Siddaramiah: ಕೋಳಿ ಸಾರು ತಿಂದು ದೇವಸ್ಥಾನಕ್ಕೆ ಸಿದ್ದರಾಮಯ್ಯ ಭೇಟಿ ?
ಕೊಡಗು : ವಿಪಕ್ಷ ನಾಯಕ ಸಿದ್ದರಾಮಯ್ಯ ನಾಟಿ ಕೋಳಿ ಸಾರು ತಿಂದು ದೇಗುಲಕ್ಕೆ ಭೇಟಿ ನೀಡಿದ್ದಾರೆ ಎನ್ನಲಾದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.
ಮಡಿಕೇರಿಯ ಅತಿಥಿ ಗೃಹದಲ್ಲಿ ಮಧ್ಯಾಹ್ನ ಕೋಳಿ ಸಾರು ಸವಿದಿದ್ದ ಸಿದ್ದರಾಮಯ್ಯ, ಮಧ್ಯಾಹ್ನದ ಬಳಿಕ ಕೊಡ್ಲಿಪೇಟೆಯ ಬಸವೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ ಎನ್ನಲಾಗುತ್ತಿದೆ.
ಈ ಬಗ್ಗೆ ಮಾಜಿ ಸ್ಪೀಕರ್, ಬಿಜೆಪಿ ಶಾಸಕ ಕೆ ಜಿ ಬೋಪಯ್ಯ ಮಾತನಾಡಿದ್ದು, ಹಿಂದೂಗಳ ನಂಬಿಕೆ ಭಾವನೆಗೆ ನೋವು ಮಾಡುವುದೇ ಸಿದ್ದರಾಮಯ್ಯರ ಕೆಲಸ.
![siddaramaiah-got-into-another-controversy saaksha tv](http://saakshatv.com/wp-content/uploads/2022/08/sidd-1.jpg)
ಸಿದ್ದರಾಮಯ್ಯರ ನಡೆಯಿಂದ ನನ್ನ ಮನಸಿಗಂತೂ ತುಂಬಾ ನೋವಾಗಿದೆ. ಅವರು ಆತ್ಮ ಮುಟ್ಟಿ ಯೋಚನೆ ಮಾಡಿಕೊಳ್ಳಬೇಕು ಎಂದಿದ್ದಾರೆ.
ಕಾಂಗ್ರೆಸ್ನವರಿಗೆ ಯಾವ ಸಂಸ್ಕೃತಿಯೂ ಇಲ್ಲ, ದೇವಸ್ಥಾನ ಸಂಸ್ಕೃತಿಯಂತೂ ಇಲ್ಲ. ಧರ್ಮಸ್ಥಳಕ್ಕೆ ಮೀನು ಮಾಂಸ ತಿಂದುಕೊಂಡು ಹೋಗುತ್ತಾರೆ.
ಮೊನ್ನೆ ಮಡಿಕೇರಿಗೆ ಬಂದಾಗ ಕೋಳಿ ಸಾರು ತಿಂದು ದೇವಸ್ಥಾನಕ್ಕೆ ಹೋಗಿದ್ದಾರೆ. ಮಡಿಕೇರಿಯಲ್ಲಿ ಮಾಂಸ ತಿಂದು ಅಂದೇ ಕೊಡ್ಲಿಪೇಟೆ ಬಸವೇಶ್ವರ ದೇವಾಲಯಕ್ಕೆ ಹೋಗಿದ್ದಾರೆ. ಇವರ ದೇವರ ಮೇಲೆ ಭಕ್ತಿ ಇದ್ಯಾ..? ಇವರೆಲ್ಲಾ ದೇವಸ್ಥಾನಕ್ಕೆ ಯಾಕೆ ಹೋಗೋದು ಎಂದು ಪ್ರಶ್ನಿಸಿದ್ದಾರೆ.