ಮೈಸೂರು : ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರ ಮನೆಯ ಮನೆ ಸಿಐಬಿ ದಾಳಿ ನಡೆಸಿದ್ದು, ಇದು ರಾಜಕೀಯ ಪ್ರೇರಿತ ಎಂದು ಕಾಂಗ್ರೆಸ್ ನಾಯಕರು ಆರೋಪಿಸುತ್ತಿದ್ದರು.
ಈ ಬಗ್ಗೆ ಮೈಸೂರಿನಲ್ಲಿ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ ಸುಧಾಕರ್ ಪ್ರತಿಕ್ರಿಯೆ ನೀಡಿದ್ದು, ವಿಪಕ್ಷ ನಾಯಕ ಸಿದ್ದರಾಮಯ್ಯ ಅವರಿಗಿಂತ ಡಿ.ಕೆ.ಶಿವಕುಮಾರ್ ದೊಡ್ಡ ನಾಯಕ ಅಲ್ಲ.
ಇದನ್ನೂ ಓದಿ :
ರಾಜಕೀಯ ಪ್ರೇರಿತ ದಾಳಿ ಆಗಿದ್ದರೆ ಸಿದ್ದರಾಮಯ್ಯವರನ್ನು ಟಾರ್ಗೆಟ್ ಮಾಡಬೇಕಿತ್ತು ಅಲ್ವಾ ಎಂದು ಪ್ರಶ್ನೆ ಮಾಡಿದ್ದಾರೆ.
ಡಿ.ಕೆ.ಶಿವಕುಮಾರ್ ಅವರು ಪರಿಶುದ್ಧ ಎಂಬುದನ್ನು ಸಾಬೀತುಪಡಿಸಲಿ, ಅವಕಾಶ, ರಾಜಕೀಯ ಪ್ರೇರಿತ ದಾಳಿಯಾಗಿದ್ರೆ, ಕಾಂಗ್ರೆಸ್ ನಲ್ಲಿ ಅವರಿಗಿಂತ ದೊಡ್ಡ ನಾಯಕರಿದ್ದಾರೆ.
ದಾಳಿಯ ಬಗ್ಗೆ ಹೆಚ್ಚು ಮಾಹಿತಿ ನನಗಿಲ್ಲ. ತನಿಖೆ ಪಾರದರ್ಶಕವಾಗಿ ನಡೆಯುತ್ತಿದ್ದು, ಡಿ.ಕೆ.ಶಿವಕುಮಾರ್ ಅವರ ಪ್ರಮಾಣಿಕತೆ ತಿಳಿದು ಬರಲಿದೆ ಎಂದರು.