಲುವನ್ನು ಸಮಚಿತ್ತದಿಂದ ಸ್ವೀಕರಿಸುತ್ತೇನೆ. ಆದ್ರೇ 2023ರ ವಿಧಾನಸಭಾ ಚುನಾವಣೆಯಲ್ಲಿ ಚಾಮುಂಡೇಶ್ವರಿ ಕ್ಷೇತ್ರದಿಂದ ಸ್ಪರ್ಧಿಸೋದಿಲ್ಲ. ಎಲ್ಲಿ ಸ್ಪರ್ಧಿಸಬೇಕು ಎಂಬುದನ್ನು ನಿರ್ಧರಿಸಿಲ್ಲ. ಕೋಲಾರ, ಹುಣಸೂರು, ವರುಣಾ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಸ್ಪರ್ಧಿಸುವಂತೆ ಮನವಿ ಮಾಡಲಾಗಿದೆ ಎಂಬುದಾಗಿ ಹೇಳಿದರು.
2023ರ ವಿಧಾನಸಭಾ ಚುನಾವಣೆಯಲ್ಲಿ ಮಾತ್ರವೇ ಸ್ಪರ್ಧಿಸಲಿದ್ದಾರೆ. ಇದು ನನ್ನ ಕೊನೆಯ ಚುನಾವಣೆಯಾಗಿದೆ. ಆ ಬಳಿಕ ಯಾವುದೇ ಚುನಾವಣೆಯಲ್ಲಿ ಸ್ಪರ್ಧಿಸೋದಿಲ್ಲ ಎಂದು ತಿಳಿಸಿದರು. ಆ ಬಳಿಕ ಯಾವುದೇ ಚುನಾವಣೆಯಲ್ಲಿ ನಿಲ್ಲೋದಿಲ್ಲ. ಯಾವುದೇ ಹುದ್ದೆ ಕೊಟ್ಟರೂ ನಾನು ಸ್ವೀಕರಿಸೋದಿಲ್ಲ. ರಾಜ್ಯಸಭೆ ಸೇರಿ ಯಾವುದೇ ಸದಸ್ಯತ್ವ ನೀಡಿದ್ರೂ ಸ್ವೀಕರಿಸೋದಿಲ್ಲ ಎಂಬುದಾಗಿ ಘೋಷಣೆ ಮಾಡಿದರು.
Siddaramaiah clarifies that he will not contest from Chamundeshwari constituency…